ಬೀದರ್‌ | ಬೆಳೆ ಹಾನಿ ಪರಿಹಾರ ಶೀಘ್ರ ಬಿಡುಗಡೆ ಮಾಡಿ : ಶಾಸಕ ಶೈಲೇಂದ್ರ ಬೆಲ್ದಾಳೆ

Date:

ಬೀದರ್ ದಕ್ಷಿಣ ಕ್ಷೇತ್ರ ಸೇರಿದಂತೆ ಬೀದರ್, ಬಸವಕಲ್ಯಾಣ, ಹುಲಸೂರು, ಹುಮನಾಬಾದ್ ತಾಲ್ಲೂಕಿನ ರೈತರಿಗೆ ತಕ್ಷಣ ಅತಿವೃಷ್ಟಿ ಬೆಳೆ ಹಾನಿ ಪರಿಹಾರ ಬಿಡುಗಡೆ ಮಾಡಬೇಕೆಂದು ಬೀದರ್‌ ದಕ್ಷಿಣ ಕ್ಷೇತ್ರದ ಶಾಸಕರೂ ಆದ ಬಿಜೆಪಿ ರಾಜ್ಯ ಕಾರ್ಯದರ್ಶಿ ಡಾ.ಶೈಲೇಂದ್ರ ಬೆಲ್ದಾಳೆ ಒತ್ತಾಯಿಸಿದ್ದಾರೆ.

ʼಜಿಲ್ಲೆಯಲ್ಲಿ ಅತಿವೃಷ್ಟಿ ಬೆಳೆ ಹಾನಿ ಪರಿಹಾರ ಸಮರ್ಪಕವಾಗಿ ವಿತರಣೆ ಆಗುತ್ತಿಲ್ಲ. ಬೀದರ್, ಹುಮನಾಬಾದ್, ಬಸವಕಲ್ಯಾಣ, ಹುಲಸೂರು ತಾಲ್ಲೂಕಿನ  ರೈತರ ಖಾತೆಗೆ ಹಣ ಜಮೆ ಆಗಿಲ್ಲ. ಈ ಬಗ್ಗೆ ಅನೇಕ ರೈತರು ನನಗೆ ಖುದ್ದು ಭೇಟಿಯಾಗಿ, ದೂರವಾಣಿ ಕರೆ ಮಾಡಿ ದೂರು ನೀಡಿದ್ದಾರೆ. ಜಿಲ್ಲಾಡಳಿತ ತಕ್ಷಣ ಈ ಕುರಿತು ಗಮನಹರಿಸಿ ಸಂತ್ರಸ್ತ ರೈತರ ಖಾತೆಗೆ ಪರಿಹಾರ ಹಣ ಜಮೆ ಮಾಡಬೇಕೆಂದು ಶನಿವಾರ ಹೊರಡಿಸಿರುವ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

ʼಬೀದರ್ ಜಿಲ್ಲೆಯ ಸುಮಾರು 1.80 ಲಕ್ಷ ರೈತರ ಖಾತೆಗೆ ಶೀಘ್ರವೇ ಮೊದಲ ಹಂತದ 140 ಕೋಟಿ ಬೆಳೆ ಹಾನಿ ಪರಿಹಾರ ಜಮೆಯಾಗಲಿದೆ. ಜಿಲ್ಲಾಡಳಿತ ಪರಿಹಾರ ವಿತರಣೆ  ಪ್ರಕ್ರಿಯೆ ಆರಂಭಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಕಳೆದ ದಿ.29ರಂದು ಹೇಳಿದ್ದರು. ಆದರೆ, ಈವರೆಗೆ ಅನೇಕ ರೈತರಿಗೆ ಪರಿಹಾರ ಬಂದಿಲ್ಲ. ಹೆಚ್ಚು ರೈತರು ಪರಿಹಾರಕ್ಕಾಗಿ ಕಾಯುತ್ತಿದ್ದಾರೆ. ಸಂಕಷ್ಟದಲ್ಲಿರುವ ರೈತರಿಗೆ ಬೇಗ ನೆರವಾಗುವ ಕಾರ್ಯಕ್ಕೂ ಇಷ್ಟೊಂದು ವಿಳಂಬ, ನಿರ್ಲಕ್ಷ್ಯತೆ ವಹಿಸುತ್ತಿರುವುದು ಸರಿಯಿಲ್ಲʼ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸರ್ಕಾರ ಘೋಷಿಸಿದಂತೆ ಪ್ರತಿ ಹೆಕ್ಟೇರ್‌ಗೆ ಹೆಚ್ಚುವರಿ 8,500 ಪರಿಹಾರ ಇನ್ನೂ ನೀಡುತ್ತಿಲ್ಲ. ಈಗ ನೀಡುತ್ತಿರುವ ಪರಿಹಾರ ಕೇಂದ್ರ ಸರ್ಕಾರದ ಎನ್‌ಡಿಆರ್‌ಎಫ್ ನಿಧಿಯ ಪರಿಹಾರವಾಗಿದೆ. ರಾಜ್ಯ ಸರ್ಕಾರ ಏನೂ ಕೊಟ್ಟಿಲ್ಲ. ಬೆಳೆ ನಷ್ಟದಿಂದ ರೈತ ಸಮೂಹ ಸಾಕಷ್ಟು ಸಂಕಷ್ಟದಲ್ಲಿ ಕಾಲ ಕಳೆಯುತ್ತಿದೆ. ಇಂಥ ಸ್ಥಿತಿಯಲ್ಲೂ ಸರ್ಕಾರದ  ಹೆಚ್ಚುವರಿ ಪರಿಹಾರ ಘೋಷಣೆಗಷ್ಟೇ ಸೀಮಿತಗೊಳಿಸಿರುವ ನೀತಿ ರೈತ ವಿರೋಧಿಯಾಗಿದೆ. ಪರಿಹಾರ ನೀಡಿಕೆಯಲ್ಲಿ ಆಗುತ್ತಿರುವ ವಿಳಂಬವನ್ನು ಗಮನಿಸಿದರೆ ರಾಜ್ಯ ಸರ್ಕಾರದ ಆರ್ಥಿಕ ಸ್ಥಿತಿ ಸರಿಯಿಲ್ಲ.‌ ಗ್ಯಾರಂಟಿ ಅಬ್ಬರದಲ್ಲಿ ಖಜಾನೆ ಝಳಝಳವಾದಂತೆ‌ ಕಾಣುತ್ತಿದೆʼ ಎಂದು ಟೀಕಿಸಿದ್ದಾರೆ.

ಇದನ್ನೂ ಓದಿ : ಬೀದರ್‌ | ಜಮೆಯಾಗದ ಬೆಳೆ ಹಾನಿ ಪರಿಹಾರ : ತಪ್ಪದ ರೈತರ ಸಂಕಷ್ಟ

ಕೊಟ್ಟ ಮಾತಿನಂತೆ ಉಸ್ತುವಾರಿ ಸಚಿವರು ರೈತರಿಗೆ ಬರಬೇಕಾದ ಸುಮಾರು 280 ಕೋಟಿ ಬೆಳೆ ನಷ್ಟ ಪರಿಹಾರ ಕೂಡಲೇ ಬಿಡುಗಡೆ ಮಾಡಲು ಕ್ರಮ ಕೈಗೊಂಡು ನೊಂದ ರೈತರ ನೆರವಿಗೆ ಧಾವಿಸಬೇಕು. ಹೆಚ್ಚುವರಿ 8,500 ಪರಿಹಾರ ಸಹ ತಕ್ಷಣ ರೈತರಿಗೆ ವಿತರಿಸಬೇಕು. ನಮ್ಮಲ್ಲಿ ಈಗ ಡಿಬಿಟಿ ವ್ಯವಸ್ಥೆ ಇರುವ ಕಾರಣ ಎಲ್ಲ ರೈತರ ಖಾತೆಗೆ ಏಕಕಾಲಕ್ಕೆ ಪರಿಹಾರ ಹಣ ಜಮೆ ಮಾಡಬೇಕು. ತಾಲ್ಲೂಕು ನಡುವೆ ತಾರತಮ್ಯ ಮಾಡಬಾರದು. ಜಿಲ್ಲಾಡಳಿತ ಸಹ ಈ ವಿಷಯ ಗಂಭೀರವಾಗಿ ಪರಿಗಣಿಸಬೇಕು. ಬೇಗ ಹಣ ಜಮಾ ಆಗದಿದ್ದರೆ ರೈತರೊಂದಿಗೆ ಸೇರಿ ಹೋರಾಟ ಮಾಡುವುದು ಅನಿವಾರ್ಯʼ ಎಂದು ಎಚ್ಚರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...