ಬೀದರ್ | ಕನ್ನಡ, ಉರ್ದು ಮಾಧ್ಯಮದ 250 ವಿದ್ಯಾರ್ಥಿಗಳಿಗೆ ‘ಶಾಹೀನ್ ಕಲ್ಯಾಣ ಕರ್ನಾಟಕ ವಿದ್ಯಾರ್ಥಿ ವೇತನ’ : ಅಬ್ದುಲ್ ಖದೀರ್

Date:

ಬೀದರ್ ನಗರದ ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹವು ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ ಕನ್ನಡ ಹಾಗೂ ಉರ್ದು ಮಾಧ್ಯಮದ ವಿದ್ಯಾರ್ಥಿಗಳಿಗೆ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ‘ಶಾಹೀನ್ ಕಲ್ಯಾಣ ಕರ್ನಾಟಕ ವಿದ್ಯಾರ್ಥಿ ವೇತನ’ ಯೋಜನೆ ಜಾರಿಗೊಳಿಸಲು ನಿರ್ಧರಿಸಿದೆ ಎಂದು

ಈ ವರ್ಷ ಸಮೂಹದ ಕಲ್ಯಾಣ ಕರ್ನಾಟಕ ಭಾಗದ ಒಂಬತ್ತು ಪದವಿಪೂರ್ವ ವಿಜ್ಞಾನ ಕಾಲೇಜುಗಳಲ್ಲಿ ಪ್ರವೇಶ ಪಡೆಯುವ ಒಟ್ಟು 250 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಕೊಡಲಾಗುವುದು ಎಂದು ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಡಾ. ಅಬ್ದುಲ್
ಖದೀರ್ ತಿಳಿಸಿದ್ದಾರೆ.

ಬೀದರ್ ಮುಖ್ಯ ಶಾಖೆಯಲ್ಲಿ 75, ಕಲಬುರಗಿ ಶಾಖೆಯಲ್ಲಿ 35, ರಾಯಚೂರು, ಬಳ್ಳಾರಿ, ಯಾದಗಿರಿ, ಔರಾದ್, ಬಸವಕಲ್ಯಾಣ, ಚಿಟಗುಪ್ಪ ಹಾಗೂ ಹುಮನಾಬಾದ್ ಶಾಖೆಗಳಲ್ಲಿ ತಲಾ 20 ವಿದ್ಯಾರ್ಥಿಗಳಿಗೆ ಶಿಷ್ಯವೇತನ ನೀಡಲಾಗುವುದು ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಸ್ಸೆಸ್ಸೆಲ್ಸಿಯಲ್ಲಿ ಶೇ90ಕ್ಕೂ ಹೆಚ್ಚು ಅಂಕ ಗಳಿಸಿದ ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ ಕನ್ನಡ ಹಾಗೂ ಉರ್ದು ಮಾಧ್ಯಮದ ವಿದ್ಯಾರ್ಥಿಗಳು ಶಿಷ್ಯವೇತನಕ್ಕೆ ಸಮೂಹದ ಆಯಾ ಶಾಖೆಗಳಲ್ಲಿ ಅಥವಾ ಆನ್‍ಲೈನ್‍ನಲ್ಲಿ (www.shaheengroup.org) ಮೇ 15 ರ ಒಳಗೆ‌ ಅರ್ಜಿ ಸಲ್ಲಿಸಬಹುದು ಎಂದು ರವಿವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೇ 18 ರಂದು ಆಯಾ ಶಾಖೆಗಳಲ್ಲಿ ಸಂದರ್ಶನ ನಡೆಯಲಿದೆ. ಅರ್ಹತೆ ಆಧಾರದಲ್ಲಿ ಆಯ್ಕೆ ಜರುಗಲಿದೆ. ಗ್ರಾಮೀಣ ಭಾಗದ, ಅಂಗವಿಕಲ ಹಾಗೂ ಅನಾಥ ಮಕ್ಕಳಿಗೆ ವಿಶೇಷ ಆದ್ಯತೆ ಕೊಡಲಾಗುವುದು. ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ರೂಪದಲ್ಲಿ ಕಾಲೇಜು ಶುಲ್ಕದಲ್ಲಿ ಶೇ 75 ರಷ್ಟು ರಿಯಾಯಿತಿ ಸಿಗಲಿದೆ ಎಂದು ಹೇಳಿದ್ದಾರೆ.

ʼಶಾಹೀನ್ ಕಾಲೇಜಿನ 2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಕನ್ನಡ ಮಾಧ್ಯಮ ವಿದ್ಯಾರ್ಥಿಗಳ ತೇರ್ಗಡೆ ಹಾಗೂ ಸಾಧನೆ ಪ್ರಮಾಣ ಆಂಗ್ಲ ಮಾಧ್ಯಮ ವಿದ್ಯಾರ್ಥಿಗಳಿಗಿಂತ ಶೇ 13 ರಷ್ಟು ಹೆಚ್ಚಿದೆ. ಉರ್ದು ಮಾಧ್ಯಮ ವಿದ್ಯಾರ್ಥಿಗಳು ಮೂರನೇ ಸ್ಥಾನದಲ್ಲಿದ್ದಾರೆ. ಇತರ ವಿದ್ಯಾರ್ಥಿಗಳಿಗಿಂತ ಹಾಸ್ಟೆಲ್ ವಿದ್ಯಾರ್ಥಿಗಳ ಸಾಧನೆ ಹೆಚ್ಚಿದೆ. ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ ಕನ್ನಡ ಹಾಗೂ ಉರ್ದು ಮಾಧ್ಯಮದ ವಿದ್ಯಾರ್ಥಿಗಳನ್ನು ಸಾಧನೆಗೆ ಪ್ರೇರೇಪಿಸಲು ವಿದ್ಯಾರ್ಥಿ ವೇತನ ಯೋಜನೆ ರೂಪಿಸಲಾಗಿದೆʼ ಎಂದು ಹೇಳಿದ್ದಾರೆ.

ಗ್ರಾಮೀಣ ಭಾಗದಲ್ಲಿ ಇನ್ನಷ್ಟು ಶೈಕ್ಷಣಿಕ ಜಾಗೃತಿ ಮೂಡಬೇಕಿದೆ. ಸಾವಿರಾರು ವಿದ್ಯಾರ್ಥಿಗಳ ವೈದ್ಯಕೀಯ ಕೋರ್ಸ್ ಕನಸು ನನಸಾಗಿಸಿದ ಹೆಮ್ಮೆ ಶಾಹೀನ್‍ಗೆ ಇದೆ. ಶಾಹೀನ್‍ನಲ್ಲಿ ಓದಿದ 100 ಕುಟುಂಬಗಳ ತಲಾ ಇಬ್ಬರು-ಮೂವರು ಮಕ್ಕಳು ವೈದ್ಯರಾದ ಉದಾಹರಣೆಗಳು ಇವೆ. ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳು ಶಿಷ್ಯವೇತನದ ಲಾಭ ಪಡೆಯಬೇಕು ಎಂದು ಮನವಿ ಮಾಡಿದ್ದಾರೆ.‌

ಈ ಸುದ್ದಿ ಓದಿದ್ದೀರಾ? ಬೀದರ್‌ | ಪಿಯುಸಿ ಮರು ಮೌಲ್ಯಮಾಪನ : ಔರಾದ್ ತಾಲ್ಲೂಕಿಗೆ ಪ್ರಥಮ ಸ್ಥಾನ ಪಡೆದ ಆರತಿ

ಶಿಷ್ಯವೇತನದ ಕುರಿತು ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9964763018 (ಬೀದರ್ ಮುಖ್ಯ ಕಚೇರಿ), 7666048172 (ಕಲಬುರಗಿ ಶಾಖೆ), 9916149428 (ಔರಾದ್), 9845058018 (ಬಸವಕಲ್ಯಾಣ), 8971222784 (ಚಿಟಗುಪ್ಪ), 7026951056 (ಹುಮನಾಬಾದ್), 9880539999 (ರಾಯಚೂರು), 9986670286 (ಯಾದಗಿರಿ) ಅಥವಾ 8553165562 (ಬಳ್ಳಾರಿ ಶಾಖೆ)ಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...