ಬೀದರ್‌ | ಅಂಗನವಾಡಿ ಕಟ್ಟಡದ ಮೇಲ್ಛಾವಣಿ ಸೋರಿಕೆ; ಅಧಿಕಾರಿ, ಜನಪ್ರತಿನಿಧಿಗಳ ನಿರ್ಲಕ್ಷ್ಯದ ಆರೋಪ

Date:

ಬೀದರ್ ತಾಲೂಕಿನ ಕಾಡವಾದ ಗ್ರಾಮದ ಅಂಗನವಾಡಿ ಕೇಂದ್ರ ಕಟ್ಟಡ ಶಿಥಿಲಾವಸ್ಥೆಯಲ್ಲಿದ್ದು, ಯಾವಾಗ ಕುಸಿದು ಬೀಳುತ್ತದೋ ಎಂಬ ಆತಂಕ ಪೋಷಕರಲ್ಲಿ ಮೂಡಿದೆ.

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕಾಡವಾದ ಗ್ರಾಮ ಪಂಚಾಯಿತಿ ಕೇಂದ್ರವಾಗಿದೆ. ಆದರೂ ಇಲ್ಲಿನ ಅಂಗನವಾಡಿ ಕೇಂದ್ರಕ್ಕೆ ಮೂಲ ಸೌಕರ್ಯ ಒದಗಿಸಲು ಗ್ರಾಮ ಪಂಚಾಯಿತಿ ಆಡಳಿತ ಸಂಪೂರ್ಣ ವಿಫಲವಾಗಿದೆ.

“ಸುಮಾರು 25 ವರ್ಷದ ಹಳೆ ಕಟ್ಟಡದಲ್ಲಿ ಕಳೆದ 12 ವರ್ಷಗಳಿಂದ ಅಂಗನವಾಡಿ ನಡೆಯುತ್ತಿದೆ. ಕಟ್ಟಡದ ಮೇಲ್ಛಾವಣಿ ಹಾಗೂ ಗೋಡೆ ಅಲ್ಲಲ್ಲಿ ಬಿರುಕು ಬಿಟ್ಟು ಸೋರುತ್ತಿದೆ. ಕಿಟಕಿ, ಬಾಗಿಲು ಕಿತ್ತು ಬಂದಿವೆ. ಛಾವಣಿ ಹಿಂಬದಿ ಕಿಟಕಿಗಳ ವ್ಯವಸ್ಥೆ ಇಲ್ಲದೆ ಮಳೆ ನೀರು ಒಳಗೆ ನುಗ್ಗಿ ಧಾನ್ಯಗಳು ತೋಯ್ದು ಹೋದ ಘಟನೆ ಜರುಗಿದೆ. ಒಂದೆರಡು ಬಾರಿ ಅಡುಗೆ ಕೋಣೆಗೆ ಹಾವು ಬಂದಿತ್ತು. ಇದರಿಂದ ನಮಗೂ ಸೇರಿದಂತೆ ಮಕ್ಕಳು, ಪೋಷಕರಿಗೆ ಆತಂಕ ಎದುರಾಗಿದೆ” ಎಂದು ಅಂಗನವಾಡಿ ಸಿಬ್ಬಂದಿ ಈ ದಿನ.ಕಾಮ್‌ಗೆ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಪಾಯಕ್ಕೆ ಆಹ್ವಾನಿಸುತ್ತಿರುವ ಶೌಚಾಲಯ ಗುಂಡಿ

ಶೌಚಾಲಯಕ್ಕಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಶಾಲೆ-ಕಾಲೇಜು, ಅಂಗನವಾಡಿ ಕೇಂದ್ರಗಳಿಗೆ ಕೋಟ್ಯಂತರ ರೂ. ವೆಚ್ಚ ಮಾಡುತ್ತವೆ. ಆದರೆ ಈ ಅಂಗನವಾಡಿ ಕೇಂದ್ರದಲ್ಲಿ ಓದುವ 19 ಮಕ್ಕಳಿಗೆ ಬಯಲು ಶೌಚಾಲಯವೇ ಗತಿ ಎಂಬಂತಾಗಿದೆ. ಶೌಚಾಲಯ ನಿರ್ಮಾಣಕ್ಕಾಗಿ ಗುಂಡಿ ತೋಡಿದ ಪಂಚಾಯತ್ ಸದಸ್ಯರೊಬ್ಬರು ಎರಡು ವರ್ಷಗಳಾದರೂ ಶೌಚಾಲಯ ಕಾಮಗಾರಿ ಮುಗಿಸಲಿಲ್ಲ. ತೆರೆದ ಗುಂಡಿ ಹಾಗೇ ಉಳಿದ ಪರಿಣಾಮ ವಿದ್ಯಾರ್ಥಿಗಳು ಆತಂಕದಲ್ಲಿ ಕಲಿಯಬೇಕಾಗಿದೆ.

ಶೌಚ ಗುಂಡಿ

ಅಂಗನವಾಡಿ ಕೋಣೆ ಮುಂಭಾಗದಲ್ಲಿ ಇರುವ ಸುಮಾರು 5 ಅಡಿ ಆಳದ ಗುಂಡಿಯಲ್ಲಿ ಪುಟ್ಟ ಕಂದಮ್ಮಗಳು ಬೀಳುವ ಸಾಧ್ಯತೆ ಇದೆ. ಈ ಭಯದಿಂದ ಮಕ್ಕಳನ್ನು ಅಂಗನವಾಡಿ ಕೇಂದ್ರಕ್ಕೆ ಕಳುಹಿಸಲು ಪೋಷಕರು ಹಿಂದೇಟು ಹಾಕುತ್ತಿದ್ದಾರೆ. ಬರೀ 8ರಿಂದ 10 ಮಕ್ಕಳು ಬರುತ್ತಿದ್ದಾರೆ. ಪಂಚಾಯಿತಿ ಪಿಡಿಒ ಹಾಗೂ ಸದಸ್ಯರ ನಿರ್ಲಕ್ಷ್ಯ ಧೋರಣೆಯಿಂದ ಅಂಗನವಾಡಿ ಮಕ್ಕಳು ಕಲಿಕೆಯಿಂದ ವಂಚಿತರಾಗುತ್ತಿದ್ದಾರೆ ಎಂಬುದಕ್ಕೆ ಇದು ತಾಜಾ ಉದಾಹರಣೆ.

ಸ್ವಂತ ಖರ್ಚಿನಿಂದ ಅಂಗನವಾಡಿ ರಿಪೇರಿ

ಅಂಗನವಾಡಿ ಕಾರ್ಯಕರ್ತೆ ಸ್ನೇಹಲತಾ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಮಳೆ ನೀರು ಸಂಗ್ರಹವಾಗಿ ಅಂಗನವಾಡಿ ಕೇಂದ್ರದಲ್ಲಿನ ದವಸ ಧಾನ್ಯ ಹಾಳಾಗುತ್ತಿದ್ದು, ರಿಪೇರಿ ಮಾಡಿಸುವಂತೆ ಕೇಳಿದರೆ ಸ್ಪಂದಿಸದ ಸದಸ್ಯರ ನಿರ್ಲಕ್ಷ್ಯಕ್ಕೆ ಬೇಸತ್ತು ತಮ್ಮ ಸ್ವಂತ ಖರ್ಚಿನಿಂದ ಅಂಗನವಾಡಿ ಅಡುಗೆ ಕೋಣೆ ರಿಪೇರಿ ಮಾಡಿಸಿಕೊಂಡಿದ್ದೇವೆ. ಹಲವು ಬಾರಿ ಶೌಚಾಲಯ ಗುಂಡಿ ಮುಚ್ಚುವಂತೆ ವಿನಂತಿಸಿದರೂ ಯಾವುದೇ ಪ್ರಯೋಜನವಾಗಿಲ್ಲ” ಎಂದು ಆರೋಪಿಸಿದರು.

ಗೋಡೆ ಬಿರುಕು

“ಏನೂ ಅರಿಯದ ಪುಟ್ಟ ಕಂದಮ್ಮಗಳು ಆಟ ಆಡಲು ಅಥವಾ ಶೌಚಕ್ಕೆ ಹೊರಗಡೆ ಬಂದು ಆಯತಪ್ಪಿದರೆ ಸಾಕು ಶೌಚಾಲಯದ ಗುಂಡಿಯೊಳಗೆ ಬೀಳುವ ದೊಡ್ಡ ಅಪಾಯವಿದೆ. ಇನ್ನು ಮಳೆಯಾದರೆ ಗುಂಡಿ ತುಂಬುತ್ತದೆ. ಕೂಡಲೇ ಗ್ರಾಮ ಪಂಚಾಯಿತಿ ಆಡಳಿತ ಹಾಗೂ ಸಿಡಿಪಿಒ ಅಧಿಕಾರಿಗಳು ಎಚ್ಚೆತ್ತುಕೊಂಡು ಅವ್ಯವಸ್ಥೆ ಸರಿಪಡಿಸಬೇಕು. ಇಲ್ಲವಾದಲ್ಲಿ ಮುಂದಿನ ಅನಾಹುತಕ್ಕೆ ಸಂಬಂಧಪಟ್ಟ ಅಧಿಕಾರಿಗಳೇ ನೇರ ಹೊಣೆ ಆಗಬೇಕಾಗುತ್ತದೆ” ಎಂದು ಗ್ರಾಮಸ್ಥರು ಎಚ್ಚರಿಕೆ ನೀಡಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷ ಮಾತನಾಡಿ, “ಕೆಲ ವರ್ಷಗಳ ಹಿಂದೆ ನಿರ್ಮಿಸಿದ ಅಂಗನವಾಡಿ ಕಟ್ಟಡ ಚೆನ್ನಾಗಿಯೇ ಇದೆ” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...