ಬೀದರ್‌ | ಮನರೇಗಾ ಕಾಮಗಾರಿ ಸ್ಥಳದಲ್ಲಿ ʼರಕ್ಷಾ ಬಂಧನʼ ಆಚರಣೆ

Date:

ಸಹೋದರತ್ವದ ಬಾಂಧವ್ಯ ಬೆಸೆಯುವ ರಕ್ಷಾ ಬಂಧನ ಹಬ್ಬವನ್ನು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ಮನರೇಗಾ) ಕಾರ್ಮಿಕರು ತಾವು ಕೈಗೊಂಡ ಕಾಮಗಾರಿ ಸ್ಥಳದಲ್ಲಿಯೇ ವಿಶೇಷವಾಗಿ ಆಚರಿಸಿದರು.

ಬೀದರ್‌ ಜಿಲ್ಲಾ ಪಂಚಾಯತ್‌, ಭಾಲ್ಕಿ ತಾಲೂಕು ಪಂಚಾಯತ್‌, ಗ್ರಾಮ ಸ್ವರಾಜ್ಯ ಅಭಿಯಾನ ಮತ್ತು ಸಂಯೋಗ ಸಂಸ್ಥೆ ಸಹಯೋಗದಲ್ಲಿ ತಾಲೂಕಿನ ಖಟಕ ಚಿಂಚೋಳಿ ಗ್ರಾಮ ಪಂಚಾಯತ್‌ ಹಾಗೂ ಬ್ಯಾಲಹಳ್ಳಿ(ಕೆ) ಗ್ರಾಮ ಪಂಚಾಯತ್‌ ವ್ಯಾಪ್ತಿಯ ಹಾಲಹಳ್ಳಿ ಗ್ರಾಮಗಳಲ್ಲಿ ಸಾಮಾಜಿಕ ಅರಣ್ಯ ವಲಯ ಪ್ರದೇಶದಲ್ಲಿ ನಡೆಯುತ್ತಿರುವ ಮನರೇಗಾ ಕಾಮಗಾರಿ ಸ್ಥಳದಲ್ಲಿ ಪರಸ್ಪರ ಮಹಿಳೆಯರು ಪುರುಷರಿಗೆ ರಾಖಿ ಕಟ್ಟುವುದರ ಮೂಲಕ ಸಹೋದರತ್ವ ಭಾವ ಸಾರಿದರು.

ಮಹಿಳೆಯರ ಘನತೆ ಎತ್ತಿ ಹಿಡಿಯುವ, ಸದಾ ಗೌರವ ಹಾಗೂ ಸುರಕ್ಷಿತ ವಾತಾವರಣ ಕಲ್ಪಿಸುವ ಸಂಕಲ್ಪ ಮಾಡುವುದು ರಕ್ಷಾಬಂಧನ ಉದ್ದೇಶ. ಅಷ್ಟೇ ಅಲ್ಲದೆ, ಆರೋಗ್ಯ, ಆಯಸ್ಸಿಗಾಗಿ ಸಹೋದರಿ ಬಯಸಿದರೆ, ಸಹೋದರಿಯನ್ನು ಸದಾ ಕಾಲ ರಕ್ಷಿಸುವ, ನೋವು-ನಲಿವುಗಳಲ್ಲಿ ಭಾಗಿಯಾಗುವ ಭರವಸೆ ಸಹೋದರ ನೀಡುತ್ತಾನೆ. ಉದ್ಯೋಗ ಖಾತ್ರಿ ಯೋಜನೆಯ ಕೂಲಿಕಾರರು ಇಂತಹ ವಿಶಿಷ್ಟ ಹಬ್ಬಕ್ಕೆ ಹೊಸ ಸೊಬಗು ತಂದುಕೊಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮನರೇಗಾ ಯೋಜನೆಯಡಿ ಕೆಲಸ ಮಾಡುವ ಗಂಡು ಮತ್ತು ಹೆಣ್ಣಿಗೆ ಸಮಾನ ಕೆಲಸಕ್ಕೆ ಸಮಾನ ಕೂಲಿ ಇದೆ. ಕಾಮಗಾರಿ ಸ್ಥಳದಲ್ಲಿ ಪರಸ್ಪರ ಸೌಹಾರ್ದತೆಯಿಂದ, ಒಬ್ಬರಿಗೊಬ್ಬರು ಆಸರೆಯಾಗಿ ದುಡಿದು ಬದುಕು ನಿರ್ವಹಿಸುವ ಕಾರ್ಮಿಕರು ಜಾತಿ-ಧರ್ಮದ ಗೋಡೆ ಮುರಿದು ಸಹೋದತ್ವ ಬಾಂಧವ್ಯಕ್ಕೆ ಸಾಕ್ಷಿಯಾದರು.

WhatsApp Image 2025 08 09 at 4.33.22 PM
ಮಹಿಳೆಯರು ಪುರುಷರಿಗೆ ರಾಖಿ ಕಟ್ಟಿ, ಆರಳಿ ಮಾಡಿ ಸಿಹಿ ತಿನ್ನಿಸಿದರು.

ಮಹಿಳೆಯರು ರಾಖಿ ಕಟ್ಟುವಾಗ ಪುರುಷರ ಹಣೆಗೆ ತಿಲಕವಿಟ್ಟು, ನೂಲೆಳೆಯ ರಾಖಿ ಕಟ್ಟಿ, ಸಿಹಿ ತಿನಿಸಿ, ಆರತಿ ಮಾಡಿದಾಗ ಏನೋ ಸಂಭ್ರಮ ಮೂಡುತ್ತದೆ. ನಾವು ಅವರಿಗೆ ರಕ್ಷಣೆ ಕೊಡುತ್ತೇವೆ ಎನ್ನುವುದಕ್ಕಿಂತ ಹೆಣ್ಣು ಮಕ್ಕಳ ಆಶೀರ್ವಾದವೇ ನಮ್ಮನ್ನು ಕಾಯುತ್ತದೆ ಎಂಬುದು ಪುರುಷರಲ್ಲಿ ಭಾವ ಮೂಡಿತು.

ಗ್ರಾಮದಿಂದ ದೂರದಲ್ಲಿರುವ ಅರಣ್ಯ ಪ್ರದೇಶದಲ್ಲಿ ನರೇಗಾ ಕಾಮಗಾರಿಯಲ್ಲಿ ಮಹಿಳೆಯರು ಕೆಲಸ ಮಾಡುವುದು ಕಷ್ಟ. ಅಂತಹ ಸಂದರ್ಭಗಳಲ್ಲಿ ಪುರುಷರು ಕೆಲಸದಲ್ಲಿ ನೆರವಾಗುವುದು ಮಾತ್ರವಲ್ಲದೇ, ಅವರನ್ನು ಸುರಕ್ಷಿತವಾಗಿ ಮನೆ ಸೇರುವವರೆಗೂ ವಿಶೇಷ ಕಾಳಜಿ ವಹಿಸುತ್ತಾರೆ. ಕೂಡು ಕುಟುಂಬದಂತೆ ಜೊತೆಯಾಗಿರುತ್ತಾರೆ. ಹೀಗಾಗಿ ಇಂತಹ ವಿಶಿಷ್ಟ ಬಾಂಧವ್ಯವನ್ನು ಇನ್ನಷ್ಟು ಗಟ್ಟಿಗೊಳಿಸುವ ನಿಟ್ಟಿನಲ್ಲಿ ತಾಲೂಕಿನ ವಿವಿಧೆಡೆ ಕಾಮಗಾರಿ ಸ್ಥಳಗಳಲ್ಲಿ ಭಾಲ್ಕಿ ತಾಲೂಕು ಪಂಚಾಯತಿ ವತಿಯಿಂದ ರಕ್ಷಾ ಬಂಧನ ಹಬ್ಬ ಆಚರಿಸಲಾಗಿದೆʼ ಎಂದು ಸಂಯೋಗ ಸಂಸ್ಥೆಯ ತರಬೇತಿದಾರ ನೀಲಕಂಠ ಮಾಳಚಾಪುರ ಹೇಳಿದರು.

ಇದನ್ನೂ ಓದಿ : ಬೀದರ್‌ | ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಕರ ಹುದ್ದೆ ಖಾಲಿ : ಸಚಿವರಿಗೆ ಮನವಿ ಸಲ್ಲಿಸಿದ ನಿಯೋಗ

ಕಾರ್ಯಕ್ರಮದಲ್ಲಿ ರೇಣುಕಾ, ಪುಷ್ಪವತಿ, ಗುಂಡಮ್ಮ, ಚಿನ್ನಮ್ಮ, ಶರಣಪ್ಪ, ಇಂದುಮತಿ ಸೇರಿದಂತೆ 30ಕ್ಕೂ ಅಧಿಕ ಮಹಿಳೆಯರು. 20 ಪುರುಷರು ಸೇರಿದಂತೆ ಕಾಯಕ ಬಂಧುಗಳಾದ ಜೀವನ್‌, ಕವಿತಾ ಹಾಗೂ ಮಾಲಾಶ್ರೀ ಆರ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...