ಬೀದರ್ | ಲಿಂಗತ್ವ ಅಲ್ಪಸಂಖ್ಯಾತ ಯುವತಿ ಮೇಲೆ ಹಲ್ಲೆ : ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

Date:

ಲಿಂಗತ್ಯ ಮತ್ತು ಲೈಂಗಿಕ ಬಹುತ್ವಕ್ಕಾಗಿ ಚಳುವಳಿಯಲ್ಲಿ ಸಕ್ರಿಯವಾಗಿರುವ ಬೆಂಗಳೂರು ಮೂಲದ 24 ವರ್ಷದ ಲಿಂಗತ್ವ ಅಲ್ಪಸಂಖ್ಯಾತ ಯುವತಿ ಸುಕನ್ಯಾ ಮೇಲೆ ಹಲ್ಲೆ ಎಸಗಿದ ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಎಮ್.ಜಿ.ಎಸ್.ಪಿ ಸಂಘಟನೆಯ ಸದಸ್ಯರಾದ ಭೀಮ ಆಗ್ರಹಿಸಿದರು.

ಬೀದರ್ ನಗರದ ಪತ್ರಿಕಾ ಭವನದಲ್ಲಿ ಬುಧವಾರ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿರುವ ಅವರು, ‘ಇತ್ತಿಚೀಗೆ ರಾಜ್ಯ ರಾಜ್ಯಧಾನಿ ಬೆಂಗಳೂರಿನ ಕೃಷ್ಣರಾಜಪುರ ನಿವಾಸಿ ಸುಕನ್ಯಾ ಅವರ ಮೇಲೆ ನಡೆದ ಭೀಕರ ಹಲ್ಲೆ, ಅಪಹರಣ, ಅಕ್ರಮ ಬಂಧನ ಮತ್ತು ಬಲವಂತದ ತಲೆ ಬೋಳಿಸುವ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇವೆ’ ಎಂದರು.

‘ಅ.30ರಂದು ಸುಕನ್ಯಾ ಅವರನ್ನು ಬೆಂಗಳೂರಿನ ಕೃಷ್ಣರಾಜಪುರಂನಿಂದ ಅಪಹರಿಸಲಾಗಿದ್ದು, ಮರದ ಕಟ್ಟಿಗೆಯಿಂದ ಹೊಡೆದು ಕ್ರೂರವಾಗಿ ಹಿಂಸೆಗೆ ಒಳಪಡಿಸಿ ಬಲವಂತವಾಗಿ ತಲೆ ಬೋಳಿಸುವ ಮೂಲಕ ಮಹಿಳೆಯಾಗಿ ಅವರ ಲಿಂಗತ್ವ ಅಸ್ತಿತ್ವವನ್ನು ಅಳಿಸಿ ಹಾಕುವ ಉದ್ದೇಶಿತ ಪ್ರಯತ್ನ ಮಾಡಲಾಯಿತು. ಈ ಹಲ್ಲೆ, ಅವರು ಒಂದು ಹಿಜ್ರಾ ಫರಾಣಾಯಿಂದ ಮತ್ತೊಂದಕ್ಕೆ ಸ್ಥಳಾಂತರಗೊಳ್ಳಲು ಬಯಸಿದ್ದುದರಿಂದ ನಡೆದಿರುವುದಾಗಿ ಹೇಳಲಾಗಿದೆ. ಸುಕನ್ಯಾ ಅವರನ್ನು ಅವರ ಇಚ್ಚೆ ವಿರುದ್ಧವಾಗಿ ಅ.31ರಂದು ಮಧ್ಯಾಹ್ನದವರೆಗೆ ಬಂಧನದಲ್ಲಿಟ್ಟಿದ್ದರು’ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ನಾಗರಿಕ ಸಮಾಜದ ಸಂಘಟನೆಗಳು ಮತ್ತು ಹೋರಾಟಗಾರರ ಸಮಯೋಚಿತ ಮಧ್ಯಸ್ಥಿಕೆಯಿಂದ ಪೊಲೀಸರು ಅವರನ್ನು ರಕ್ಷಿಸಿದರು. ಎಫ್‌ಐಆರ್ ದಾಖಲಾಗಿದೆ ಮತ್ತು ತನಿಖೆಗಳು ಪ್ರಗತಿಯಲ್ಲಿವೆ. ಈ ಕ್ರೂರ ಘಟನೆ ಹಿಜ್ರಾ ವ್ಯವಸ್ಥೆಯೊಳಗಿನ ಸದಸ್ಯರು ವಿಶೇಷವಾಗಿ ಎಷ್ಟೋ ಬಾರಿ ಪೊಲೀಸರಿಂದ, ಸಾರ್ವಜನಿಕರಿಂದ, ಕೆಲವೊಮ್ಮೆ ತಮ್ಮದೇ ಸಮುದಾಯದೊಳಗಿನಿಂದಲೂ ಹಿಂಸೆಗೆ ಒಳಗಾಗುವವರಾಗುತ್ತಾರೆ ಎಂಬ ಕಹಿ ವಾಸ್ತವತೆ ತಮ್ಮ ಮುಂದೆ ಇರಿಸಲಾಗುತ್ತಿದೆ’ ಎಂದರು.

‘ಹಿಂಸೆ ತಡೆಯಲು ಮತ್ತು ಪ್ರತಿಕ್ರಿಯಿಸಲು ಸಮುದಾಯದ ನೇತೃತ್ವದ ವ್ಯವಸ್ಥೆಗಳನ್ನು ಬಲಪಡಿಸುವುದು, ಪರಸ್ಪರ ಬೆಂಬಲವನ್ನು ಗಟ್ಟಿಗೊಳಿಸುವುದು, ಮತ್ತು ಎಲ್ಲರಿಗೂ ಸುರಕ್ಷತೆ, ಗೌರವ ಹಾಗೂ ಐಕ್ಯತೆಯ ಸಂಸ್ಕೃತಿಯನ್ನು ಉತ್ತೇಜಿಸುವುದೇ ನಮ್ಮ ಉದ್ದೇಶ, ಸುಕನ್ಯಾ ಅವರು ಅನುಭವಿಸಿದ ಹಿಂಸೆ ಅವರ ಮಾನವ ಹಕ್ಕು ಮತ್ತು ಗೌರವದಿಂದ ಬದುಕುವ ಅವರ ಹಕ್ಕು ಉಲ್ಲಂಘನೆಯಾಗಿದೆ. ಯಾವುದೇ ಮೂಲದಿಂದಲಾದರೂ ನಡೆಯುವ ಹಿಂಸೆಯ ವಿರುದ್ಧ ಸುಕನ್ಯಾ ಮತ್ತು ಎಲ್ಲಾ ಲಿಂಗತ್ವ ಅಲ್ಪ ಸಂಖ್ಯಾತ ವ್ಯಕ್ತಿಗಳೊಂದಿಗೆ ದೃಢವಾಗಿ ನಿಂತಿದೆ ಮತ್ತು ಕರ್ನಾಟಕದಾದ್ಯಂತ ಸಮುದಾಯದ ಎಲ್ಲ ಸದಸ್ಯರ ನ್ಯಾಯ, ಸಮಾನತೆ ಮತ್ತು ಸುರಕ್ಷತೆಯ ಹೋರಾಟ ಮುಂದುವರೆಯಲಿದೆ’ ಎಂದು ತಿಳಿಸಿದರು.

ವಿಶ್ವಕ್ರಾಂತಿ ದಿವ್ಯಪೀಠದ ಅಧ್ಯಕ್ಷ ಓಂಪ್ರಕಾಶ ರೊಟ್ಟೆ ಮಾತನಾಡಿ, ‘ಸುಕನ್ಯಾ ಅವರಿಗೆ ನ್ಯಾಯ ದೊರಕುವಂತೆ ಮತ್ತು ಎಲ್ಲಾ ಲಿಂಗತ್ವ ಅಲ್ಪಸಂಖ್ಯಾತ ವ್ಯಕ್ತಿಗಳ ಸುರಕ್ಷತೆಯನ್ನು ಖಚಿತಪಡಿಸುವಂತೆ ಕರ್ನಾಟಕ ಸರ್ಕಾರ ಮತ್ತು ಸಂಬಂಧಿತ ಅಧಿಕಾರಿಗಳಿಂದ ತುರ್ತು ಮತ್ತು ಸಮಗ್ರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ : ಬೀದರ್ | ಪ್ರತಿ ಟನ್ ಕಬ್ಬಿಗೆ ₹3,300 ಬೆಲೆ ನಿಗದಿಗೆ ಆಗ್ರಹಿಸಿ ರಸ್ತೆಗಿಳಿದ ರೈತರು

ಸಾಮಾಜಿಕ ಕಾರ್ಯಕರ್ತ ಜಗದೀಶ್ವರ ಬಿರಾದಾರ ಮಾತನಾಡಿ, ‘ಲಿಂಗತ್ಯ ಅಲ್ಪ ಸಂಖ್ಯಾತರಿಗೆ ಸರ್ಕಾರಿ ಉದ್ಯೋಗಗಳಲ್ಲಿ ವಿಶೇಷ ನೇಮಕಾತಿ, ಉದ್ಯಮಶೀಲತೆ ಯೋಜನೆಗಳು, ಕೌಶಲ್ಯಾಭಿವೃದ್ಧಿ, ಮತ್ತು ಸಾಮರ್ಥ್ಯ ಅಭಿವೃದ್ಧಿ ಕಾರ್ಯಕ್ರಮಗಳ ಮೂಲಕ ಜೀವನೋಪಾಯದ ಅವಕಾಶಗಳನ್ನು ವಿಸ್ತರಿಸಬೇಕು, ಲಿಂಗತ್ಯ ಅಲ್ಪ ಸಂಖ್ಯಾತರಿಗೆ ಸುರಕ್ಷಿತ, ಒಳಗೊಂಡ ಮತ್ತು ಕೈಗೆಟುಕುವ ವಸತಿ ವ್ಯವಸ್ಥೆ ಒದಗಿಸಬೇಕು’ ಎಂದರು.

ಎಮ್.ಜಿ.ಎಸ್.ಪಿ ಸದಸ್ಯೆ ರೋಸ್ನಿ ಹಾಗೂ ಇತರರು ಪತ್ರಿಕಾಗೋಷ್ಠಿಯಲ್ಲಿದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...