ಬೀದರ್‌ | ಕುಸುಬೆ ಖರೀದಿ : ಪ್ರತಿ ಕ್ವಿಂಟಾಲ್‌ ₹5,940 ಬೆಂಬಲ ಬೆಲೆ ನಿಗದಿ

Date:

ಎಫ್‌ಎಕ್ಯೂ ಗುಣಮಟ್ಟದ ಕುಸುಬೆ ಉತ್ಪನ್ನವನ್ನು ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ದರದಲ್ಲಿ ರೈತರಿಂದ ಕುಸುಬೆ ಖರೀದಿಸಲು ಬೀದರ ಜಿಲ್ಲೆಯಲ್ಲಿ ಒಟ್ಟು 9 ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ತಿಳಿಸಿದ್ದಾರೆ.

2024-25ನೇ ಸಾಲಿಗೆ ಭಾರತ ಸರ್ಕಾರವು ಘೋಷಿಸಿರುವ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿನಲ್ಲಿ ರೈತರು ಬೆಳೆದಿರುವ ಎಫ್‌ಎಕ್ಯೂ ಗುಣಮಟ್ಟದ ಕುಸುಬೆ ಉತ್ಪನ್ನವನ್ನು ಪ್ರತಿ ಕ್ವಿಂಟಾಲ್‌ ₹5,940 ದರ ನಿಗದಿಪಡಿಸಲಾಗಿದೆ. ಸರ್ಕಾರಿ ಆದೇಶದನ್ವಯ ಜಿಲ್ಲಾ ಮಟ್ಟದ ಟಾಸ್ಕ್‌ಫೋರ್ಸ್ ಸಭೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ಕುಸುಬೆ ಖರೀದಿಸಲು ಕರ್ನಾಟಕ ಸಹಕಾರ ಎಣ್ಣೆ ಬೀಜ ಬೆಳೆಗಾರರ ಮಹಾಮಂಡಳ ನಿಯಮಿತ (ಕೆಒಎಫ್‌) ಸಂಸ್ಥೆಗೆ ನೋಡಲ್ ಏಜೆನ್ಸಿಗಳನ್ನಾಗಿ ನೇಮಿಸಿದೆ ಎಂದು ಅವರು ತಿಳಿಸಿದ್ದಾರೆ.

ರೈತರು ತಮ್ಮ ಸಮೀಪದ ಖರೀದಿ ಕೇಂದ್ರಕ್ಕೆ ಭೇಟಿ ನೀಡಿ ತಾವು ಬೆಳೆದ ಕುಸುಬೆ ಮಾರಾಟಕ್ಕೆ ನೋಂದಾಯಿಸಿಕೊಳ್ಳಬೇಕು. ಸರ್ಕಾರಿ ಆದೇಶದನ್ವಯ ಮಾ.15 ರಂದು ನಡೆದ ಜಿಲ್ಲಾ ಮಟ್ಟದ ಟಾಸ್ಕ್‌ಫೋರ್ಸ್ ಸಭೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ಕುಸುಬೆ ಖರೀದಿಸಲು ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿ ಎಕರೆಗೆ 5 ಕ್ವಿಂಟಲ್‍ನಂತೆ ಹಾಗೂ ಪ್ರತಿ ರೈತರಿಂದ ಗರಿಷ್ಠ 20 ಕ್ವಿಂಟಲ್‍ವರೆಗೆ ಖರೀದಿಸಲು ಬೆಂಬಲ ಬೆಲೆ ₹5,940 ನಿಗದಿಪಡಿಸಲಾಗಿದೆ. ಮೊತ್ತವನ್ನು ಡಿಬಿಟಿ ಮೂಲಕ ರೈತರ ಬ್ಯಾಂಕ್‌ ಖಾತೆಗೆ ಜಮಾ ಮಾಡಲಾಗುತ್ತದೆ. ತಕ್ಷಣದಿಂದ ಜಾರಿಗೆ ಬರುವಂತೆ ರೈತರ ನೋಂದಣಿ ಕಾರ್ಯವನ್ನು ಸರ್ಕಾರದ ಆದೇಶದ ದಿನಾಂಕದಿಂದ 80 ದಿನಗಳವರೆಗೆ ಹಾಗೂ ಖರೀದಿ ಪ್ರಕ್ರಿಯೆ ಸರ್ಕಾರದ ಆದೇಶದ ದಿನಾಂಕದಿಂದ 90 ದಿನಗಳವರೆಗೆ ಜರುಗಲಿದೆ.

ಕುಸುಬೆ ಖರೀದಿ ಕೇಂದ್ರಗಳ ವಿವರ: ಔರಾದ (ಬಾ) ತಾಲ್ಲೂಕು: ಪಿಕೆಪಿಎಸ್ ಔರಾದ (ಬಾ), ಪಿಕೆಪಿಎಸ್ ಕಮಲನಗರ, ಬಸವಕಲ್ಯಾಣ ತಾಲ್ಲೂಕು: ಪಿಕೆಪಿಎಸ್ ನಾರಾಯಣಪೂರ್, ಪಿಕೆಪಿಎಸ್ ಮುಡಬಿ, ಪಿಕೆಪಿಎಸ್ ಗಡಿಗೌಡಗಾಂವ್, ಭಾಲ್ಕಿ ತಾಲ್ಲೂಕು: ಪಿಕೆಪಿಎಸ್ ಭಾತಂಬ್ರಾ, ಪಿಕೆಪಿಎಸ್ ಕೋನಮೇಳಕುಂದಾ, ಬೀದರ ತಾಲ್ಲೂಕು: ಪಿಕೆಪಿಎಸ್‌ ಜನವಾಡಾ, ಹುಮನಾಬಾದ್ ತಾಲ್ಲೂಕು: ಪಿಕೆಪಿಎಸ್ ಚಿಟಗುಪ್ಪಾ

ಈ ಸುದ್ದಿ ಓದಿದ್ದೀರಾ? ಔರಾದ್‌ ಸೀಮೆಯ ಕನ್ನಡ | ಹಂತಿ ಹೊಡಿಲಾಕ್‌ ನಮ್‌ ಎತ್ಗೊಳ್‌ ಖಾಲಿನೇ ಅವಾ!

ʼಖರೀದಿ ಕೇಂದ್ರಗಳು ಲಾಗಿನ್ ಕ್ರೆಡೆನ್ಸಿಯಲ್ಸ್‌ಗಳು ಪಡೆದು ನೋಂದಣಿ ಪ್ರಕ್ರಿಯೆ ಪ್ರಾರಂಭಿಸಿದ ಮೇಲೆ ನೋಂದಣಿ ಮಾಡಿಕೊಳ್ಳಲು ಇಚ್ಛಿಸುವ ರೈತರು ಸಮೀಪದ ಖರೀದಿ ಕೇಂದ್ರಗಳಿಗೆ ನೋಂದಣಿ ಮಾಡಿಸಿಕೊಂಡು ತಮ್ಮ ಕುಸುಬೆ ಉತ್ಪನ್ನವನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಮಾರಾಟ ಮಾಡಿ ಸದರಿ ಯೋಜನೆಯ ಸದುಪಯೋಗಪಡೆದುಕೊಳ್ಳಬೇಕುʼ ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...