ಬೀದರ್ | ಭಾರೀ ಮಳೆಯಿಂದ ರಸ್ತೆ, ಬೆಳೆ ಜಲಾವೃತ; ಜನಜೀವನ ಅಸ್ತವ್ಯಸ್ತ

Date:

ಜೂನ್ ಮೊದಲ ವಾರದಲ್ಲಿ ವಾಡಿಕೆಯಂತೆ ಬರಬೇಕಾದ ಮುಂಗಾರು ಮಳೆ ಜುಲೈ ಎರಡನೇ ವಾರದಲ್ಲಿ ಉಂಟಾಗಿದೆ. ಜೂನ್ ತಿಂಗಳು ಕಳೆದರೂ ಗರಿಷ್ಠ ಮಟ್ಟದಲ್ಲಿ ಬಿತ್ತನೆ ಕಾರ್ಯ ಮುಗಿಸದ ರೈತರು ಆಕಾಶದತ್ತ ಮುಖ ಮಾಡುವಂತಾಗಿತ್ತು. ಜೂನ್ ಕೊನೆಯ ವಾರದಲ್ಲಿ ಅಷ್ಟಿಷ್ಟು ಉದುರಿದ ತುಂತುರು ಮಳೆಯಿಂದ ಬಿತ್ತನೆ ಪೂರ್ಣಗೊಳಿಸಿದ ರೈತರು ಮತ್ತೆ ಮಳೆಗಾಗಿ ಇಣುಕಿ ನೋಡುವಂತಾಗಿತ್ತು. ಇದೀಗ ಜುಲೈ ಎರಡನೇ ವಾರದಲ್ಲಿ ಬೆಂಬಿಡದೆ ಸುರಿಯುತ್ತಿರುವ ತುಂತುರು ‌ಹಾಗೂ ಸಾಧಾರಣ ಮಳೆಯಿಂದ ರೈತರು ಇನ್ನೊಂದು ರೀತಿಯ ಸಂಕಷ್ಟಕ್ಕೆ ಸಿಲುಕಿದ್ದು, ಚಿಂತೆಗೀಡಾಗಿದ್ದಾರೆ.

ಮಳೆ ಆಶ್ರಿತ ಬೆಳೆಗಳಿಗೆ ಮಳೆ ಅತಿಯಾದರೆ ಅತಿವೃಷ್ಟಿ, ಮಳೆಯಾಗದಿದ್ದರೆ ಅನಾವೃಷ್ಟಿ. ಹೀಗಾಗಿ ತಾಪಮಾನಕ್ಕೆ ಹೊಂದಿಕೊಳ್ಳುವ ಬೆಳೆ ಸೋಯಾಬಿನ್ ಬೆಳೆಯೇ ಜಿಲ್ಲೆಯಾದ್ಯಂತ ಅಧಿಕವಾಗಿ ಬಿತ್ತನೆ ಮಾಡುತ್ತಿದ್ದಾರೆ. ಸೋಯಾ ಜೊತೆಗೆ ಬಿತ್ತನೆ ಮಾಡಿದ ತೊಗರಿ, ಉದ್ದು, ಹೆಸರು, ಹತ್ತಿ ಸೇರಿದಂತೆ ಇತರೆ ಮುಂಗಾರು ಬೆಳೆಗಳು ಅತಿಯಾದ ಮಳೆಯಿಂದಾಗಿ ಜಲಾವೃತವಾಗಿವೆ. ಮಳೆ ಕೈಕೊಟ್ಟ ಕಾರಣಕ್ಕೆ ದಿಕ್ಕೆಟ್ಟು ಹೋಗಿದ್ದ ರೈತರು ಇದೀಗ ಅತಿಯಾದ ಮಳೆಯಿಂದ ಇನ್ನಷ್ಟು ಹೈರಾಣಾಗಿ ಕಂಗಾಲಾಗಿದ್ದಾರೆ.

ಬೆಳೆ ಹಾನಿ, ಪರಿಹಾರಕ್ಕೆ ಆಗ್ರಹ:

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಮಲನಗರ ತಾಲೂಕಿನ ಬೆಳಕುಣಿ (ಚೌ) ಗ್ರಾಮದ ವೀರಪ್ಪ ಚಾಮಲೆ ಅವರು ಸಾವಿರಾರು ರೂಪಾಯಿ ವೆಚ್ಚ ಮಾಡಿ ಬಿತ್ತನೆ ಮುಗಿಸಿ ಉತ್ತಮ ಬೆಳೆಯ ನಿರೀಕ್ಷೆಯಲ್ಲಿದ್ದರು. ಆದರೆ ಕಳೆದ ನಾಲ್ಕೈದು ದಿನಗಳಿಂದ ತಾಲೂಕಿನಲ್ಲಿ ಸುರಿದ ಮಳೆಯಿಂದಾಗಿ ಸಂಪೂರ್ಣ ಬೆಳೆ ನೀರುಪಾಲಾಗಿದೆ. ಸಾಲ ಸೋಲ ಮಾಡಿ ಬಿತ್ತನೆ ಮಾಡಿದ ನಮಗೆ ಬೆಳೆ ಕೈಕೊಟ್ಟಿದೆ. ಸರ್ಕಾರ ಈ ಬಗ್ಗೆ ಗಮನಹರಿಸಿ ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸಿದ್ದಾರೆ.

ಬೆಳೆ ಹಾನಿ 1
ಭಾರೀ ಮಳೆಗೆ ಹಾನಿಯಾದ ಬೆಳೆ

“ಕಾಡುಪ್ರಾಣಿಗಳ ಹಾವಳಿಗೆ ಬೇಸತ್ತು ರೈತರು ಬೆಳೆ ರಕ್ಷಣೆಗೆ ಹೊಲಗಳಿಗೆ ಸೋಲಾರ್ ಬೇಲಿ ಹಾಕಿಕೊಂಡಿದ್ದಾರೆ. ಆದರೆ ಸತತವಾಗಿ ಸುರಿದ ಮಳೆಯಿಂದ ಸೋಲಾರ್ ಬಳಕೆಗೆ ಬರಲಿಲ್ಲ. ಇದರಿಂದ ಕಾಡು ಹಂದಿಗಳು ಕಬ್ಬಿನ ಗದ್ದೆಗೆ ನುಗ್ಗಿ ಎರಡು ಎಕರೆಯಲ್ಲಿ ಬೆಳೆದ ಕಬ್ಬು ಅಲ್ಲಲ್ಲಿ ನೆಲಕ್ಕುರುಳಿದೆ. ಹಗಲಿರುಳು ಶ್ರಮಿಸಿ‌‌ ಬೆಳೆದ ಬೆಳೆ ಕೈಗೆ ಬಾರದಂತಾಗಿದೆ” ಎಂದು ಔರಾದ್ ತಾಲೂಕಿನ ರೈತ ಮಹಿಳೆ ಲಕ್ಷ್ಮಿಬಾಯಿ ಅವಲತ್ತುಕೊಂಡಿದ್ದಾರೆ.

ಕೆಸರು ಗದ್ದೆಯಂತಾದ ರಸ್ತೆಗಳು:

“ಜಿಟಿಜಿಟಿ ಮಳೆಗೆ ಜಿಲ್ಲೆಯ ಹಲವು ಗ್ರಾಮಗಳ ರಸ್ತೆಗಳು ಕೆಸರು ಗದ್ದೆಯಂತಾಗಿದ್ದು, ಜನರು ಓಡಾಡಲು ಪರದಾಡುವಂತಾಗಿದೆ. ಬೀದರ್ ನಗರದ ಹಳೆ ಬಸ್ ನಿಲ್ದಾಣ ಮುಂಭಾಗ, ನೌಬಾದ್ ಸೇರಿದಂತೆ ನಗರದ ಪ್ರಮುಖ ರಸ್ತೆಗಳಲ್ಲಿನ ಗುಂಡಿಗಳು ಅಪಾಯಕ್ಕೆ ಸಿಲುಕಿವೆ. ಈ ಹಿಂದೆ ಬೀದರ್ ಉತ್ಸವ ಸಂದರ್ಭದಲ್ಲಿ ತರಾತುರಿಯಲ್ಲಿ ರಸ್ತೆ ಕಾಮಗಾರಿ ಮುಗಿಸಿದ ರಸ್ತೆಗಳೇ ಮಳೆಗೆ ಕಿತ್ತು ಬರುತ್ತಿವೆ. ಇದೀಗ ಇಬ್ಬರು ಸಚಿವರು ಹೊಂದಿರುವ ಜಿಲ್ಲಾ ಕೇಂದ್ರದಲ್ಲಿ ಗುಂಡಿಗಳ ದರ್ಬಾರ್ ಹೆಚ್ಚಾಗಿದ್ದು ಜನಜೀವನ ಸಂಚಾರಕ್ಕೆ ಅಡ್ಡಿಯಾಗಿದೆ. ಕೂಡಲೇ ಜಿಲ್ಲಾಡಳಿತ ಗುಂಡಿ ಮುಚ್ಚಲು ಮುಂದಾಗಬೇಕು” ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಭಾಲ್ಕಿ
ಕೆಸರು ಗದ್ದೆಯಂತಾದ ರಸ್ತೆಗಳು

ಈ ಸುದ್ದಿ ಓದಿದ್ದೀರಾ? ಬೀದರ್ | ಕೃಷಿ ಡಿಪ್ಲೊಮಾ ಕೋರ್ಸ್ ರದ್ದು; ಪುನರಾರಂಭಕ್ಕೆ ಎಬಿವಿಪಿ ಆಗ್ರಹ

ಮನೆ ಗೋಡೆ ಕುಸಿತ; ಪರಿಹಾರಕ್ಕೆ ಆಗ್ರಹ

ಸತತವಾಗಿ ಸುರಿದ ಮಳೆಯಿಂದಾಗಿ ಜಿಲ್ಲೆಯ ಹಲವೆಡೆ ಮನೆ ಗೋಡೆ ಕುಸಿದು ಬಿದ್ದ ಘಟನೆಗಳು ಜರುಗಿವೆ. ಔರಾದ್, ಹುಮನಾಬಾದ್, ಭಾಲ್ಕಿ, ಕಮಲನಗರ ತಾಲೂಕಿನ ಹಲವು ಗ್ರಾಮಗಳಲ್ಲಿ ಮನೆ ಗೋಡೆ ಕುಸಿದಿದ್ದು ಪರಿಹಾರ ನೀಡುವಂತೆ ಸಂತ್ರಸ್ತ ಕುಟುಂಬಸ್ಥರು ಆಗ್ರಹಿಸಿದ್ದಾರೆ.

ಜಲಾವೃತವಾದ ರಸ್ತೆ, ಸಂಚಾರ ಸ್ಥಗಿತ

ಕರ್ನಾಟಕ ಅಲ್ಲದೆ ಪಕ್ಕದ ತೆಲಂಗಾಣ ಹಾಗೂ ಮಹಾರಾಷ್ಟ್ರದಲ್ಲಿ ಸುರಿದ ಮಳೆಯಿಂದಾಗಿ ಗಡಿ ಭಾಗದ ಗ್ರಾಮಗಳ ರಸ್ತೆಗಳು ಜಲಾವೃತಗೊಂಡಿದೆ. ತೆಲಂಗಾಣಾ ರಾಜ್ಯದ ಕೊತ್ತೂರ್ ಡ್ಯಾಮ್ ನೀರಿನ ಮಟ್ಟ ಹೆಚ್ಚಾಗಿದ್ದರಿಂದ ಹೆಚ್ಚುವರಿ ನೀರು ಸಿಂದೋಲ್ ಗ್ರಾಮದ ಹಳ್ಳದ ಮೂಲಕ ಹರಿಯುತ್ತಿದ್ದು, ನೀರಿನ ಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ಸಿಂದೊಲ್ ಬ್ರಿಡ್ಜ್ ಮೇಲಿಂದ ಹಾದು ಹೋಗುವ ಮನ್ನಳ್ಳಿ- ಭಂಗೂರ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿತ್ತು. ಕಮಲನಗರ ತಾಲೂಕಿನ ಖಣಗಾಂವ- ಔರಾದ, ಚಿಟಗುಪ್ಪ ತಾಲೂಕಿನ ಉಡುಮನಳ್ಳಿ – ಕರಕನಳ್ಳಿ ಮಾರ್ಗದ ಸಂಪರ್ಕ ರಸ್ತೆಗಳನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...