ಬೀದರ್‌ | ಮಕ್ಕಳ ಹಕ್ಕುಗಳ ರಕ್ಷಣೆ ನಮ್ಮೆಲ್ಲರ ಕರ್ತವ್ಯ : ಸಿಇಓ ಗಿರೀಶ್ ಬದೋಲೆ

Date:

ಮಕ್ಕಳ ಹಕ್ಕುಗಳನ್ನು ರಕ್ಷಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ್ ಬದೋಲೆ ಅವರು ತಿಳಿಸಿದರು.

ಶುಕ್ರವಾರ ನಗರದ ಬಾಲ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಬಾಲ ಭವನ ಸಮಿತಿ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಟ್ಟದ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ʼಮಕ್ಕಳಿಗೆ ಶಿಕ್ಷಣ, ಆರೋಗ್ಯ, ರಕ್ಷಣೆ, ಮೂಲಭೂತ ಸೌಕರ್ಯಗಳು ಒದಗಿಸುವಿಕೆ ಸೇರಿದಂತೆ ಅವರ ಎಲ್ಲಾ ಹಕ್ಕುಗಳನ್ನು ಕಾಪಾಡುವುದು ಹಾಗೂ ಉತ್ತಮ ಭವಿಷ್ಯ ರೂಪಿಸುವುದು ಬಹಳ ಮುಖ್ಯವಾಗಿದೆ. ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಜನ್ಮದಿನವನ್ನು ನಾವು ಮಕ್ಕಳ ದಿನಾಚರಣೆ ಎಂದು ಆಚರಣೆ ಮಾಡುತ್ತೆವೆ. ಅವರಿಗೆ ಮಕ್ಕಳ ಮೇಲೆ ಅಗಾಧವಾದ ಪ್ರೀತಿ ಇತ್ತುʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಮಕ್ಕಳು ದೇಶದ ಮುಂದಿನ ಭವಿಷ್ಯ ಅವರಾಗಿದ್ದಾರೆ ಹಾಗೂ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗಾಗಿ ಸರ್ಕಾರ ಹಲವಾರು ಕಾರ್ಯಕ್ರಮಗಳನ್ನು ಹಾಕಿಕೊಂಡಿದೆ. ಇಂದಿನ ಮಕ್ಕಳು ಮುಂದೆ ಐಎಎಸ್, ಐಪಿಎಸ್, ವಿಜ್ಞಾನಿಗಳು, ವೈದ್ಯರು , ಶಿಕ್ಷಕರು , ಕ್ರೀಡಾಪಟುಗಳು, ಉದ್ಯಮಿಗಳು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ವಿವಿಧ ಹುದ್ದೆಗಳು, ಸ್ಥಾನಗಳು ಅಲಂಕಾರಿಸುವರು ಆಗಿದ್ದಾರೆ. ಮನೆಯೆ ಮೊದಲ ಪಾಠ ಶಾಲೆ ಆಗಿರುವುದರಿಂದ ಕುಟುಂಬದಿಂದ ಬಾಲ್ಯವನ್ನು ಕಾಪಾಡುವುದು, ಉತ್ತಮ ಸಂಸ್ಕಾರ, ಶಿಕ್ಷಣ, ಮೌಲ್ಯಗಳನ್ನು ನೀಡುವುದರ ಮೂಲಕ ದೇಶದ ಉತ್ತಮ ಪ್ರಜೆಯಾಗುವಂತೆ ಮಾಡುವುದು ಕುಟುಂಬ ಕರ್ತವ್ಯ ಕೂಡ ಆಗಿದೆʼ ಎಂದರು.

ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ಇದನ್ನೂ ಓದಿ : ಬೀದರ್‌ | ನ.29, 30ರಂದು ಅನುಭವ ಮಂಟಪ ಉತ್ಸವ : ಸಾಧಕರಿಗೆ ವಿವಿಧ ಪ್ರಶಸ್ತಿ ಘೋಷಣೆ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಶ್ರೀಧರ ಎಂ.ಎಸ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರೂಪಾ ಕೋಟೆಗೌಡರ್, ಶಿಶು ಅಭಿವೃದ್ಧಿ ಅಧಿಕಾರಿ ಶಾರದಾ ಕಲ್ಮಲಕರ್, ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಸುಭಾಷ್ ರತ್ನ, ಜಿಲ್ಲಾ ನಿರುಪಣಾಧಿಕಾರಿ ಶ್ರೀಕಾಂತ ಸೇರಿದಂತೆ ಇತರೆ ಅಧಿಕಾರಿಗಳು ಹಾಗೂ ಮಕ್ಕಳ ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...