ಬೀದರ್ ಜಿಲ್ಲಾ ಜಮಾಅತೆ ಇಸ್ಲಾಮಿ ಹಿಂದ್ ಸ್ಥಳೀಯ ಮಹಿಳಾ ವಿಭಾಗದ ವತಿಯಿಂದ ಡಿ.7 ರಂದು ಬೆಳಿಗ್ಗೆ 11ಕ್ಕೆ ಬೀದರ್ ನಗರದ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗ ಮಂದಿರದಲ್ಲಿ ಮಹಿಳೆಯರಿಗಾಗಿ ಕುರ್ಆನ್ ಪ್ರವಚನ ಹಮ್ಮಿಕೊಳ್ಳಲಾಗಿದೆ.
‘ಶಾಂತಿ ಮತ್ತು ಸಮೃದ್ಧಿ ಕುರ್ಆನಿನ ಬೆಳಕಿನಲ್ಲಿ’ ಕುರಿತು ಅನುಪಮ ಮಹಿಳಾ ಮಾಸಿಕ ಉಪ ಸಂಪಾದಕಿ ಸಬೀಹಾ ಫಾತಿಮಾ ಪ್ರವಚನ ನೀಡಲಿದ್ದಾರೆ. ಬಸವ ಮಂಟಪದ ಮಾತೆ ಸತ್ಯದೇವಿ, ಜಮಾಅತೆ ಇಸ್ಲಾಮಿ ಹಿಂದ್ ರಾಜ್ಯ ಮಹಿಳಾ ವಿಭಾಗದ ಕಾರ್ಯದರ್ಶಿ ತಷ್ಕೀಲಾ ಖಾನಂ ಹಾಗೂ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಪ್ರತಿಮಾ ಬಜೆನ್ಜಿ ದಿವ್ಯ ಉಪಸ್ಥಿತಿ ವಹಿಸಲಿದ್ದಾರೆ.
ಕಾಂಗ್ರೆಸ್ ರಾಜ್ಯ ಮಹಿಳಾ ವಿಭಾಗದ ಉಪಾಧ್ಯಕ್ಷೆ ರಾಜಶ್ರೀ ಶ್ರೀಕಾಂತ ಸ್ವಾಮಿ, ರಾಜ್ಯ ಅಲ್ಪಸಂಖ್ಯಾತರ ಆಯೋಗದ ಸದಸ್ಯೆ ಮಂದೀಪ್ ಕೌರ್, ಮಹಾನಗರ ಪಾಲಿಕೆ ಸದಸ್ಯೆ ಚೇತನಾ ಮೋಹನ್ ಕಾಳೇಕರ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಗೀತಾ ಪಂಡಿತ ಚಿದ್ರಿ, ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹದ ನಿರ್ದೇಶಕಿ ಮೇಹರ್ ಸುಲ್ತಾನಾ, ಹಿರಿಯ ಸ್ತ್ರೀ ರೋಗ ತಜ್ಞರಾದ ಡಾ. ಶೇಖ ಸುಮಯ್ಯಾ ಕುಲ್ಸುಮ್, ಡಾ.ವಿಜಯಶ್ರೀ ಎಸ್.ಬಶೆಟ್ಟಿ ಉಪಸ್ಥಿತರಿರುವರು.
ಡಾ.ಸುಮಯ್ಯ ಫಾತಿಮಾ, ಸಾಹಿತಿ ಡಾ.ಸುನಿತಾ ಕೂಡ್ಲಿಕರ್, ಉಪನ್ಯಾಸಕಿ ವಿದ್ಯಾವತಿ ಬಲ್ಲೂರ, ವಿದ್ಯಾವತಿ ಹಿರೇಮಠ, ಲಿಂಗರಾಜ ಅಪ್ಪ ಎಂಜಿನಿಯರಿಂಗ್ ಕಾಲೇಜು ಪ್ರಾಚಾರ್ಯೆ ಡಾ. ವಿನಿತಾ ಪಾಟೀಲ, ಡಾ. ಅಮಲ್ ಷರೀಫ್, ಐಟಾ ರಾಜ್ಯ ಮಹಿಳಾ ವಿಭಾಗದ ಸಂಚಾಲಕಿ ಬಿಲ್ಕೀಸ್ ಫಾತಿಮಾ, ವಿಸ್ಡಂ ಶಿಕ್ಷಣ ಸಂಸ್ಥೆಗಳ ಸಮೂಹದ ನಿರ್ದೇಶಕಿ ಬುಶ್ರಾ ಜಮಾಲ್, ನಿವೃತ್ತ ಉಪ ಪ್ರಾಚಾರ್ಯೆ ಬುತುಲ್ ಸಯಿದ್ ಫಾತಿಮಾ, ಆರ್ಥಿಕ ಚಿಂತಕಿ ಸೌಜನ್ಯ ಶಶಿಕಾಂತ ಎಸ್.ಶೆಂಬೆಳ್ಳಿ, ಜಿಐಒ ಜಿಲ್ಲಾ ಸಂಚಾಲಕಿ ಸೈಕಾ ಸಬಾ ಹಾಗೂ ಸ್ಥಳೀಯ ಘಟಕದ ಅಧ್ಯಕ್ಷೆ ಡಾ.ಬುಶ್ರಾ ಐಮನ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
ಇದನ್ನೂ ಓದಿ : ಬೀದರ್ | 2026ರ ಜನವರಿ ಒಳಗೆ ಕಾರಂಜಾ ಸಂತ್ರಸ್ತರಿಗೆ ಪರಿಹಾರ ಹಣ ಬಿಡುಗಡೆಗೊಳಿಸಿ : ಲಕ್ಷ್ಮಣ ದಸ್ತಿ
ಇದೇ ವೇಳೆ ಕುರ್ಆನ್ ಸಂದೇಶ ಪ್ರದರ್ಶನವೂ ನಡೆಯಲಿದೆ. ಮಹಿಳೆಯರು ಪ್ರವಚನ ಕಾರ್ಯಕ್ರಮದ ಸದುಪಯೋಗ ಪಡೆಯಬೇಕು ಎಂದು ಜಮಾ ಅತೆ ಇಸ್ಲಾಮಿ ಹಿಂದ್ ಜಿಲ್ಲಾ ಮಹಿಳಾ ವಿಭಾಗದ ಸಂಚಾಲಕಿ ತೌಹೀದ್ ಶಿಂಧೆ ಹಾಗೂ ಬೀದರ್ ಘಟಕದ ಸಂಚಾಲಕಿ ಆಸ್ಮಾ ಸುಲ್ತಾನಾ ಅವರು ಪ್ರಕಟಣೆ ಮೂಲಕ ಮನವಿ ಮಾಡಿದ್ದಾರೆ.





