ಬೀದರ್‌ | ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಪ್ರತಿಭಟನೆ

Date:

ಕಾಲೇಜು ಶಿಕ್ಷಣ ಇಲಾಖೆ ಅಡಿಯಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಸೇವಾ ಹಿರಿತನ ಹಾಗೂ ಮಾನವೀಯತೆ ದೃಷ್ಟಿಯಿಂದ ಸೇವೆಯಲ್ಲಿ ಮುಂದುವರಿಯಲು ಅವಕಾಶ ನೀಡಬೇಕೆಂದು ಒತ್ತಾಯಿಸಿ ರಾಜ್ಯ ಸರಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿ ಜಿಲ್ಲಾ ಘಟಕದಿಂದ ಸೋಮವಾರ ಅಂಬೇಡ್ಕರ್‌ ವೃತ್ತ ಸಮೀಪದ ಜಿಲ್ಲಾ ಉಸ್ತುವಾರಿ ಸಚಿವರ ಕಾರ್ಯಾಲಯ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.

ಈ ಕುರಿತು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್‌ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರ ಹೆಸರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ ಅವರಿಗೆ ಸಲ್ಲಿಸಿದರು.

ರಾಜ್ಯದ 432 ಸರ್ಕಾರಿ ಪದವಿ ಕಾಲೇಜುಗಳಲ್ಲಿ 11 ಸಾವಿರ ಅತಿಥಿ ಉಪನ್ಯಾಸಕರು ಕಳೆದ ಒಂದು ದಶಕದಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಅವರಲ್ಲಿ 5,623 ಉಪನ್ಯಾಸಕರು ಯುಜಿಸಿ ಅರ್ಹತೆ ಹೊಂದಿದ್ದರೆ, 5,353 ಉಪನ್ಯಾಸಕರ ಯುಜಿಸಿ ಅರ್ಹತೆ ಇಲ್ಲ. ಯುಜಿಸಿ ಅರ್ಹತೆ ಇಲ್ಲದ ಅತಿಥಿ ಉಪನ್ಯಾಸಕರನ್ನು ಸೇವೆಯಿಂದ ತೆಗೆಯಲು ಉನ್ನತ ಶಿಕ್ಷಣ ಇಲಾಖೆ ನಿರ್ಧಾರ ತೆಗೆದುಕೊಂಡರೆ ಉಪನ್ಯಾಸಕರ ಬದುಕು ಬೀದಿಗೆ ಬರುತ್ತದೆ ಎಂದು ಪ್ರತಿಭಟನಾ ನಿರತರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹತ್ತಾರು ವರ್ಷಗಳಿಂದ ನಿರಂತರ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಸದ್ಯ ಅನ್ಯಾಯವಾಗಿದ್ದು. ಯುಜಿಸಿ ವಿದ್ಯಾರ್ಹತೆ, ಸೇವಾ ಹಿರಿತನ, ಮಾನವೀಯತೆಯಿಂದ ಸೇವೆಯಲ್ಲಿ ಮುಂದುವರಿಯಲು ಅವಕಾಶ ನೀಡಬೇಕುʼ ಎಂದು ಉಪನ್ಯಾಸಕರು ಆಗ್ರಹಿಸಿದರು.

1004394283

ʼಯುಜಿಸಿ ಅರ್ಹತೆ ಪಡೆದಿಲ್ಲಎಂಬ ಕಾರಣಕ್ಕೆ ಯಾವುದೆ ಸವಲತ್ತುಗಳನ್ನು ಪಡೆಯದೆ ಅತಿಥಿ ಉಪನ್ಯಾಸಕರು ತಾತ್ಕಾಲಿಕ ನೌಕರರಾಗಿ ಮುಂದುವರಿದಿದ್ದಾರೆ. ಶೈಕ್ಷಣಿಕ ವರ್ಷಗಳಲ್ಲಿ ಕೇವಲ 10 ತಿಂಗಳಿಗೆ ಮಾತ್ರ ಕನಿಷ್ಠ ಗೌರವಧನ ನೀಡಲಾಗುತ್ತಿದೆ. ನ್ಯಾಯಾಲಯ ಒಬ್ಬ ತಾತ್ಕಾಲಿಕ ನೌಕರನ ಸ್ಥಾನಕ್ಕೆ ಮತ್ತೊಬ್ಬ ತಾತ್ಕಾಲಿಕ ನೌಕರನನ್ನು ಸ್ಥಳಾಂತರಿಸಲು ಅವಕಾಶ ಇಲ್ಲಎಂದು ತೀರ್ಪು ನೀಡಿದೆ. ಅತಿಥಿ ಉಪನ್ಯಾಸಕರು ತಮ್ಮನ್ನು ಸೇವೆಯಿಂದ ತೆರವು ಮಾಡದಂತೆ ತಡೆಯಾಜ್ಞೆ ತಂದಿದ್ದಾರೆʼ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ರಾಜ್ಯದ ಸರಕಾರಿ ಪದವಿ ಕಾಲೇಜುಗಳು ಶೇ 70 ರಷ್ಟು ಅತಿಥಿ ಉಪನ್ಯಾಸಕರ ಸೇವೆ ಅವಲಂಬಿಸಿವೆ. ಹೀಗಾಗಿ ಕಳೆದ ಒಂದು ತಿಂಗಳಿಂದ ವಿದ್ಯಾರ್ಥಿಗಳಿಗೆ ಪಾಠ ಪ್ರವಚನ ನಡೆಯದೆ ವಿದ್ಯಾರ್ಥಿಗಳಲ್ಲಿ ಆತಂಕ ಮನೆ ಮಾಡಿದೆ. ಇನ್ನು ವೃತ್ತಿ ಮೇಲೆ ಅವಲಂಬಿತರಾದ ಅತಿಥಿ ಉಪನ್ಯಾಸಕರ ಬದುಕು ಅತಂತ್ರವಾಗಿದೆ. ಸರಕಾರ 2025-26ನೇ ಸಾಲಿನ ನೇಮಕಾತಿ ಬಿಕ್ಕಟ್ಟನ್ನು ತಾರತಮ್ಯ ಮಾಡದೆ ಪರಿಹರಿಸಬೇಕೆಂದು ಆಗ್ರಹಿಸಿದರು.

ಇದನ್ನೂ ಓದಿ : ಮಾಜಿ ಶಾಸಕ ಗುಂಡಪ್ಪ ವಕೀಲ್ ಡಿಜಿಟಲ್ ಅರೆಸ್ಟ್‌, 30 ಲಕ್ಷ ರೂ. ದೋಚಿದ ಆನ್‌ಲೈನ್ ವಂಚಕರು

ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿಯ ಜಿಲ್ಲಾಧ್ಯಕ್ಷ ಚಂದ್ರಕಾಂತ ನಾರಾಯಣಪುರೆ ಸೇರಿದಂತೆ ಸಂಘಟನೆಯ ಪ್ರಮುಖರಾದ ಬಂಡೆಪಾ ಬಾಲಕುಂದೆ, ಏಕನಾಥ, ಮಲ್ಲಿಕಾರ್ಜುನ ತಿರಲಾಪುರೆ, ಜಾವೀದ್‌, ಶಾಮಸುಂದರ, ಬಾಬು, ಅರುಣ್, ಗಂಗಾಧರ, ಪ್ರಾಣೇಶ್, ಲಕ್ಷ್ಮಣ ಸಾವಳೆ, ದೇವರಾಜ‌ , ಲಕ್ಷ್ಮಣ ಟೋಕರೆ, ಮಲ್ಲಿಕಾರ್ಜುನ ಬಿರಾದರ, ವಿಶ್ವನಾಥ, ಮಿಲಿಂದ್, ಕೀರ್ತಿ, ಅಂಬಿಕಾ, ಪ್ರಮೀಳಾ, ಈಶ್ವರಿ, ಅಶ್ವಿನಿ ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...