ಬೀದರ್ ಶಾಹೀನ್ ಶಾಲೆಯ ವಿರುದ್ಧದ ದೇಶದ್ರೋಹ ಪ್ರಕರಣ ರದ್ದು

Date:

  • 2020ರ ಜನವರಿಯಲ್ಲಿ ನಡೆದಿದ್ದ ನಾಟಕ ಪ್ರದರ್ಶನ
  • ಸಿಎಎ ವಿರೋಧಿ ಕಥಾವಸ್ತು ಹೊಂದಿದ್ದ ನಾಟಕ

ನಾಟಕ ಪ್ರದರ್ಶನವೊಂದರಲ್ಲಿ ಪ್ರದಾನಿ ಮೋದಿ ಮತ್ತು ಕೇಂದ್ರ ಸರ್ಕಾರವನ್ನು ಟೀಕಿಸಿದ್ದ ಆರೋಪದ ಮೇಲೆ ಬೀದರ್‌ನ ಶಾಹೀನ್ ಶಾಲೆಯ ವಿರುದ್ಧ ದಾಖಲಿಸಲಾಗಿದ್ದ ದೇಶದ್ರೋಹ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್‌ನ ಕಲಬುರಗಿ ಪೀಠ ವಜಾಗೊಳಿಸಿದೆ.

2020ರ ಜನವರಿಯಲ್ಲಿ ನಡೆದ ಶಾಲೆಯ ಕಾರ್ಯಕ್ರಮದಲ್ಲಿ 4ನೇ ತರಗತಿಯ ವಿದ್ಯಾರ್ಥಿಗಳು ಸಿಎಎ ವಿರುದ್ಧದ ಕಥೆಯುಳ್ಳ ನಾಟಕವನ್ನು ಪ್ರದರ್ಶನ ಮಾಡಿದ್ದರು. ನಾಟಕದಲ್ಲಿ ಮೋದಿ ವಿರುದ್ಧ ಮತ್ತು ಮತೀಯ ನಿದಂನೆಯ ಪದಗಳನ್ನು ಬಳಸಲಾಗಿದೆ ಎಂದು ಹಿಂದುತ್ವವಾದಿ ಮುಖಂಡ ನೀಲೇಶ್ ರಕ್ಷಲಾ ಎಂಬಾತ ದೇಶದ್ರೋಹ ದೂರು ದಾಖಲಿಸಿದ್ದರು.

ಅವರ ದೂರಿನ ಆಧಾರದ ಮೇಲೆ ಶಾಲೆಯ ಆಡಳಿತ ಮಂಡಳಿ ವಿರುದ್ಧ ಐಪಿಸಿ ಸೆಕ್ಷನ್‌ 504, 505(2), 124(ಎ), 153(ಎ) ಅಡಿಯಲ್ಲಿ ಬೀದರ್ ಪೊಲೀಸರು ಪ್ರಕರಣ ದಾಖಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಕರಣ ನ್ಯಾಯಲಯದ ಮುಂದೆ ಬಂದಿತ್ತು. ಶಾಲೆಯ ವಿರುದ್ಧದ ಆರೋಪವನ್ನು ಆಡಳಿತ ಮಂಡಳಿ ನಿರಾಕರಿಸಿತ್ತು. ಶಾಲೆಯ ಮಕ್ಕಳನ್ನು ಪೊಲೀಸರು ದೇಶ ವಿರೋಧಿಗಳಂತೆ ನೋಡುತ್ತಿದ್ದಾರೆ. ಪ್ರತಿದಿನ ಶಾಲೆಗೆ ಬಂದು ಪರಿಶೀಲನೆ ನಡೆಸಿ, ಮಕ್ಕಳಲ್ಲಿ ಭಯ ಉಂಟು ಮಾಡುತ್ತಿದ್ದಾರೆ ಎಂದು ನ್ಯಾಯಾಲಯದಲ್ಲಿ ಹೇಳಿತ್ತು.

ಈ ಸುದ್ದಿ ಓದಿದ್ದೀರಾ?: ಕೋಲಾರ | ಸಾಲ ಮರುಪಾವತಿಗೆ ತೆರಳಿದ್ದ ಅಧಿಕಾರಿಗಳಿಗೆ ಮಹಿಳೆಯರ ತರಾಟೆ

ಒಂಬತ್ತು ವರ್ಷದಷ್ಟು ಕಿರಿಯ ಮಕ್ಕಳು ಸೇರಿದಂತೆ 85 ಮಕ್ಕಳು ಪೊಲೀಸ್‌ ವಿಚಾರಣೆ ಎದುರಿಸಬೇಕಾಯಿತು ಇದು ಮಕ್ಕಳ ಮನಃಸ್ಥಿತಿಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ ಎಂದು ವಾದಿಸಿತ್ತು.

2021ರ ಆಗಸ್ಟ್‌ 17ರಂದು ವಿಚಾರಣೆ ನಡೆಸಿದ್ದ ಹೈಕೋರ್ಟ್‌ನ ಬೆಂಗಳೂರು ಪೀಠ, “ಮಕ್ಕಳನ್ನು ವಿಚಾರಣೆ ನಡೆಸುವ ವೇಳೆ ಪೊಲೀಸರು ಸಶಸ್ತ್ರಗಳೊಂದಿಗೆ ಸ್ಥಳದಲ್ಲಿರುವುದು ಬಾಲ ನ್ಯಾಯ ಕಾಯಿದೆ 2015 ಮತ್ತು ಮಕ್ಕಳ ಹಕ್ಕುಗಳ ಉಲ್ಲಂಘನೆಯಾಗಿದೆ” ಎಂದು ಹೇಳಿತ್ತು.

ಬಳಿಕ, ಪ್ರಕರಣವು ಕಲಬುರಗಿ ಪೀಠದ ಮುಂದೆ ಬಂದಿತ್ತು. ಇದೀಗ, ಕಲಬುರಗಿ ಪೀಠವು ವಾದ-ಪ್ರತಿವಾದಗಳನ್ನು ಆಲಿಸಿದ್ದು, ಪ್ರಕರಣವನ್ನು ವಜಾಗೊಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...