ಬೀದರ್‌ | ನಾರಾಯಣ ಹೃದಯಾಲಯದಿಂದ ಶಿಷ್ಯವೇತನ: ಡಾ.ಅಬ್ದುಲ್ ಖದೀರ್

Date:

ಪ್ರಸಕ್ತ ಶೈಕಣಿಕ ವರ್ಷದಲ್ಲಿ ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹದ ಪದವಿಪೂರ್ವ ಕಾಲೇಜುಗಳಲ್ಲಿ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್)ಯ ತರಬೇತಿ ಪಡೆಯುವ 125 ಪುನರಾವರ್ತಿತ ಅಭ್ಯರ್ಥಿಗಳಿಗೆ ಬೆಂಗಳೂರಿನ ನಾರಾಯಣ ಹೃದಯಾಲಯ ಶಿಷ್ಯವೇತನ ನೀಡಲಿದೆ.

‘ನಾರಾಯಣ ಹೃದಯಾಲಯವು ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹದ ಸಹಯೋಗದೊಂದಿಗೆ ಸತತ ಮೂರನೇ ವರ್ಷವೂ ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಕೊಡಲು ನಿರ್ಧರಿಸಿದೆʼ ಎಂದು ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಡಾ.ಅಬ್ದುಲ್ ಖದೀರ್ ತಿಳಿಸಿದ್ದಾರೆ.

ʼನಾರಾಯಣ ಹೃದಯಾಲಯ ಒಟ್ಟು 125 ವಿದ್ಯಾರ್ಥಿಗಳಿಗೆ ಶಿಷ್ಯವೇತನ ನೀಡಲಿದ್ದು, ಈ ಪೈಕಿ 50 ಸ್ಥಾನಗಳನ್ನು ಕಲ್ಯಾಣ ಕರ್ನಾಟಕ ಭಾಗದ ಕನ್ನಡ ಮಾಧ್ಯಮ ಅಭ್ಯರ್ಥಿಗಳಿಗೆ ಮೀಸಲಿಡಲಾಗಿದೆ. ಉಳಿದ 75 ಸ್ಥಾನಗಳಿಗೆ ದೇಶದ ಎಲ್ಲೆಡೆಯ ಅಭ್ಯರ್ಥಿಗಳು ಹೆಸರು ನೋಂದಾಯಿಸಬಹುದಾಗಿದೆʼ ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಶಿಷ್ಯವೇತನಕ್ಕೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಬೋಧನಾ ಶುಲ್ಕದಲ್ಲಿ ಶೇ ೧೦೦ ರಷ್ಟು ವಿನಾಯಿತಿ ಇರಲಿದೆ. ೧೨೫ ಅಭ್ಯರ್ಥಿಗಳ ಪೈಕಿ ೧೦೦ ವಿದ್ಯಾರ್ಥಿಗಳಿಗೆ ಬೀದರ್ ಹಾಗೂ 25 ವಿದ್ಯಾರ್ಥಿಗಳಿಗೆ ಕಲಬುರಗಿಯಲ್ಲಿ ತರಬೇತಿ ನೀಡಲಾಗುವುದು ಎಂದು ತಿಳಿಸಿದ್ದಾರೆ. ಶಾಹೀನ್ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಜತೆಗೂಡಿ ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದುʼ ಎಂದು ಹೇಳಿದ್ದಾರೆ.

ಈ ವರ್ಷದ ನೀಟ್‌ನಲ್ಲಿ 400ಕ್ಕೂ ಅಧಿಕ ಅಂಕ ಪಡೆದ ಕಲ್ಯಾಣ ಕರ್ನಾಟಕದ ಅಭ್ಯರ್ಥಿಗಳು, 350ಕ್ಕೂ ಅಧಿಕ ಅಂಕ ಗಳಿಸಿದ ತೆಲಂಗಾಣದ ಅಭ್ಯರ್ಥಿಗಳು, 475ಕ್ಕೂ ಹೆಚ್ಚು ಅಂಕ ಪಡೆದ ಹಾಗೂ ವಾರ್ಷಿಕ ರೂ. 5 ಲಕ್ಷಕ್ಕೂ ಕಡಿಮೆ ಕುಟುಂಬದ ಆದಾಯ ಹೊಂದಿರುವ ಇತರ ರಾಜ್ಯಗಳ ಅಭ್ಯರ್ಥಿಗಳು ಶಿಷ್ಯವೇತನಕ್ಕೆ ಅರ್ಹರಾಗಿರುತ್ತಾರೆ ಎಂದಿದ್ದಾರೆ.

ಶಿಷ್ಯವೇತನಕ್ಕೆ ಹೆಸರು ನೋಂದಾಯಿಸಲು ಜುಲೈ 31 ಕೊನೆಯ ದಿನವಾಗಿದೆ. www.shaheengroup.org ನಲ್ಲಿ ಹೆಸರು ನೋಂದಾಯಿಸಬಹುದು. ಮಾಹಿತಿಗೆ ಟೊಲ್ ಫ್ರೀ ಸಂಖ್ಯೆ 18001216235ಗೆ ಸಂಪರ್ಕಿಸಬಹುದು

ಕಲ್ಯಾಣ ಕರ್ನಾಟಕ ಭಾಗಕ್ಕೆ ಸಂಬಂಧಿಸಿದ ಅಭ್ಯರ್ಥಿಗಳ ಹೆಸರು ನೋಂದಣಿ ಹಾಗೂ ಇತರ ಮಾಹಿತಿಗೆ ಸುರೇಶ ಚನಶೆಟ್ಟಿ (ಬೀದರ್- 9986792323), ವಿಜಯಕುಮಾರ ಪಾಟೀಲ ತೇಗಲತಿಪ್ಪಿ (ಕಲಬುರಗಿ- 98803 49025) ಸಿದ್ದಪ್ಪ ಹೊಟ್ಟಿ (ಯಾದಗಿರಿ- 9480957169), ಡಾ.ನಿಷ್ಟಿರುದ್ರಪ್ಪ (ಬಳ್ಳಾರಿ- 9342726398), ಶರಣಗೌಡ ಪೊಲೀಸ್ ಪಾಟೀಲ (ಕೊಪ್ಪಳ- 9741980328) ಅಥವಾ ರಂಗಣ್ಣ ಪಾಟೀಲ (ರಾಯಚೂರು- 9095392296)ಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಒಂದೇ ಹೆಸರಿನ ಮೂವರು ಸಹೋದರರು; ಹೆಸರಿನ ಹಿಂದಿನ ಗುಟ್ಟೇನು ಗೊತ್ತಾ!

ಅರ್ಹ ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳು ವೈದ್ಯಕೀಯ ಕೋರ್ಸ್ ಕನಸು ನನಸಾಗಿಸಲು ನೀಡಲಾಗುತ್ತಿರುವ ಶಿಷ್ಯವೇತನದ ಲಾಭ ಪಡೆಯಬೇಕು ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...