ಬೀದರ್‌ | ಗ್ರಾಮದ ಸಮಸ್ಯೆ ಹೇಳಿದ್ರೆ ಬೆದರಿಕೆ ಹಾಕಿದ ಸಿಂಧನಕೇರಾ ಪಿಡಿಒ; ಕ್ರಮಕ್ಕೆ ಆಗ್ರಹ

Date:

ಹುಮನಾಬಾದ್ ತಾಲ್ಲೂಕಿನ ಸಿಂಧನಕೇರಾ ಗ್ರಾಮದ ಸಾರ್ವಜನಿಕ ಸ್ಥಳದಲ್ಲಿ ಅಸ್ವಚ್ಛತೆ ಕುರಿತು ಧ್ವನಿ ಎತ್ತಿದರೆ ಕರೆ ಮಾಡಿ ಬೆದರಿ ಹಾಕಿರುವ ಗ್ರಾಮ ಪಂಚಾಯತ್ ಪಿಡಿಒ ಸುಗಂಧಾ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ವಿವಿಧ ಸಂಘಟನೆಗಳ ಮುಖಂಡರು ಒತ್ತಾಯಿಸಿದ್ದಾರೆ.

ಈ ಸಂಬಂಧ ಮಂಗಳವಾರ ಹುಮನಾಬಾದ್ ತಹಸೀಲ್ದಾರ್‌ ಅಂಜುಮ್‌ ತಬಸುಮ್‌ ಹಾಗೂ ತಾಲ್ಲೂಕು ಪಂಚಾಯತ್‌ ಇಒ ದೀಪಿಕಾ ನಾಯ್ಕರ್‌ ಅವರಿಗೆ ಸಲ್ಲಿಸಿದ ಮನವಿ ಪತ್ರ ಸಲ್ಲಿಸಿದರು.

ಸಿಂಧನಕೇರಾ ಗ್ರಾಮದ ಸಾಮಾಜಿಕ ಕಾರ್ಯಕರ್ತ ಯುವರಾಜ್ ಐಹೊಳ್ಳಿ ಅವರು, ʼಗ್ರಾಮದ ಬಸವೇಶ್ವರ ವೃತ್ತದಲ್ಲಿ ನೀರು ನಿಲ್ಲುತ್ತಿದೆ, ದಯವಿಟ್ಟು ಸರಿಪಡಿಸಬೇಕೆಂದು ಸಾಮಾಜಿಕ ಜಾಲತಾಣದಲ್ಲಿ ಪೋಟೊ ಹಾಕಿದರು. ಅದಕ್ಕೆ ಪಿಡಿಒ ಸುಗಂಧಾ ಅವರು ಕರೆ ಮಾಡಿ, ʼನಮ್ಮನ್ನು ಪ್ರಶ್ನೆ ಮಾಡೋದಕ್ಕೆ, ನೀನೇನು ಗ್ರಾಮದ ನೇತಾ ಏನು, ಬಸವೇಶ್ವರ ವೃತ್ತದ ಬಳಿ ನೀರು ನಿಂತರೆ ನಿಮಗ್ಯಾಕೆ ಸಮಸ್ಯೆ? ಬಸವೇಶ್ವರ ಚೌಕ್‌ ನಿಮಗೇನು ಸಂಬಂಧ, ನಿಮ್ಮ ಏರಿಯಾ ನೀವು ನೋಡಿಕೊಳ್ಳಿ, ಅಂಬೇಡ್ಕರ್ ಮೂರ್ತಿ ಬಗ್ಗೆ ಮೊದಲು ವಿಚಾರಿಸಿʼ ಎಂದಿದ್ದಾರೆ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼನಾನು ಸುಮ್ಮನ್ನೆ ಕುಂತ್ರೆ ಜಾಸ್ತಿ ಮಾಡ್ತಾ ಇದ್ದೀರಾ, ನೀವು ಎಲ್ಲದಕ್ಕೂ ರೆಡಿ ಇದ್ದರೆ ಬನ್ನಿ. ಏನು ಮಾಡಬೇಕು ಅದನ್ನು ಮಾಡಿ ತೋರಿಸ್ತೀನಿ. ಬ್ಲ್ಯಾಕ್‌ ಮಾಡೋಕೆ ದೂರು ಕೊಡ್ತೀರಾʼ ಎಂದು ಪಿಡಿಒ ಅವರು ಬೆದರಿಕೆ ಹಾಕಿದ್ದಾರೆ. ಯುವರಾಜ್ ಐಹೊಳ್ಳಿ ಅವರಿಗೆ ಏನಾದರೂ ತೊಂದರೆಯಾದರೆ ಪಿಡಿಒ ಸುಗಂಧಾ ಅವರೇ ಹೊಣೆಯಾಗುತ್ತಾರೆ. ಪಿಡಿಒ ವಿರುದ್ಧ ವಾರದೊಳಗೆ ಕ್ರಮ ಕೈಗೊಳ್ಳಬೇಕು, ಇಲ್ಲದಿದ್ದರೆ ತಾಲ್ಲೂಕು ಪಂಚಾಯತ್ ಕಚೇರಿ ಎದುರು ಸತ್ಯಾಗ್ರಹ ನಡೆಸಲಾಗುವುದುʼ ಎಂದು ಎಚ್ಚರಿಸಿದರು.

ಇದನ್ನೂ ಓದಿ : ಬೀದರ್‌ | ಗುಣಾತ್ಮಕ ಶಿಕ್ಷಣ, ಮಾನವ ಸಂಪನ್ಮೂಲ ಬಲಿಷ್ಠಕ್ಕೆ ಯೋಜನೆ ರೂಪಿಸಿ : ನಾಗನಾಥ ಚಿಟಮೆ

ಸಾಮಾಜಿಕ ಕಾರ್ಯಕರ್ತರಾದ ಯುವರಾಜ್ ಐಹೊಳ್ಳಿ, ಆಶ್ರಯ ದೀಪ ಟ್ರಸ್ಟ್ ಉಪಾಧ್ಯಕ್ಷ ಅರವಿಂದ್ ಜೋಗಿರೆ, ಗುರು ಪಾಟೀಲ್ ಸಿಂಧನಕೇರಾ, ಭೀಮ್ ಆರ್ಮಿ ತಾಲೂಕು ಉಪಾಧ್ಯಕ್ಷ ಶೇಖ್ ಫಿರ್ದೋಸ್, ಎಂ.ಡಿ.ಬಾಬಾ ಪಟೇಲ್, ಮಲ್ಲೇಶ್ ಮಿತ್ರ, ಶೇಖ್ ಅಮಾನ್ ಸುಲ್ತಾನಿ, ಮೈನೋದ್ದಿನ್ ನಂದಗಾಂವವಾಲೆ, ಅಮರ್ ಸಿಂಧನಕೇರಾ, ಸಂದೀಪ್ ಮತ್ತಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...