ಬೀದರ್‌ | ಮಕ್ಕಳ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯ : ಸಿಇಓ ಗಿರೀಶ್ ಬದೋಲೆ

Date:

ಮಕ್ಕಳ ಹಕ್ಕುಗಳನ್ನು ರಕ್ಷಿಸುವುದು ಕೇವಲ ಸರ್ಕಾರದ ಜವಾಬ್ದಾರಿ ಮಾತ್ರವಲ್ಲ, ಪ್ರತಿಯೊಬ್ಬ ನಾಗರಿಕರ ಕರ್ತವ್ಯ ಆಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ್ ಬದೋಲೆ ಹೇಳಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಜಿಲ್ಲಾ ಪಂಚಾಯತ್ ಬೀದರ ಹಾಗೂ ತಾಲೂಕ ಪಂಚಾಯತ್ ಬೀದರ ಸಹಯೋಗದಲ್ಲಿ ತಾಲೂಕಿನ ಶ್ರೀಮಂಡಲದಲ್ಲಿ ಆಯೋಜಿಸಿದ ಮಕ್ಕಳ ಹಕ್ಕುಗಳ ವಿಶೇಷ ಗ್ರಾಮ ಸಭೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ʼಮಕ್ಕಳ ಸಮಸ್ಯೆಗಳನ್ನು ಆಲಿಸಿ ಅದಕ್ಕೆ ಪರಿಹಾರ ಒದಗಿಸುವ ಕೆಲಸವನ್ನು ಅಧಿಕಾರಿಗಳು ಸರಿಯಾಗಿ ನಿರ್ವಹಿಸಬೇಕು. ಮನರೇಗಾ ಅಡಿಯಲ್ಲಿ ಶಾಲೆಗೆ ಕಾಂಪೌಂಡ್, ಶೌಚಾಲಯ, ಆಟದ ಮೈದಾನ ಸೇರಿದಂತೆ ಇತರೆ ಮೂಲಭೂತ ಸೌಕರ್ಯಗಳನ್ನು ಪಡೆಯಬಹುದುʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 12 12 at 4.35.01 PM
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ್ ಬದೋಲೆ ಅವರು ಮಕ್ಕಳ ಹಕ್ಕುಗಳ ಗ್ರಾಮ ಸಭೆ ಉದ್ಘಾಟಿಸಿ ಮಾತನಾಡಿದರು.

ಬೀದರ ತಾಲೂಕ ಪಂಚಾಯತ್ ಇಒ ಮಾಣಿಕರಾವ್ ಪಾಟೀಲ್ ಮಾತನಾಡಿ, ʼಮಕ್ಕಳ ಸುರಕ್ಷತೆ, ಹಕ್ಕುಗಳಿಗಾಗಿ ಗ್ರಾಮ ಮಟ್ಟದಲ್ಲಿ ಜಾಗೃತಿ ಅನಿವಾರ್ಯ. ಮಕ್ಕಳ ಸಮಸ್ಯೆ ಆಲಿಸಿ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಮಕ್ಕಳ ಗ್ರಾಮ ಸಭೆ ಆಯೋಜಿಸಲಾಗಿದೆʼ ಎಂದರು.

ಅರಿವು ಗ್ರಂಥಾಲಯ ಕೇಂದ್ರ ಉದ್ಘಾಟನೆ :

ಗ್ರಂಥಾಲಯ ಎನ್ನುವುದು ಕೇವಲ ಪುಸ್ತಕಗಳ ಕಟ್ಟಡವಲ್ಲ. ಅದು ಜ್ಞಾನದ ಕೇಂದ್ರ. ಯುವಕರ ಓದು ಮತ್ತು ಅಧ್ಯಯನ ಚಟುವಟಿಕೆಗೆ ಹೊಸ ದಿಕ್ಕು ನೀಡುವ ಸಾಮರ್ಥ್ಯ ಇದಕ್ಕಿದೆ. ಪ್ರತಿಯೊಬ್ಬರು ಗ್ರಂಥಾಲಯವನ್ನು ತಮ್ಮ ಬೆಳವಣಿಗೆಯ ಕೇಂದ್ರವನ್ನಾಗಿ ಮಾಡಿಕೊಳ್ಳಬೇಕೆಂದು ಜಿಲ್ಲಾ ಪಂಚಾಯತ್ ಸಿಇಒ ಡಾ. ಗಿರೀಶ್ ಬದೋಲೆ ಹೇಳಿದರು.

ಶ್ರೀಮಂಡಲದಲ್ಲಿ ಅರಿವು ಗ್ರಂಥಾಲಯ ಕೇಂದ್ರ ಹಾಗೂ ಪುಸ್ತಕ ಗೂಡಿಗೆ ಚಾಲನೆ ನೀಡಿ ಮಾತನಾಡಿದ ಅವರು, ʼಈ ಗ್ರಂಥಾಲಯದಲ್ಲಿ ಬಗೆ ಬಗೆಯ ಪುಸ್ತಕ ಇಡಲಾಗಿದ್ದು, ಗ್ರಾಮಸ್ಥರು ಇದರ ಲಾಭ ಪಡೆಯಬೇಕು. ಜೊತೆಗೆ ಪುಸ್ತಕ ಗೂಡು ಸಹ ಸ್ಥಾಪಿಸಲಾಗಿದ್ದು, ಅದನ್ನು ಸಹ ಸದುಪಯೋಗ ಪಡೆದುಕೊಳ್ಳಬೇಕುʼ ಎಂದರು.

ಇದನ್ನೂ ಓದಿ : ಬೀದರ್‌ | ಕಲ್ಯಾಣ ಕರ್ನಾಟಕದಲ್ಲಿ 20,462 ಶಿಕ್ಷಕರ ಹುದ್ದೆ ಖಾಲಿ

ಮನರೇಗಾ ಸಹಾಯಕ ನಿರ್ದೇಶಕ ಸುದೇಶ್ ಕೊಡ್ದೆ, ಶ್ರೀಮಂಡಲ ಗ್ರಾಮ ಪಂಚಾಯತ್ ಅಧ್ಯಕ್ಷ ವಿ.ಮಂಜುನಾಥ್, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶರತಕುಮಾರ ಅಭಿಮಾನ ಸೇರಿದಂತೆ ಗ್ರಾಮ ಪಂಚಾಯತ್ ಸದಸ್ಯರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...