ಬೀದರ್‌ | ಬೇಸಿಗೆ ದಾಹ ತಣಿಸಿ ಮಾನವೀಯತೆ ಮೆರೆಯುತ್ತಿರುವ ʼಸತ್ಯಸಾಯಿ ಸಂಸ್ಥೆ ಸೇವಕರುʼ

Date:

ಬಿರು ಬೇಸಿಗೆಯ ಈ ದಿನಗಳಲ್ಲಿ ಜನ, ಜಾನುವಾರು, ಪ್ರಾಣಿ–ಪಕ್ಷಿಗಳು ಕುಡಿಯುವ ನೀರು, ನೆರಳಿಗಾಗಿ ದಿನವಿಡೀ ಪರಿತಪಿಸುವುದು ಬಿಸಿಲನಾಡು ಬೀದರ್ ಜಿಲ್ಲೆಯಲ್ಲಿ ನಿತ್ಯ ಕಂಡುಬರುವ ಸಾಮಾನ್ಯ ದೃಶ್ಯವಾಗಿದೆ.

ಜಿಲ್ಲೆಯಲ್ಲಿ 40 ಡಿಗ್ರಿ ಸೆಲ್ಸಿಯಸ್‌ನಷ್ಟು ಪ್ರಖರವಾದ ಬಿಸಿಲಿಗೆ ಜನರು ತಿರುಗಾಡಲು ಅಕ್ಷರಶಃ ಪರದಾಡುತ್ತಿದ್ದಾರೆ. ಈ ರಣಬಿಸಿಲಿನಲ್ಲಿ ದಣಿದ ಪ್ರಾಣಿ, ಪಕ್ಷಿಗಳಿಗೆ ನೀರು, ಕಾಳು, ಆಹಾರದ ವ್ಯವಸ್ಥೆಯನ್ನು ಅನೇಕರು ಒದಗಿಸಿ ಮಾನವೀಯತೆ ಮೆರೆಯುತ್ತಿದ್ದಾರೆ.

ಬೀದರ್‌ ನಗರಸಭೆ ಎದುರಗಡೆಯ ಬಸ್‌ ನಿಲ್ದಾಣದ ಆವರಣದಲ್ಲಿ ಶ್ರೀ ಸತ್ಯಸಾಯಿ ಸೇವಾ ಸಂಸ್ಥೆಯ ಸೇವಕರು ಕಳೆದ ಒಂದು ತಿಂಗಳಿಂದ ಉಚಿತ ನೀರಿನ ವ್ಯವಸ್ಥೆ ಮಾಡಿರುವುದು ಮಾನವೀಯತೆಗೆ ಸಾಕ್ಷಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಸಿಲ ಧಗೆಯಿಂದ ಬಾಯಾರಿ ಬಂದ ಪ್ರಯಾಣಿಕರಿಗೆ, ವಿದ್ಯಾರ್ಥಿಗಳಿಗೆ, ವಾಹನ ಚಾಲಕರಿಗೆ ʼಬಿಸುಲ್‌ ಭಾಳ್‌ ಅದಾ, ಬರೀ ತಣ್ಣಂದ್‌ ನೀರ್‌ ಕುಡೀರಿʼ ಎಂದು ಲೋಟದಲ್ಲಿ ಶುದ್ಧ ತಂಪಾದ ನೀರು ಕೈಗಿಡುವ ಸೇವಕರ ಕಾರ್ಯ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.

ʼಕಳೆದ ಒಂದು ತಿಂಗಳಿಂದ ನಮ್ಮ ಸಂಸ್ಥೆಯಿಂದ ನೀರಿನ ಕ್ಯಾನ್‌ ಇಡಲಾಗಿದೆ. ಸಂಸ್ಥೆಯ ಇಬ್ಬರು ಸೇವಕರು ದಿನಪೂರ್ತಿ ಇಲ್ಲೇ ಕುಳಿತು ನಿರ್ವಹಣೆ ಮಾಡುತ್ತಿದ್ದೇವೆ. ಪ್ರತಿ ನಿತ್ಯ 30 ಕ್ಯಾನ್‌ ಶುದ್ಧ ಕುಡಿಯುವ ನೀರು ಖರೀದಿಸಿ ಬೆಳಿಗ್ಗೆ 11 ಗಂಟೆಯಿಂದ ಸಂಜೆಯವರೆಗೆ ಪೂರೈಸಲಾಗುತ್ತಿದೆʼ ಎಂದು ನಿವೃತ್ತ ಶಿಕ್ಷಕರು ಆದ ಸಂಸ್ಥೆಯ ಸೇವಕರಾದ ಶಿವರಾಜ ಮದರಗಿ ಹೇಳುತ್ತಾರೆ.

WhatsApp Image 2025 05 06 at 3.51.52 PM
ಸತ್ಯಸಾಯಿ ಸೇವಾ ಸಂಸ್ಥೆಯಿಂದ ಸ್ಥಾಪಿಸಲಾದ ನೀರಿನ ಕ್ಯಾನ್‌ಗಳಿಂದ ಸಾರ್ವಜನಿಕರು ತಂಪಾದ ನೀರು ಸೇವಿಸಿದರು.

ʼಬೇಸಿಗೆಯಲ್ಲಿ ಬಾಯಾರಿ ಬಂದ ಜನರಿಗೆ ನೀರು ಕೊಡುವುದು ಮಾನವೀಯ ಕೆಲಸ. ಸೇವಾ ಮನೋಭಾವನೆ ದೃಷ್ಟಿಯಿಂದ ನಮ್ಮ ಸಂಸ್ಥೆಯಿಂದ ಒಂದು ಕಡೆ ತಂಪು ನೀರಿನ ವ್ಯವಸ್ಥೆ ಮಾಡಲಾಗಿದೆ. ಹಳ್ಳಿಗಳಿಂದ ಬಂದ ಜನರು, ವಿದ್ಯಾರ್ಥಿಗಳು, ವೃದ್ಧರಿಗೆ ಆಸರೆಯಾಗಿದೆ. ಮುಂದಿನ ವರ್ಷ ಇದು ವಿಸ್ತರಿಸಲಾಗುವುದುʼ ಎಂದು ಸೇವಕರಾದ ವಿಮಲಬಾಯಿ ಫುಲೇಕರ್‌, ಸ್ವಪ್ನಾ ಪುರಾಣಿಕ ಹೇಳಿದರು.

ಹೊರಗಡೆ ಅಂಗಡಿಗಳಲ್ಲಿ ಒಂದು ಲೀಟರ್‌ ನೀರಿನ ಬಾಟಲಿಗೆ 20 ರೂ. ದರ ಇದೆ. ಸತ್ಯಸಾಯಿ ಸಂಸ್ಥೆಯಿಂದ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಿರುವುದು ಮಾನವೀಯ ಕಾರ್ಯ. ಗ್ರಾಮೀಣ ಭಾಗದಿಂದ ಬಂದ ಅನೇಕರು ಇಲ್ಲೇ ಬಂದು ತಂಪಾದ ನೀರು ಬಾಟಲಿ ತುಂಬಿಕೊಂಡು ಹೋಗುತ್ತಿದ್ದಾರೆ. ಇದರಿಂದ ಕುಡಿಯುವ ನೀರು ಖರೀದಿಸುವುದು ತಪ್ಪಿದೆ. ಜಿಲ್ಲಾಡಳಿತ ಮಾಡಬೇಕಾದ ಕಾರ್ಯ ಸಂಸ್ಥೆಯವರು ಮಾಡುತ್ತಿರುವುದು ನಿಜಕ್ಕೂ ಶ್ಲಾಘನೀಯ ಎಂದು ವಿದ್ಯಾರ್ಥಿಯೊಬ್ಬರು ಪ್ರತಿಕ್ರಿಯಿಸಿದರು.

WhatsApp Image 2025 02 06 at 11.55.32 e1738823214905
ಬಾಲಾಜಿ ಕುಂಬಾರ್
+ posts

ಬಾಲಾಜಿ ಕುಂಬಾರ ಅವರು ಔರಾದ್ ತಾಲ್ಲೂಕಿನ ಚಟ್ನಾಳ ಗ್ರಾಮದವರು. ಸಾಹಿತ್ಯ, ಶಿಕ್ಷಣ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ 'ಈದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಬೀದರ್ ಜಿಲ್ಲಾ ಹಿರಿಯ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕವಿತೆ, ಲೇಖನ, ದೇಶಿ ನುಡಿ ಬರಹ ಬರೆಯುವುದು ಇವರ ಮುಖ್ಯ ಹವ್ಯಾಸ.

ಪೋಸ್ಟ್ ಹಂಚಿಕೊಳ್ಳಿ:

ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ ಅವರು ಔರಾದ್ ತಾಲ್ಲೂಕಿನ ಚಟ್ನಾಳ ಗ್ರಾಮದವರು. ಸಾಹಿತ್ಯ, ಶಿಕ್ಷಣ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ 'ಈದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಬೀದರ್ ಜಿಲ್ಲಾ ಹಿರಿಯ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕವಿತೆ, ಲೇಖನ, ದೇಶಿ ನುಡಿ ಬರಹ ಬರೆಯುವುದು ಇವರ ಮುಖ್ಯ ಹವ್ಯಾಸ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...