ಬೀದರ್‌ | ಸದೃಢ ಆರೋಗ್ಯಕ್ಕೆ ಕ್ರೀಡೆ ಅವಶ್ಯಕ : ಶಿವಯ್ಯ ಸ್ವಾಮಿ

Date:

ಸದೃಢ ಆರೋಗ್ಯಕ್ಕಾಗಿ ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದು ಅವಶ್ಯಕವಾಗಿದೆ ಎಂದು ಕೇಂದ್ರ ಸರ್ಕಾರದ ರಾಜ್ಯ ಅಭಿವೃದ್ಧಿ, ಸಮನ್ವಯ ಹಾಗೂ ಮೇಲುಸ್ತುವಾರಿ ಸಮಿತಿಯ (ದಿಶಾ) ಸದಸ್ಯ ಶಿವಯ್ಯ ಸ್ವಾಮಿ ಹೇಳಿದರು.

ನೆಹರೂ ಯುವ ಕೇಂದ್ರ ಹಾಗೂ ಬೀದರ್ ಮೈನಾರಿಟಿ ಸ್ಪೋಟ್ರ್ಸ್ ಅಸೋಸಿಯೇಷನ್ ವತಿಯಿಂದ ಇಲ್ಲಿಯ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ಜಿಲ್ಲಾಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿ, ʼಕ್ರೀಡೆಗಳು ದೇಹಕ್ಕೆ ವ್ಯಾಯಾಮ ನೀಡುತ್ತವೆ. ಮಾನಸಿಕ ಒತ್ತಡ ದೂರ ಮಾಡುತ್ತವೆ. ಮನಸ್ಸನ್ನು ಉಲ್ಲಸಿತಗೊಳಿಸುತ್ತವೆʼ ಎಂದು ತಿಳಿಸಿದರು.

ʼಸಾಮಾಜಿಕ ಜಾಲತಾಣದ ಪ್ರಭಾವದಿಂದಾಗಿ ಯುವಕರು ಮೊಬೈಲ್‍ನಲ್ಲಿ ತಲ್ಲೀನರಾಗುತ್ತಿದ್ದು, ಕ್ರೀಡಾ ಚಟುವಟಿಕೆಗಳಿಂದ ವಿಮುಖರಾಗುತ್ತಿದ್ದಾರೆ. ಆಲಸ್ಯ, ಸೋಮಾರಿತನ ಅನೇಕ ರೋಗಿಗಳಿಗೆ ಕಾರಣವಾಗಲಿವೆ. ಹೀಗಾಗಿ ಆರೋಗ್ಯಪೂರ್ಣ ಸಮಾಜದ ನಿರ್ಮಾಣಕ್ಕಾಗಿ ಕ್ರೀಡೆ ಪ್ರತಿಯೊಬ್ಬರ ನಿತ್ಯ ಜೀವನದ ಭಾಗವಾಗಬೇಕು. ಜಿಲ್ಲಾಮಟ್ಟದಲ್ಲಿ ವಿಜೇತರಾಗುವ ಕ್ರೀಡಾಪಟುಗಳು ರಾಜ್ಯಮಟ್ಟದಲ್ಲೂ ಪ್ರತಿಭೆ ಪ್ರದರ್ಶಿಸಿ, ಜಿಲ್ಲೆಗೆ ಕೀರ್ತಿ ತರಬೇಕುʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼರಾಷ್ಟ್ರಮಟ್ಟದ ಯುವ ಪ್ರಶಸ್ತಿ ಪುರಸ್ಕೃತ ಓಂಪ್ರಕಾಶ ರೊಟ್ಟೆ ಮಾತನಾಡಿ, ʼಉತ್ತಮ ಆರೋಗ್ಯ ಕಾಪಾಡುವಲ್ಲಿ ಆಹಾರದ ಪಾತ್ರ ಬಹುಮುಖ್ಯವಾಗಿದೆ. ಹೀಗಾಗಿ ಪೌಷ್ಟಿಕಾಂಶಯುಕ್ತ ಆಹಾರ ಸೇವಿಸಬೇಕು. ಜಂಕ್ ಆಹಾರದಿಂದ ದೂರವಿರಬೇಕುʼ ಕಿವಿಮಾತು ಹೇಳಿದರು.

NYK Dist Level Sports Photo 1

ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥ ಶಂಕರ ಗಣಗೊಂಡ ಅಧ್ಯಕ್ಷತೆ ವಹಿಸಿದ್ದರು. ನೆಹರೂ ಯುವ ಕೇಂದ್ರದ ಜಿಲ್ಲಾ ಯುವ ಸಮನ್ವಯಾಧಿಕಾರಿ ಮಯೂರಕುಮಾರ ಗೋರಮೆ, ರಾಷ್ಟ್ರೀಯ ಯುವ ಪ್ರಶಸ್ತಿ ಪುರಸ್ಕೃತ ಡಾ.ಪ್ರಭುಲಿಂಗ ಬಿರಾದಾರ, ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಸುಬ್ರಹ್ಮಣ್ಯಂ ಸಿ, ವಾಲಿಬಾಲ್ ತರಬೇತುದಾರ ಜೈಪ್ರಕಾಶ, ರೆಫ್ರಿ ಬಾಲಸುಬ್ರಹ್ಮಣಿಯನ್, ಅರವಿಂದ, ಬೀದರ್ ಮೈನಾರಿಟಿ ಸ್ಪೋಟ್ರ್ಸ್ ಅಸೋಸಿಯೇಷನ್ ಅಧ್ಯಕ್ಷ ಮುಬಾರಕ್ ಮಂದಕನಳ್ಳಿ, ಸೋಮನಾಥ, ಸಚಿನ್, ಶ್ರೀಕಾಂತ, ಉದಯಕುಮಾರ, ಆತಿಶ್ ಇದ್ದರು. ಲಕ್ಷ್ಮಣ ನಿರೂಪಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ದಲಿತ ವಿದ್ಯಾರ್ಥಿ ಪರಿಷತ್ : ಭಾಲ್ಕಿ ತಾಲ್ಲೂಕು ನೂತನ ಪದಾಧಿಕಾರಿಗಳ ಆಯ್ಕೆ

ಜಿಲ್ಲಾಮಟ್ಟದ ಕ್ರೀಡಾಕೂಟದ ವಿವಿಧ ಸ್ಪರ್ಧೆಗಳ ವಿಜೇತರ ಪಟ್ಟಿ : ಯುವಕರ ವಿಭಾಗ : ವಾಲಿಬಾಲ್- ಚಿಟಗುಪ್ಪದ ಸುಭಾಷ್‍ಚಂದ್ರ ಬೋಸ್ ಯುವಕ ಸಂಘ (ಪ್ರಥಮ), ವೇಟ್ ಲಿಫ್ಟಿಂಗ್- ಶಾದುಲ್ ಶಾ (ಪ್ರಥಮ), ಬ್ಯಾಡ್ಮಿಂಟನ್- ಲಕ್ಷ್ಮಿಕಾಂತ (ಪ್ರಥಮ) ಹಾಗೂ ಯುವತಿಯರ ವಿಭಾಗ: ಕೊಕ್ಕೋ- ಚಿಟಗುಪ್ಪದ ಕ್ವಿನ್ಸ್ ಯುವತಿ ಮಂಡಳ (ಪ್ರಥಮ), 100 ಮೀ. ಓಟದ ಸ್ಪರ್ಧೆ- ಪೂಜಾ ರಮೇಶ (ಪ್ರಥಮ), ಸ್ಲೋ ಸೈಕ್ಲಿಂಗ್- ಚೇತನಾ (ಪ್ರಥಮ)

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...