ಬೀದರ್‌ | ಮತಗಳ್ಳತನ ವಿರುದ್ಧ ಬಸವಕಲ್ಯಾಣದಲ್ಲಿ ಸಹಿ ಸಂಗ್ರಹ ಅಭಿಯಾನ

Date:

ʼಮತಗಳ್ಳತನ ವಿರೋಧಿ ಅಭಿಯಾನ ಒಂದು ಪಕ್ಷದ ಹೋರಾಟವಲ್ಲ, ಪ್ರಜಾಪ್ರಭುತ್ವವನ್ನು ಉಳಿಸುವ ಹೋರಾಟವಾಗಿದೆʼ ಎಂದು ಮಾಜಿ ವಿಧಾನ ಪರಿಷತ್‌ ಸದಸ್ಯ ವಿಜಯ್ ಸಿಂಗ್ ಹೇಳಿದರು.

ಬಸವಕಲ್ಯಾಣ ಬ್ಲಾಕ್ ಕಾಂಗ್ರೆಸ್ ವತಿಯಿಂದ ನಗರದ ಡಾ ಬಿ.ಆರ್.ಅಂಬೇಡ್ಕರ್‌ ವೃತ್ತದಲ್ಲಿ ಆಯೋಜಿಸಿದ ಮತಗಳವು ವಿರೋಧಿ ಸಹಿ ಅಭಿಯಾನದಲ್ಲಿ ಭಾಗವಹಿಸಿ ಮಾತನಾಡಿ, ʼದೇಶದ ಸಂವಿಧಾನ ದೇಶದ ಎಲ್ಲಾ ನಾಗರಿಕರಿಗೆ ಎಲ್ಲಾ ಹಕ್ಕುಗಳನ್ನು ನೀಡಿದೆ. ಅದರಲ್ಲೂ ಮತದಾನ ಹಕ್ಕು ಅತ್ಯಂತ ಪವಿತ್ರವಾಗಿದೆ. ಆದರೆ, ಅದನ್ನು ಕದಿಯುವ ಅಥವಾ ಮರೆಮಾಚುವ ಯಾವುದೇ ಪ್ರಯತ್ನ ಜನರ ಹಕ್ಕಿಗೆ ವಿರುದ್ಧವಾಗಿದ್ದು, ಇದು ಖಂಡನೀಯʼ ಎಂದರು.

ನಮ್ಮ ಕಾಂಗ್ರೆಸ್ ಪಕ್ಷದಿಂದ ಇಡೀ ದೇಶದಲ್ಲಿ 5 ಕೋಟಿ ಸಹಿ ಸಂಗ್ರಹ ಮಾಡುವ ಉದ್ದೇಶವಿದ್ದು, ಜಿಲ್ಲೆಯ ಪ್ರತಿಯೊಬ್ಬ ಕಾರ್ಯಕರ್ತರು ಬಿಜೆಪಿ ಮಾಡಿರುವ ಈ ‘ವೋಟ್ ಚೋರಿ’ ಬಗ್ಗೆ ತಮ್ಮ ಬೂತ್ ಮಟ್ಟದಲ್ಲಿ ಮತದಾರರಿಗೆ ಮನವರಿಕೆ ಮಾಡಿ ಸಹಿ ಸಂಗ್ರಹ ಅಭಿಯಾನದಲ್ಲಿ ಭಾಗವಹಿಸಬೇಕೆಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 10 12 at 9.43.42 AM
ಮತಗಳವು ವಿರುದ್ಧ ಸಹಿ ಸಂಗ್ರಹ ಅಭಿಯಾನಕ್ಕೆ ಮಾಜಿ ಎಂಎಲ್ಸಿ ವಿಜಯ ಸಿಂಗ್‌ ಚಾಲನೆ ನೀಡಿದರು.

‘ಚುನಾವಣೆ ಆಯೋಗ ಮತದಾರರ ಪಟ್ಟಿಯಲ್ಲಿನ ಹೆಸರು ಸೇರ್ಪಡೆ, ಡಿಲೀಟ್‌ ಮಾಡಲು ಸಮಯಾವಕಾಶ ಕೊಟ್ಟು ಸಾರ್ವಜನಿಕಗೊಳಿಸಬೇಕು. ಎಲ್ಲ ಮತದಾರರ ಭಾವಚಿತ್ರ ಇರುವಂತೆ ಮತದಾರರ ಪಟ್ಟಿ ಸಿದ್ದಪಡಿಸಬೇಕು. ಬಸವಕಲ್ಯಾಣ ಕ್ಷೇತ್ರದಲ್ಲಿ ಕಡಿಮೆ ವಯಸ್ಸಿನವರನ್ನು ಮತದಾರರ ಪಟ್ಟಿಗೆ ಸೇರಿಸಲಾಗಿದ್ದು, ತಪ್ಪಿಸ್ಥ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕುʼ ಎಂದು ಆಗ್ರಹಿಸಿದರು.

ʼನಾವು ಅಧಿಕಾರಕ್ಕಾಗಿ ಕೆಲಸ ಮಾಡದೇ ಸಮಾಜದ ಒಳಿತಿಗಾಗಿ ಕೆಲಸ ಮಾಡುತ್ತಿದ್ದೇವೆ. ಕ್ಷೇತ್ರದ ಪ್ರತಿ ಬೂತ್‌ನಲ್ಲಿ ಮತದಾರರ ಪಟ್ಟಿಯಲ್ಲಿರುವ ಹೆಸರುಗಳನ್ನು ಅಂಕಿ-ಅಂಶಗಳೊಂದಿಗೆ ಪರಿಶೀಲಿಸಿ, ಮತಗಳವು ನಡೆದರೆ ಅದರ ವಿರುದ್ಧ ಎಲ್ಲರೂ ಪ್ರಜಾಪ್ರಭುತ್ವ ಉಳಿವಿಗಾಗಿ ಧ್ವನಿಯೆತ್ತಬೇಕುʼ ಎಂದು ತಿಳಿಸಿದರು.

ಇದನ್ನೂ ಓದಿ : ಬೀದರ್‌ | ʼಶಾಹೀನ್ʼ ಸಂಸ್ಥೆಯಿಂದ ಮಹಮೂದ್ ಗಾವಾನ್ ಮದರಸಾ ನವೀಕರಣ ಆರಂಭ

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನೀಲಕಂಠ ರಾಠೋಡ್ ಸೇರಿದಂತೆ ಪ್ರಮುಖರಾದ ಅಜರಲಿ ನವರಂಗ, ಬಾಬು ಹೊನ್ನಾ ನಾಯಕ, ಡಿ.ಕೆ.ದಾವೂದ್, ರವಿ ಗಾಯಕವಾಡ, ರವಿ ಬುರಾಳೆ, ಶಿವು ಶೆಟಗರ, ದತ್ತು ಪದ್ಮ, ಆನಂದ್ ಪಾಟೀಲ್, ಲತಾ ಹಾರಕುಡೆ, ಸಗಿರೋದ್ದಿನ್, ಮನೋಹರ್‌ ಮೈಸೇ, ಯುವರಾಜ್ ಭೆಂಡೆ, ಮಲ್ಲು ಬೊಕ್ಕೆ, ನಾಗನಾಥ ಮೇತ್ರೆ, ಗಫಾರ್‌ ಪೇಶ ಇಮಾಮ್, ದಿಲೀಪ್ ಶಿಂಧೆ, ಶಶಿಕಾಂತ್ ದುರ್ಗೆ, ಭೀಮಶಾ ಫುಲೆ ಸೇರಿದಂತೆ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...