ಬೀದರ್‌ | ಆರ್‌ಎಸ್‌ಎಸ್ ಕಾಂಗ್ರೆಸ್‌ನಿಂದ ಪಳಗಿದ ಕೂಸು : ಅಂಕುಶ ಗೋಖಲೆ

Date:

ಆರ್‌ಎಸ್‌ಎಸ್ ಕಾಂಗ್ರೆಸ್‌ನಿಂದ ಪಳಗಿದ ಕೂಸು, ಇಂದು ಅದೇ ಆರ್‌ಎಸ್‌ಎಸ್ ಕಾಂಗ್ರೆಸ್‌ಗೆ ಮುಳುವಾಗಿದೆ ಎಂದು ಜನರ ಧ್ವನಿ ಸಂಘಟನೆಯ ಸಂಸ್ಥಾಪಕ ಅಂಕುಶ ಗೋಖಲೆ ಹೇಳಿದರು.

ಸಚಿವ ಪ್ರಿಯಾಂಕ್‌ ಖರ್ಗೆ ಅವರಿಗೆ ಬೆದರಿಕೆ ಹಾಗೂ ಸಿಜೆಐ ಗವಾಯಿ ಅವರ ಮೇಲೆ ಶೂ ಎಸೆತ ಘಟನೆ ಖಂಡಿಸಿ ಹುಮನಾಬಾದ್‌ ಪಟ್ಟಣದಲ್ಲಿ ಸೋಮವಾರ ವಿವಿಧ ಸಂಘಟನೆಗಳ ಒಕ್ಕೂಟ ಹಾಗೂ ಬ್ಲಾಕ್‌ ಕಾಂಗ್ರೆಸ್‌ ಸಮಿತಿ ಬೆಂಬಲಿತದಿಂದ ಆಯೋಜಿಸಿದ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ʼಸಂವಿಧಾನಕ್ಕೆ ಮುಟ್ಟಿದರೆ ಕೈ ಕಡಿಯುತ್ತೇವೆ, ಮನೆಗೆ ನುಗ್ಗಿ ತಲ್ವಾರ್‌ದಿಂದ ಹೊಡೆಯುತ್ತೇವೆ ಎಂದು ರೋಷದಿಂದ ಹೇಳುವುದು ಮೂರ್ಖತನದ ಪರಮಾವಧಿ. ಚುನಾವಣೆ ವೇಳೆ ಹಣ, ಹೆಂಡಕ್ಕೆ ಮತ ಪಡೆದು ಕೇಂದ್ರದಲ್ಲಿ ಅಧಿಕಾರ ಚುಕ್ಕಾಣಿ ಹಿಡಿದ ಆರ್‌ಎಸ್‌ಎಸ್ ಮನಸ್ಥಿತಿಯ ನಾಯಕರು ಸಂವಿಧಾನ ಬದಲಾವಣೆ ಹೊರಟಿದ್ದಾರೆ. ಎಂತಹ ನಾಯಕರನ್ನು ಆಯ್ಕೆ ಮಾಡಬೇಕೆಂಬ ಅರಿವು ಬರದಿಲ್ಲವೋ ಅಲ್ಲಿಯವರೆಗೆ ಸಂವಿಧಾನದ ಮೌಲ್ಯಗಳು ಉಳಿಸಲು ಸಾಧ್ಯವಿಲ್ಲʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼ1940ರಲ್ಲಿ ಆರ್‌ಎಸ್‌ಎಸ್ ಮುಖಂಡ ಗೋಲ್ವಾಕರ್ ಅವರು ʼ ಒಂದು ದೇಶ, ಒಬ್ಬ ನಾಯಕ, ಒಂದು ಸಿದ್ದಾಂತ, ಒಂದು ಭಾಷೆ ಹಾಗೂ ಒಂದು ಧ್ವಜʼ ಎಂದು ಹೇಳಿದ್ದರು. ಇದು ಪ್ರಜಾಪ್ರಭುತ್ವ ವ್ಯವಸ್ಥೆಯ ವಿರುದ್ಧವಾದ ಸರ್ವಾಧಿಕಾರಿ ಸಿದ್ಧಾಂತವಾಗಿದೆ. ಈ ದೇಶದಲ್ಲಿ ಶೇ 75ರಷ್ಟು ಭಾಗ ಮನಸ್ಮೃತಿ ಜಾರಿಯಿದ್ದರೆ, ಭಾರತ ಸಂವಿಧಾನ ಕೇವಲ ಶೇ 25ರಷ್ಟು ಜಾರಿಯಲ್ಲಿದೆʼ ಎಂದರು.

ʼಮಹಿಳೆಯರಿಗೆ ಅತ್ಯಂತ ನೀಚವಾಗಿ ಕಾಣುವ ಮನಸ್ಮೃತಿ ವಿಚಾರಧಾರೆಯನ್ನು ಓಬಿಸಿ, ದಲಿತ ಸಮುದಾಯದ ಮಹಿಳೆಯರು ತಿಳಿದುಕೊಳ್ಳುವ ಅಗತ್ಯವಿದೆ. ಸಿಜೆಐ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆಯಲು ಕಾರಣವೇ ಇದೇ ಮನಸ್ಮೃತಿಯಲ್ಲಿರುವ ವರ್ಣವ್ಯವಸ್ಥೆಯ ಕೆಟ್ಟ ವಿಚಾರಧಾರೆ ಕಾರಣವಾಗಿದೆʼ ಎಂದು ಹೇಳಿದರು.

ಇದನ್ನೂ ಓದಿ : ಬೀದರ್‌ | ಆರ್‌ಎಸ್‌ಎಸ್ ಸಂಪೂರ್ಣವಾಗಿ ನಿಷೇಧಿಸಿ : ಅಂಕುಶ ಗೋಖಲೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...