ಬೀದರ್‌ | ಅಸಮಾನತೆ ವಿರುದ್ಧ ಬಂಡಾಯವೆದ್ಧ ವೈಚಾರಿಕ ಸಂತ ಕನಕದಾಸ : ಪಾರ್ವತಿ ಸೋನಾರೆ

Date:

ಕೀರ್ತನೆಗಳ ಮೂಲಕ ವಿಶ್ವಪ್ರೇಮ ಸಾರಿದ ಕನಕದಾಸರು ಸಮಾಜದಲ್ಲಿ ಬೇರೂರಿದ ಮೌಢ್ಯಕ್ಕೆ ಕೊಳ್ಳಿ ಇಟ್ಟ ವೈಚಾರಿಕ ಸಂತ ಎಂದು ಸಾಹಿತಿ, ಕಥೆಗಾರ್ತಿ ಪಾರ್ವತಿ ಸೋನಾರೆ ಅಭಿಪ್ರಾಯಪಟ್ಟರು.

ಪಟ್ಟಣದ ತಹಸೀಲ್ ಕಛೇರಿಯಲ್ಲಿ ಶನಿವಾರ ತಾಲೂಕು ಆಡಳಿತ ವತಿಯಿಂದ ಆಯೋಜಿಸಿದ ಕನಕ ಜಯಂತ್ಯುತ್ಸವ ಸಮಾರಂಭದಲ್ಲಿ ಮಾತನಾಡಿ, ʼಕನಕದಾಸರ ಕೀರ್ತನೆಗಳಲ್ಲಿ ಮಾನವೀಯತೆ, ಸರ್ವಧರ್ಮ ಸಮಾನತೆಯ ವಿಚಾರಗಳಿವೆʼ ಎಂದರು.

ʼಕನಕದಾಸರು ಕನ್ನಡ ನಾಡು ಕಂಡ ಶ್ರೇಷ್ಠ ಚಿಂತಕ ಎಂದ ಅವರು, ಜಾತಿ ವ್ಯವಸ್ಥೆ, ಶೋಷಣೆ, ಅಸಮಾನತೆಯ ವಿರುದ್ಧ ಬಂಡಾಯವೆದ್ಧ ಕನಕದಾಸ ಅನಿಷ್ಠ ಪದ್ದತಿ, ಆಚರಣೆಗಳಿಂದ ಕೂಡಿದ ಭಕ್ತಿ ಮನುಕುಲಕ್ಕೆ ಮಾರಕ ಎಂಬುದನ್ನು ಎಚ್ಚರಿಸಿದರು. ಸಾಹಿತ್ಯದ ದೃಷ್ಟಿಯಿಂದ ನೋಡಿದರೂ ಕನಕದಾಸ ಎಲ್ಲರಿಗಿಂತ ಮುಂಚೂಣಿಯಲ್ಲಿದ್ದಂತೆ ಕಾಣುತ್ತದೆ. ಕೀರ್ತನೆ, ಸುಳಾದಿ, ಉಗಾಭೋಗಗಳು, ಮುಂಡಿಗೆಗಳು, ಕಾವ್ಯ ಕೃತಿಗಳ ಮೂಲಕ ಕನ್ನಡವನ್ನು ಉಚ್ಛ್ರಾಯ ಸ್ಥಿತಿಗೆ ಕೊಂಡೊಯ್ದಿದ್ದಾರೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಹಸೀಲ್ದಾರ್ ಮಹೇಶ ಪಾಟೀಲ್ ಮಾತನಾಡಿ, ʼಕನ್ನಡ ಸಾಹಿತ್ಯದ ತೂಕ ಹೆಚ್ಚಿಸಿದ ಕನಕದಾಸರು ಬರೆದ ʼರಾಮಧಾನ್ಯ ಚರಿತೆʼ ಕೃತಿ ಮೇಲು-ಕೀಳು ಎಂಬ ಮನಸ್ಥಿತಿಗೆ ಉತ್ತರಿಸಿದಂತಿದೆ. ಶ್ರಮಿಕ ವರ್ಗದವರೇ ದೇವರಿಗೆ ಪ್ರೀಯವಾಗಿರುತ್ತಾರೆ, ಬದುಕಿನಲ್ಲಿ ಗಟ್ಟಿಯಾಗಿರುತ್ತಾರೆʼ ಎಂದರು.

ಕನಕದಾಸ ಜಯಂತಿ ನಿಮಿತ್ತ ಪಟ್ಟಣದ ಬಸ್ ನಿಲ್ದಾಣ ಬಳಿ ಕನಕ ವೃತ್ತದಲ್ಲಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಮೆರವಣಿಗೆಗೆ ಪಪಂ ಅಧ್ಯಕ್ಷೆ ಸರುಬಾಯಿ ಘುಳೆ ಚಾಲನೆ ನೀಡಿದರು. ಮೆರವಣಿಗೆಯು ಕನಕದಾಸ ವೃತ್ತದಿಂದ ಬಸವೇಶ್ವರ ವೃತ್ತ, ಸಾರ್ವಜನಿಕ ಆಸ್ಪತ್ರೆ, ಪೊಲೀಸ್ ಠಾಣೆ, ನ್ಯಾಯಾಲಯ ರಸ್ತೆಯಿಂದ ತಹಸೀಲ್ ಆವರಣಕ್ಕೆ ತೆರಳಿತು. ಮೆರವಣಿಗೆಯಲ್ಲಿ ಮಕ್ಕಳು, ಕಳಸ ಹೊತ್ತ ಮಹಿಳೆಯರು, ತಾಲೂಕು ಅಧಿಕಾರಿಗಳು ಡಿಜೆ ಸದ್ದಿಗೆ ಹೆಜ್ಜೆ ಹಾಕಿ ಸಂಭ್ರಮಿಸಿದರು.

ಇದನ್ನೂ ಓದಿ : ಬೀದರ್‌ | ಪಿಡಿಒ ಹುದ್ದೆಗೆ ಪ್ರೊಬೇಷನರಿ ಐಎಎಸ್‌ ಅಧಿಕಾರಿ ರಮ್ಯಾ ನಿಯೋಜನೆ

ಪಪಂ ಮುಖ್ಯಾಧಿಕಾರಿ ಸರುಬಾಯಿ ಘುಳೆ, ಖಜಾನೆ ಅಧಿಕಾರಿ ಮಾಣಿಕ ನೇಳಗಿ, ಬಿಇಒ ರಂಗೇಶ, ಎಡಿ ಶಿವಕುಮಾರ ಘಾಟೆ, ಪಪಂ ಸದಸ್ಯ ಗುಂಡಪ್ಪ ಮುದಾಳೆ, ಕಸಾಪ ಅಧ್ಯಕ್ಷ ಬಿ.ಎಂ ಅಮರವಾಡಿ, ರಾಮಣ್ಣ ವಡೆಯರ್, ಡಾ.ವೈಜಿನಾಥ ಬುಟ್ಟೆ ಹಾಗೂ ಪ್ರಮುಖರಾದ ಶಿವಕುಮಾರ್ ಮೇತ್ರೆ, ಶಿವರಾಜ ಅಲಮಾಜೆ, ಶಿವಾಜಿರಾವ ಪಾಮುದಾಳೆ, ಶ್ರಾವಣಕುಮಾರ ಭಂಡೆ, ರಾಜಕುಮಾರ ಮುದಾಳೆ, ಅರ್ಜುನ ಭಂಗೆ, ಸಂತೋಷ ಮುದಾಳೆ, ಕೃಷ್ಣ ಸಾಗಾವೆ, ಬೀರಪ್ಪ ರಕ್ಷಾಳೆ, ಧನರಾಜ ಮಾನೆ ಸೇರಿದಂತೆ ಇನ್ನಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...