ಬೀದರ್‌ | ಮಠಗಳಿಗೆ ಸಮಾಜದ ಹಿತವೇ ಮುಖ್ಯವಾಗಲಿ : ಪ್ರಭುದೇವ ಸ್ವಾಮೀಜಿ

Date:

ಮಠ ಮಾನ್ಯಗಳಿಗೆ ಭಕ್ತರ ಉದ್ಧಾರ ಹಾಗೂ ಸಮಾಜದ ಹಿತವೇ ಮುಖ್ಯವಾಗಬೇಕು ಎಂದು ಲಿಂಗಾಯತ ಮಹಾಮಠದ ಪ್ರಭುದೇವ ಸ್ವಾಮೀಜಿ ನುಡಿದರು.

ಬೀದರ್ ನಗರದ ಬಸವಗಿರಿಯಲ್ಲಿ ಭಾನುವಾರ‌ ಲಿಂಗಾಯತ ಮಹಾಮಠದ ವತಿಯಿಂದ ಆಯೋಜಿಸಿದ ಶರಣ ಸಂಗಮ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿ, ʼಮಠಗಳು ಯಾರದ್ದಾದರೂ ಅಧೀನದಲ್ಲಿರಬೇಕಾದರೆ ಅದು ಭಕ್ತರ ಅಧೀನದಲ್ಲಿರಬೇಕು. ಯಾವ ಕಾರಣಕ್ಕೂ ಯಾರ ಹಂಗಿಗೂ ಒಳಗಾಗಬಾರದುʼ ಎಂದು ಹೇಳಿದರು.

ʼಅಕ್ಕ ಅನ್ನಪೂರ್ಣತಾಯಿ ಅವರು ಭಕ್ತರ ಬಾಳು ಬೆಳಗಿಸಲು ಅವಿರತ ಶ್ರಮಿಸಿದ್ದರು. ಅವರು ಹಾಕಿಕೊಟ್ಟ ಬಸವ ಮಾರ್ಗದಲ್ಲೇ ಮುನ್ನಡೆಯುತ್ತಿರುವೆ. ಪ್ರಸ್ತುತ ಪ್ರತಿಯೊಬ್ಬರೂ ತಮ್ಮ ಬದುಕಿನ ರೀತಿ ಬಗ್ಗೆ ಆತ್ಮ ವಿಮರ್ಶೆ ಮಾಡಿಕೊಳ್ಳಬೇಕು. ಹಾಗೆ ಮಾಡಿದ್ದಲ್ಲಿ ಮುಂದಿನ ಜೀವನ ಸುಖಮಯವಾಗುತ್ತದೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಸವಕಲ್ಯಾಣದ ಬಸವ ತತ್ವ ಪ್ರಚಾರಕ ಬಸವದೇವರು ಅವರು ಬಸವಣ್ಣನವರ ವಚನಗಳಲ್ಲಿ ಆತ್ಮವಿಮರ್ಶೆ ಕುರಿತು ಉಪನ್ಯಾಸ ನೀಡಿ, ʼಬೇರೆಯವರ ತಪ್ಪುಗಳನ್ನು ಹುಡುಕದೆ, ಮೊದಲು ತಮ್ಮ ತಪ್ಪುಗಳನ್ನು ಸರಿಪಡಿಸಿಕೊಳ್ಳಬೇಕು. ಆತ್ಮಸಾಕ್ಷಿ ಒಪ್ಪುವಂತೆ ಬದುಕು ಸಾಗಿಸಬೇಕುʼ ಎಂದು ತಿಳಿಸಿದರು.

ಯುರೋಪ ದೇಶದಲ್ಲಿ ಬಸವತತ್ವ ಪ್ರಚಾರ ಕೈಗೊಂಡ ಯೋಗ ಗುರು ಕವಿತಾ ಚಂದ್ರಶೇಖರ್ ಸನ್ಮಾನ ಸ್ವೀಕರಿಸಿ ಮಾತನಾಡಿ, ʼವೈಜ್ಞಾನಿಕವಾಗಿರುವ ಬಸವತತ್ವ ಇಂದು ಜಗತ್ತಿಗೆ ಅವಶ್ಯಕವಾಗಿದೆ. ವಿದೇಶಿಗರೂ ಬಸವ ತತ್ವವನ್ನು ಅಪ್ಪಿಕೊಳ್ಳುತ್ತಿದ್ದು, ಇದನ್ನು ವಿಶ್ವದಾದ್ಯಂತ ಪಸರಿಸುವ ಕೆಲಸ ಆಗಬೇಕಾಗಿದೆʼ ಎಂದು ಹೇಳಿದರು.

ʼಜರ್ಮನಿಯ ಶಹನಾಯ್ ಅವರು ಫೆ.26 ರಂದು ಲಿಂಗಾಯತ ಮಹಾಮಠದಲ್ಲಿ ನಡೆಯಲಿರುವ ಸಾಮೂಹಿಕ ಇಷ್ಟಲಿಂಗ ಪೂಜೆಯಲ್ಲಿ ಲಿಂಗಾಯತ ಧರ್ಮ ಸ್ವೀಕರಿಸಲಿದ್ದು, ಬಸವ ತತ್ವ ಹಾಗೂ ಲಿಂಗಾಯತ ಧರ್ಮದ ಬಗ್ಗೆ ಜಾಗತಿಕ ಮಟ್ಟದಲ್ಲಿ ಹೆಚ್ಚುತ್ತಿರುವ ಒಲವಿಗೆ ಇದು ನಿದರ್ಶನವಾಗಿದೆʼ ಎಂದು ತಿಳಿಸಿದರು.

ಜರ್ಮನಿಯ ಶಹನಾಯ್ ಕಾರ್ಯಕ್ರಮ ಉದ್ಘಾಟಿಸಿದರು. ಖಾದಿ ಮತ್ತು ಕೈಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ರಾಜಕುಮಾರ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಲಿಂಗಾಯತ ಮಹಾಮಠದ ಕಾರ್ಯದರ್ಶಿ ಚನ್ನಬಸಪ್ಪ ಹಂಗರಗಿ, ಪ್ರಮುಖರಾದ ಅಶೋಕ ಎಲಿ, ಪ್ರಕಾಶ ಮಠಪತಿ, ಅಣವೀರ ಕೊಡಂಬಲ್, ಸಿ.ಎಸ್.ಗಣಾಚಾರಿ, ಆರ್.ಕೆ.ಪಾಟೀಲ ಮತ್ತಿತರರು ಉಪಸ್ಥಿತರಿದ್ದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | 15 ತಿಂಗಳಾದರೂ ಪದವೀಧರ ಶಿಕ್ಷಕರಿಗಿಲ್ಲ ನಾಲ್ಕು ತಿಂಗಳ ಪಗಾರ!

ಚೆನ್ನಮ್ಮ ಮಹಾದೇವ ಪಾಟೀಲ ನವಲಸಪುರ ಬಸವ ಪೂಜೆ ನೆರವೇರಿಸಿದರು. ಶಾಮಲಾ ಎಲಿ ವಚನ ಪಠಣ ಮಾಡಿದರು.
ಪ್ರಿಯಾ ಬರಗಲೆ ಸ್ವಾಗತಿಸಿದರು. ಬಸವ ರಾಜಕುಮಾರ ಚಿಕ್ಕಲಿಂಗೆ ನಿರೂಪಿಸಿದರು. ರೇವಣಸಿದ್ದ ಗಣಾಚಾರಿ ವಂದಿಸಿದರು. ಮಹಾನಂದಾ ಮಾರುತಿ ಪಾಟೀಲ ಭಕ್ತಿ ದಾಸೋಹಗೈದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...