ಬೀದರ್ | ಬೆಳೆ ನಷ್ಟಕ್ಕೆ ಪರಿಹಾರ ನೀಡುವಂತೆ ರೈತ ಸಂಘ ಆಗ್ರಹ

Date:

ಬೀದರ್ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಪ್ರಾಣಿ ಪಕ್ಷಿಗಳಿಗೆ ಆಶ್ರಯ ಸೇರಿದಂತೆ ಆಹಾರ ಒದಗಿಸದ ಗಿಡಮರಗಳಿವೆ. ಇಂಥ ಅನುಪಯುಕ್ತ ಅರಣ್ಯ ಪ್ರದೇಶದಲ್ಲಿ ಭದ್ರವಾಗಿ ನೆಲೆಸಲು ಆಗದ ಕಾರಣ ಕಾಡುಪ್ರಾಣಿಗಳು ರೈತರ ಜಮೀನಿಗೆ ನುಗ್ಗಿ ಬೆಳೆ ನಾಶಪಡಿಸುತ್ತಿವೆ. ನಾಡಿನಲ್ಲಿ 5 ಕೋಟಿ ಸಸಿ ನೆಡುವ ಕಾರ್ಯಕ್ರಮದಲ್ಲಿ ಉಪಯುಕ್ತ ಗಿಡಮರಗಳು ನೆಡುವ ಮೂಲಕ ಪರಿಸರ ಸಂರಕ್ಷಣೆಗೆ ಅರಣ್ಯ ಇಲಾಖೆ ಮುಂದಾಗಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಕಾರ್ಯಕರ್ತರು ಆಗ್ರಹಿಸಿದರು.

ಬೀದರ್‌ ಜಿಲ್ಲೆಯ ಭಾಲ್ಕಿ ಪಟ್ಟಣದಲ್ಲಿ ಅರಣ್ಯ, ಪರಿಸರ ಮತ್ತು ಜೈವಿಕ ಖಾತೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರಿಗೆ ರೈತ ಸಂಘದ ಕಾರ್ಯಕರ್ತರು ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. “ಜಿಲ್ಲಾದ್ಯಂತ ಎಪ್ರಿಲ್-ಮೇ ತಿಂಗಳಲ್ಲಿ ಆಲಿಕಲ್ಲು ಮಳೆಯಿಂದಾಗಿ ತೋಟಗಾರಿಕೆ ಬೆಳೆಗಳು ಸಂಪೂರ್ಣ ನಾಶವಾಗಿವೆ. ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಕೃಷಿ ಮಾಡಿದ್ದ ರೈತರು ಆರ್ಥಿಕ ಸಂಕಷ್ಟ ಎದುರಿಸುವಂತಾಗಿದೆ. ಕೂಡಲೇ ರೈತರಿಗೆ ಎನ್‌ಡಿಆರ್‌ಎಫ್ ಹಾಗೂ ಎಸ್‌ಡಿಆರ್‌ಎಫ್‌ನಿಂದ ಹೆಕ್ಟೇರ್‌ಗೆ 50 ಸಾವಿರ ರೂ. ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

ರೈತ ಸಂಘದ ಹಕ್ಕೊತ್ತಾಯಗಳು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
  1. ಕಳೆದ ವರ್ಷ ಬೆಳೆ ನಷ್ಟದ ಪರಿಹಾರವನ್ನು ಅವೈಜ್ಞಾನಿಕವಾಗಿ ವಿತರಿಸಿ, ರೈತರಿಗೆ ವಂಚಿಸಿದ ವಿಮೆ ಕಂಪನಿಗಳನ್ನು ಕಪ್ಪು ಪಟ್ಟಿಗೆ ಸೇರಿಸಬೇಕು.
  2. ಹಿಂದಿನ ಸರ್ಕಾರದ ಅವಧಿಯಲ್ಲಿ ಒಂದು ಲಕ್ಷದವರೆಗೆ ಸಾಲ ಮನ್ನಾ ಮಾಡಲಾಗಿತ್ತು. ಆದರೆ, ಕೆಲವು ರೈತರ ಸಾಲ ಮನ್ನಾ ಆಗಲಿಲ್ಲ. ಹೀಗಾಗಿ ಅಂತ ರೈತರನ್ನು ಗುರುತಿಸಿ ಋಣ ಮುಕ್ತ ಮಾಡಬೇಕು.
  3. ರೈತರ ಬೆಳೆ ನಾಶಪಡಿಸುವ ಕಾಡುಪ್ರಾಣಿಗಳ ಹಾವಳಿಗೆ ಕಡಿವಾಣ ಹಾಕಬೇಕು. ಕಾಡು ಪ್ರಾಣಿಗಳಿಂದ ಹಾನಿಯಾದ ಬೆಳೆಗೆ ವೈಜ್ಞಾನಿಕ ಪರಿಹಾರ ನೀಡಬೇಕು. ಕಾಡುಪ್ರಾಣಿಗಳು ಅರಣ್ಯ ಪ್ರದೇಶದಲ್ಲಿ ವಾಸಿಸುವಂತೆ ಕ್ರಮ ಕೈಗೊಳ್ಳಬೇಕು.
  4. ರಾತ್ರಿ ಸಮಯದಲ್ಲಿ ರೈತರ ಹೊಲಗಳಿಗೆ ಪಂಪ್‌ಸೆಟ್‌ ಮೂಲಕ ನೀರು ಹರಿಸಲು ವಿದ್ಯುತ್ ಪೂರೈಕೆ ಮಾಡಬೇಕು.
  5. ಕಬ್ಬಿನ ಬಾಕಿ ಹಣ ಪಾವತಿಸಬೇಕು.

ಹಕ್ಕೊತ್ತಾಯ ಪತ್ರ ಸಲ್ಲಿಸುವ ವೇಳೆ ರೈತ ಸಂಘದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಸ್ವಾಮಿ, ನಾಗಶೆಟ್ಟಿ ಲಂಜವಾಡೆ, ವಿಠ್ಠಲರಾವ ಮೇತ್ರೆ, ರುದ್ರಯ್ಯ ಸ್ವಾಮಿ, ವಿಠ್ಠಲ ರೆಡ್ಡಿ, ಸಂತೋಷ್ ಗುದುಗೆ, ಶಿವು ಬಂಡೆ, ಬಸವರಾಜ ಅಷ್ಟೂರೆ, ಚಂದ್ರಶೇಖರ ಪಾಟೀಲ, ಸೋಮನಾಥ್ ಏಣಕುರ, ಓಂಪ್ರಕಾಶ್ ಖಂಡಾಳೆ, ರಾಜಕುಮಾರ್ ಬೇಲೂರ, ವಿಠ್ಠಲರಾವ ಆಣದೂರೆ, ಕಂಟೆಪ್ಪ ತರನಳ್ಳಿ, ಪ್ರಭು ಮೇತ್ರೆ ಕಾಶೆಪ್ಪ ಬೇಲೂರ, ವಿಜಯಕುಮಾರ್ ಬಾವುಗೆ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...