ಬೀದರ್‌ | ರಾಜ್ಯ ಸರ್ಕಾರ ಒಳ ಮೀಸಲಾತಿ ಹಂಚಿಕೆಯಲ್ಲಿ ಅನ್ಯಾಯ ಮಾಡಿದೆ : ಶಾಸಕ ಪ್ರಭು ಚವ್ಹಾಣ

Date:

ಕಾಂಗ್ರೆಸ್ ಸರ್ಕಾರ ಒಳ ಮೀಸಲಾತಿ ಹಂಚಿಕೆಯಲ್ಲಿ ಬಂಜಾರ, ಭೋವಿ, ಕೊರಚ, ಕೊರಮ ಸಮುದಾಯಗಳಿಗೆ ಅನ್ಯಾಯ ಮಾಡಿದೆ. ಇದು ಸರಿಪಡಿಸುವವರೆಗೂ ಹೋರಾಟ ನಿಲ್ಲುವುದಿಲ್ಲ ಮಾಜಿ ಸಚಿವರು ಹಾಗೂ ಔರಾದ(ಬಿ) ಶಾಸಕರಾದ ಪ್ರಭು ಬಿ.ಚವ್ಹಾಣ ಅವರು ತಿಳಿಸಿದರು.

ಔರಾದ(ಬಿ) ಪಟ್ಟಣದ ಗುರುಪಾದಪ್ಪ ನಾಗಮಾರಪಳ್ಳಿ ಕಲ್ಯಾಣ ಮಂಟಪದಲ್ಲಿ ನಡೆದ ಬಂಜಾರಾ ಸಮಾವೇಶ ಹಾಗೂ ಒಳ ಮೀಸಲಾತಿ ಕುರಿತ ಚಿಂತನ- ಮಂಥನ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ʼಕಾಂಗ್ರೆಸ್ ಸರ್ಕಾರ ತೀವ್ರ ಹಿಂದುಳಿದಿರುವ ಬಂಜಾರಾ, ಭೋವಿ, ಕೊರಮ, ಕೊರಚ ಸಮಾಜಗಳನ್ನು ಕಡೆಗಣಿಸುತ್ತಾ ಬಂದಿದೆ. ಹಿಂದೊಮ್ಮೆ ಈ ಸಮಾಜಗಳನ್ನು ಪರಿಶಿಷ್ಟ ಜಾತಿ ಪಟ್ಟಿಯಿಂದ ಹೊರ ಹಾಕುವ ಪ್ರಯತ್ನ ಮಾಡಿತ್ತು. ಆದರೆ ತೀವ್ರ ವಿರೋಧ ವ್ಯಕ್ತವಾಗಿದ್ದರಿಂದ ಅದು ಸಾಧ್ಯವಾಗಲಿಲ್ಲʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರ ಈ ನಾಲ್ಕೂ ಸಮುದಾಯಗಳಿಗೆ ಶೇ 4.5ರಷ್ಟು ಮೀಸಲಾತಿ ಕೊಟ್ಟಿತ್ತು. ಈಗಿನ ಕಾಂಗ್ರೆಸ್‌ ಸರ್ಕಾರ ಈ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸುವ ನಿರೀಕ್ಷೆಯಿತ್ತು. ಆದರೆ ನಾಲ್ಕು ಸಮುದಾಯಗಳೊಂದಿಗೆ ಇನ್ನೂ 59 ಸಮುದಾಯಗಳನ್ನು ಸೇರಿಸಿ ಬರೀ ಶೇ 5ರಷ್ಟು ಮೀಸಲಾತಿ ಕೊಟ್ಟು ಘೋರ ಅನ್ಯಾಯ ಮಾಡಿದೆʼ ಎಂದು ಆಕ್ರೋಶ ಹೊರಹಾಕಿದರು.

ʼನ್ಯಾಯಮೂರ್ತಿ ನಾಗಮೋಹನದಾಸ್ ವರದಿಯ ಬಗ್ಗೆ ಆರಂಭದಿಂದಲೂ ಅಪಸ್ವರಗಳು ಕೇಳಿಸಿದ್ದವು. ಅವೈಜ್ಞಾನಿಕ ಮತ್ತು ದೋಷಪೂರಿತ ವರದಿಯನ್ನು ಯಾವುದೇ ಕಾರಣಕ್ಕೂ ಅಂಗೀಕರಿಸಬಾರದೆಂದು ಎಷ್ಟೇ ಹೋರಾಟ ಮಾಡಿದ್ದರೂ ಜನತೆಯ ಕೂಗನ್ನು ಕಿವಿಗೆ ಹಾಕಿಕೊಳ್ಳದೆ ಮನಸ್ಸಿಗೆ ತೋಚಿದಂತೆ ಒಳ ಮೀಸಲಾತಿಯನ್ನು ವರ್ಗೀಕರಣ ಮಾಡಿದ್ದಾರೆ. ಈ ಬಗ್ಗೆ ಸಮಾಜ ಬಾಂಧವರು ಜಾಗೃತರಾಗಬೇಕುʼ ಎಂದು ಹೇಳಿದರು.

ʼರಾಜ್ಯದಲ್ಲಿ ಬಂಜಾರ ಸಮುದಾಯವು ಇನ್ನೂ ಸಾಕಷ್ಟು ಹಿಂದುಳಿದಿದೆ. ವಲಸೆ, ಅನಕ್ಷರತೆ, ಬಡತನದಂತಹ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದೆ. ನಾನು ಸಮಾಜದ ಅಭಿವೃದ್ಧಿಗೆ ನಿರಂತರ ಶ್ರಮಿಸುತ್ತಿದ್ದೇನೆ‌. ಸಮಾಜ ಬಾಂಧವರು ಯಾವುದೇ ರೀತಿಯ ದುಶ್ಚಟಗಳಿಗೆ ಬಲಿಯಾಗದೇ ಗೌರವಯುತವಾಗಿ ಬದುಕಬೇಕು. ಯಾವುದೇ ದೂರು ದುಮ್ಮಾನಗಳಿಗೆ ಆಸ್ಪದ ಕೊಡಬಾರದುʼ ಎಂದು ತಿಳಿಸಿದರು.

ʼಬಂಜಾರಾ ಸಮಾಜದ ಮಕ್ಕಳು ಉತ್ತಮ ವಿದ್ಯಾಭ್ಯಾಸ ಮಾಡಿ ಐಎಎಸ್, ಐಪಿಎಸ್, ಎಂಜಿನಿಯರ್, ವೈದ್ಯಕೀಯ ವೃತ್ತಿಯಂತಹ ಉನ್ನತ ಹುದ್ದೆಗಳನ್ನು ಪಡೆಯಬೇಕೆಂಬ ಕನಸಿದೆ. ಬಡವರು, ಅನಾಥ ಮಕ್ಕಳು ಪ್ರತಿಭಾವಂತರಿದ್ದರೂ ಓದಲು ಸಾಧ್ಯವಾಗದತಂಹ ಮಕ್ಕಳಿದ್ದರೆ ನನ್ನ ಗಮನಕ್ಕೆ ತನ್ನಿ ಅಂಥವರ ಸಹಕಾರಕ್ಕೆ ನಾನು ಸದಾ ಸಿದ್ಧನಿದ್ದೇನೆʼ ಎಂದು ಹೇಳಿದರು.

ಇದನ್ನೂ ಓದಿ : ಬೀದರ್ | ಯಾವ ಹುದ್ದೆಗೂ ಸಲ್ಲಿಕೆಯಾಗದ ನಾಮಪತ್ರ : ಪತ್ರಕರ್ತರ ಸಂಘಕ್ಕೆ ಪುನಃ ಚುನಾವಣೆ

ಸಮಾಜದ ಮುಖಂಡರಾದ ಮಾರುತಿ ಚವ್ಹಾಣ, ಪ್ರತೀಕ ಚವ್ಹಾಣ, ಪ್ರದೀಪ ಪವಾರ, ಸಚಿನ ರಾಠೋಡ, ಸುಜಿತ ರಾಠೋಡ, ಧನಾಜಿ ರಾಠೋಡ, ಸೂರ್ಯಕಾಂತ ಪವಾರ, ಪ್ರಹ್ಲಾದ ರಾಠೋಡ, ಸೋನಾಜಿ ರಾಠೋಡ, ಬಾಬು ರಾಠೋಡ ಕೋರೆಕಲ್, ವಸಂತ ರಾಠೋಡ ಮೆಡಪಳ್ಳಿ, ರಮೇಶ ಜಾಧವ ಮಾಳೆಗಾಂವ, ಕಾಳಿದಾಸ ಆಡೆ, ಸೋನು ರಾಠೋಡ, ಬಸವರಾಜ ನಾಯಕ್, ಬಾಬು ರಾಠೋಡ, ಶಿವಾಜಿ ರಾಠೋಡ, ಸಂಜೀವ ಚವ್ಹಾಣ, ಸಂಜೀವ ರಾಠೋಡ, ಬಬನ್ ಚವ್ಹಾಣ, ರಾಮದೇವ ಕಾರಬಾರಿ, ಲಕ್ಷ್ಮಣ ಜಾಧವ, ಜಿಲ್ಲಾ ಪಂಚಾಯತ, ತಾಲ್ಲೂಕು ಪಂಚಾಯತ, ಗ್ರಾಮ ಪಂಚಾಯತ್ ಗಳ ಹಾಲಿ ಮತ್ತು ಮಾಜಿ ಅಧ್ಯಕ್ಷರು, ಸದಸ್ಯರು, ಬಂಜಾರಾ ಕ್ರಾಂತಿದಳದ ಅಧ್ಯಕ್ಷರು, ಎಲ್ಲ ಪದಾಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...