ಬೀದರ್‌ | ಶಾಂತರಸ ಕನ್ನಡದ ಗಜಲ್ ಗಾರುಡಿಗ

Date:

ಉರ್ದುವಿನ ಕಾವ್ಯರಾಣಿ ಗಜಲ್ ಪ್ರಕಾರವನ್ನು ಕನ್ನಡ ಸಾಹಿತ್ಯ ಲೋಕಕ್ಕೆ ಪರಿಚಯಿಸಿದ ಶಾಂತರಸರು ಕನ್ನಡದ ಗಜಲ್ ಗಾರುಡಿಗರಾಗಿದ್ದಾರೆ ಎಂದು ರಾಂಪೂರ ಸರ್ಕಾರಿ ಪಿಯು ಕಾಲೇಜು ಉಪನ್ಯಾಸಕ ರೇವಣಸಿದ್ದಪ್ಪ ದೊರೆ ಹೇಳಿದರು.

ಬಸವಕಲ್ಯಾಣದ ನಿವೃತ್ತ ಸರ್ಕಾರಿ ನೌಕರರ ಸಂಘದ ಕಚೇರಿಯಲ್ಲಿ ಡಾ.ಜಯದೇವಿತಾಯಿ ಲಿಗಾಡೆ ಪ್ರತಿಷ್ಠಾನದಿಂದ ಭಾನುವಾರ ಹಮ್ಮಿಕೊಂಡಿದ್ದ ಶಾಂತರಸರ ಜನ್ಮಶತಮಾನೋತ್ಸವ ಪ್ರಯುಕ್ತ ಶಾಂತರಸರ ಗಜಲ್, ಕತೆ, ಕಾದಂಬರಿ ಕುರಿತ ಉಪನ್ಯಾಸ ಸಮಾರಂಭದಲ್ಲಿ ಅವರು ಮಾತನಾಡಿದರು.

ʼಬೇರೆ ಭಾಷೆಯ ಕಾವ್ಯ ಪ್ರಕಾರವಾದ ಗಜಲ್ ಕನ್ನಡಕ್ಕೆ ಪರಿಚಯಿಸಿದ ಹೆಗ್ಗಳಿಕೆ ಶಾಂತರಸರದು. ಸ್ವಾತಂತ್ರ್ಯ ಚಳುವಳಿ, ಏಕೀಕರಣ, ವಿಮೋಚನಾ ಚಳವಳಿ ಸೇರಿ ಈ ನೆಲದ ಜನ ಸಮುದಾಯದ ಎದುರಿಸಿದ ಬಿಕ್ಕಟ್ಟುಗಳನ್ನು ಅವರ ಕತೆ, ಕಾದಂಬರಿಗಳಲ್ಲಿ ವಸ್ತುವಾಯಿತು. ಬದುಕಿನ ಉತ್ಕಟ ಪ್ರೇಮ, ನಶ್ವರತೆ, ಜೀವನದ ಚಲನೆ ಗಜಲ್ ಗಳ ವಸ್ತುವಾಯಿತುʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಡಾ.ಜಯದೇವಿತಾಯಿ ಲಿಗಾಡೆ ಪ್ರತಿಷ್ಠಾನದ ಅಧ್ಯಕ್ಷ ಎಸ್.ಜಿ.ಹುಡೇದ ಅಧ್ಯಕ್ಷತೆ ವಹಿಸಿ ಮಾತನಾಡಿ, ʼಶಾಂತರಸರು ಭಾಲ್ಕಿ ಹಿರೇಮಠದಲ್ಲಿದ್ದು ವ್ಯಾಸಂಗ ಮಾಡಿದ್ದರು. ವಚನ ಸಾಹಿತ್ಯ ಹಾಗೂ ಚೆನ್ನಬಸವ ಪಟ್ಟದ್ದೇವರ ಪ್ರಭಾವ ಅವರ ಮೇಲೆ ಆಗಿತ್ತು. ಅವರು ಬರೆದ ʼಸಣ್ಣ ಗೌಡಸಾನಿʼ ನಾಟಕ ಊಳಿಗಮಾನ್ಯ ವ್ಯವಸ್ಥೆಯ ಕರಾಳ ಮುಖ ಪರಿಚಯಿಸುತ್ತದೆʼ ಎಂದರು.

ರಂಗಕರ್ಮಿ ಉಮೇಶ ಪಾಟೀಲ ಶಾಂತರಸರ ‘ಗೋದಾನ’ ಕತೆಯನ್ನು ನಾಟಕೀಯವಾಗಿ ವಾಚನ ಮಾಡಿದರು. ನಾಗೇಂದ್ರ ಬಿರಾದಾರ,ನಿತಿನ್ ನಿಲಕಂಠೆ ಗಜಲ್ ಗಾಯನ ಮಾಡಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ವನ್ಯಜೀವಿ ಪ್ರೀತಿಸುವ ʼಸ್ವಾಭಿಮಾನಿ ಗೆಳೆಯರುʼ

ನಿವೃತ ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ ಬಸವಣಪ್ಪಾ ನೆಲೋಗಿ, ಭೀಮಾಶಂಕರ ಮಾಶಾಳಕರ, ಪ್ರೇಮಸಾಗರ ಪಾಟೀಲ, ಚಂದ್ರಕಾಂತ ಅಕ್ಕಣ್ಣ, ಸಂಜುಕುಮಾರ ನಡುಕರ, ರಾಜಶೇಖರ ಬಿರಾದಾರ, ಧರ್ಮಣ್ಣ ಚಿತ್ತಾ, ಅಂಬಾರಾಯ ಸೈದಾಪುರೆ, ಶಿವಪುತ್ರಪ್ಪ ಸಂಗನಬಸವ , ಶಿವಪುತ್ರ ಮಿರಾಜದಾರ, ಬಸವರಾಜ ಮಠಪತಿ, ಮಾಣಿಕಪ್ಪ ಸಂಗನಬಟ್ಟೆ, ನಾಗಪ್ಪ ನಿಣ್ಣೆ, ಮಲ್ಲಿಕಾರ್ಜುನ ಛೆತ್ರೆ , ನಿವರ್ತಿ ಜಾಧವ್ ಮತ್ತಿತರರಿದ್ದರು. ಶರಣಬಸವ ಬಿರಾದಾರ ಸ್ವಾಗತಿಸಿದರು. ಪ್ರತಿಷ್ಠಾನದ ಕಾರ್ಯದರ್ಶಿ ದೇವೇಂದ್ರ ಬರಗಾಲೆ ನಿರೂಪಿಸಿದರು. ಶಾಲಿವಾನ ಕಾಕನಾಳೆ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...