ಬೀದರ್ | ಅಂಬೇಡ್ಕರ್ ಜಯಂತಿ ಮೆರವಣಿಗೆ ವೇಳೆ ಗಲಾಟೆ : 10 ಜನರ ವಿರುದ್ಧ ಪ್ರಕರಣ ದಾಖಲು

Date:

ಭಾಲ್ಕಿ ತಾಲ್ಲೂಕಿನ ಖುದವಂತಪೂರ ಗ್ರಾಮದಲ್ಲಿ ಏ.29ರಂದು ನಡೆದ ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ನಿಮಿತ್ತ ಹಮ್ಮಿಕೊಂಡಿದ್ದ ಮೆರವಣಿಗೆ ವೇಳೆ ಗಲಾಟೆ ಮಾಡಿ, ಹಲ್ಲೆಮಾಡಿ, ಜಾತಿನಿಂದನೆ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಹತ್ತು ಜನರ ವಿರುದ್ಧ ಬುಧವಾರ (ಏ.30) ಮೆಹಕರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾರ್ವಜನಿಕ ಮೆರವಣಿಗೆ ವೇಳೆ ಕಲ್ಲು ತೂರಾಟ, ಹೊಡೆದಾಟ, ಜಾತಿ‌ನಿಂದನೆ ಮತ್ತು ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಅನಿತಾ ದತ್ತಾತ್ರಿ ಭಾಲ್ಕೆ ಎಂಬುವವರು ನೀಡಿದ ದೂರಿನ್ವಯ ಮೇಹಕರ್ ಪೊಲೀಸ್ ಠಾಣೆಯಲ್ಲಿ 10 ಜನರ ವಿರುದ್ಧ ಜಾತಿನಿಂದನೆ ಸೇರಿದಂತೆ ವಿವಿಧ ಪ್ರಕರಣಗಳು ಬುಧವಾರ ದಾಖಲಾಗಿವೆ.

ಘಟನೆ ವಿವರ: ಏ.29ರಂದು ಜಯಂತಿ ಸಮಿತಿಯಿಂದ ಡಾ.ಅಂಬೇಡ್ಕರ್ ಅವರ ಭಾವಚಿತ್ರದ ಮೆರವಣಿಗೆ ವೇಳೆ ರಾತ್ರಿ 9 ಗಂಟೆ ಸುಮಾರಿಗೆ ಕಲ್ಲು ತೂರಾಟ ನಡೆಸಿ ಅಡ್ಡಿಪಡಿಸಿದ್ದಾರೆ. ಸ್ಥಳದಲ್ಲಿದ್ದ ಪೊಲೀಸರು ಸಾಂತ್ವನ ಪಡಿಸಿದರು. ಮರುದಿನ ಬೆಉ (ಏ.30) ರಂದು ಅದೇ ಕೋಪದಿಂದ ಪುನಃ ನನಗೆ ಹಾಗೂ ನನ್ನ ಗಂಡನಿಗೆ ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ಮಾಡಿದ್ದಾರೆ ಎಂದು ಅನಿತಾ ದತ್ತಾತ್ರಿ ದೂರಿನಲ್ಲಿ ಆರೋಪಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...