ಬೀದರ್ | ಸಂವಿಧಾನದಲ್ಲಿ ವಚನಗಳ ತತ್ವ ಸಿದ್ಧಾಂತ ಅಡಕವಾಗಿದೆ: ಪ್ರೊ. ಮೀನಾಕ್ಷಿ ಬಾಳಿ

Date:

ಹನ್ನೆರಡನೇ ಶತಮಾನದಲ್ಲಿ ಕಲ್ಯಾಣ ನೆಲವು ವಚನಗಳ ಮೂಲಕ ಇಡೀ ಜಗತ್ತಿಗೆ ಸಾಂಸ್ಕೃತಿಕ ಅಸ್ಮಿತೆಯೊಂದನ್ನು ಕಟ್ಟಿ ಕೊಟ್ಟಿದೆ. ವಚನಗಳು ಮತ್ತು ಸಂವಿಧಾನದ ಆಶಯ, ತತ್ವಗಳಲ್ಲಿ ಹೆಚ್ಚು ಸಾಮ್ಯತೆಯಿದೆ. ಸಂವಿಧಾನದಲ್ಲಿ ವಚನಗಳ ತತ್ವ ಸಿದ್ಧಾಂತ ಅಡಕವಾಗಿದೆ ಎಂದು ಹಿರಿಯ ಚಿಂತಕಿ ಪ್ರೊ. ಮೀನಾಕ್ಷಿ ಬಾಳಿ ಹೇಳಿದರು.

ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ಬಸವೇಶ್ವರ ದೇವಸ್ಥಾನ ಶಿಕ್ಷಣ ಸಂಸ್ಥೆ ಆಯೋಜಿಸಿದ್ದ ‘ಶಿಕ್ಷಣ, ಸಾಹಿತ್ಯ ಮತ್ತು ಸಮಾಜ’ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ಮಹಿಳೆಯರನ್ನು, ನಿರ್ಲಕ್ಷಿತರನ್ನು, ತಳ ಸಮುದಾಯದವರನ್ನು, ದಲಿತರನ್ನು ಸಾಂಸ್ಕೃತಿಕವಾಗಿ ಮುನ್ನೆಲೆಗೆ ತಂದು ಸಾಮಾಜಿಕ ಪ್ರಾಧ್ಯಾನತ್ಯ ಒದಗಿಸಿದ ಶ್ರೇಯಸ್ಸು ಶರಣರಿಗೆ ಸಲ್ಲುತ್ತದೆ. ಬಹುಸಂಸ್ಕೃತಿಯ , ಬಹುಭಾಷಿಕತೆಯ, ಬಹು ಆಯಾಮದ ನೆಲೆಯನ್ನು ಒದಗಿಸಿದ ನೆಲ ಶರಣರ ಕಲ್ಯಾಣ” ಎಂದರು.

“ಸಂವಿಧಾನ ಕರಡು ರಚನೆ ಸಂದರ್ಭದಲ್ಲಿ ದೇಶದ ಬಹು ಸಂಸ್ಕೃತಿ, ಭೌಗೋಳಿಕತೆ, ಬಹುಭಾಷಿಕತೆಯನ್ನು ಗ್ರಹಿಸಿಯೇ ಸಂವಿಧಾನ ರಚನೆ ಮಾಡಲಾಗಿದೆ. ಸಂವಿಧಾನದ ಸಾಂಸ್ಕೃತಿಕ, ಸಾಮಾಜಿಕ, ರಾಜಕೀಯ ಹೀಗೆ ಹಲವು ನೆಲೆಗಳಲ್ಲಿ ಅಧ್ಯಯನ ಮಾಡುವ ಮೂಲಕ ದೇಶದ ಸಂಸ್ಕೃತಿ ಅರಿಯಬೇಕಿದೆ. ವಚನಗಳ ಆಳದ ಓದಿನಿಂದ ನಮ್ಮೊಳಗಿನ ಒಡಕು, ಕ್ರೌರ್ಯ, ಸಿನಿಕತೆ, ಸಣ್ಣತನ, ನೀಚತನದಿಂದ ಬಿಡುಗಡೆಗೊಳ್ಳಬೇಕಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದಲ್ಲಿ ಅಕ್ಕಲಕೋಟದ ಸಿ.ಬಿ ಖೇಡಗಿ ಬಸವೇಶ್ವರ ಕಾಲೇಜು ಪ್ರಾಚಾರ್ಯ ಡಾ. ಗುರುಲಿಂಗಪ್ಪ ಧಬಾಲೆ, ಬಸವಕಲ್ಯಾಣ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಉಪನ್ಯಾಸಕ ಡಾ. ಚಿತ್ರಶೇಖರ ಚಿರಳ್ಳಿ, ಉಪನ್ಯಾಸಕ ಡಾ. ಮಲ್ಲಿಕಾರ್ಜುನ ಬಿರಾದಾರ, ಹುಲಸೂರ ಎಂ.ಕೆ.ಕೆ.ಪಿ ಸರ್ಕಾರಿ ಪದವಿ ಕಾಲೇಜು ಉಪನ್ಯಾಸಕ ಡಾ ಸಂತೋಷ ಸಿ. ಎಂ, ಉಪನ್ಯಾಸಕ ಅಂಬರೀಶ್ ಭೀಮಾಣಿ, ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಡಾ ಮಲ್ಲಿಕಾರ್ಜುನ ಲಕ್ಕಶೆಟ್ಟಿ, ಕಾಲೇಜು ಪ್ರಾಚಾರ್ಯ ಡಾ ಭೀಮಾಶಂಕರ ಬಿರಾದಾರ ಮಾತನಾಡಿದರು.

ಕಾರ್ಯಕ್ರಮದಲ್ಲಿ ಡಾ. ಶಾಂತಲಾ ಪಾಟೀಲ, ಶ್ರೀನಿವಾಸ ಉಮಾಪುರೆ, ಶಾಂತಲಿಂಗ ಧಬಾಲೆ, ವಿವೇಕಾನಂದ ಶಿಂದೆ, ಗಂಗಾಧರ ಸಾಲಿಮಠ, ರೋಷನ್ ಬಿ, ಸೌಮ್ಯಾ ಗೌಡ, ಗುರುದೇವಿ ಕಿಚಡೆ, ಸಚಿನ್ ಬಿಡವೆ, ನೀಲಮ್ಮ ಮೇತ್ರೆ, ಶಿವಾನಿರೆಡ್ಡಿ, ಅಶೋಕ ರೆಡ್ಡಿ, ಎಂ. ಡಿ ಜಬಿ, ಸುಷ್ಮಾ, ಸುಜಾವುದ್ದಿನ್, ಪ್ರವೀಣ್ ಬಿರಾದಾರ ಮೊದಲಾದವರಿದ್ದರು. ಡಾ. ಬಸವರಾಜ ಖಂಡಾಳೆ ನಿರೂಪಿಸಿದರು. ಸಂಗೀತಾ ಮಹಾಗಾಂವೆ ಸ್ವಾಗತಿಸಿದರು. ಜಗದೇವಿ ಜವಳಗೆ ವಂದಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...