ಬೀದರ್‌ | ಕರ್ಕಶ ಶಬ್ದದ ಸೈಲೆನ್ಸರ್‌ ಅಳವಡಿಸಿದರೆ ನಿರ್ದಾಕ್ಷಿಣ್ಯ ಕ್ರಮ; ಎಸ್‌ಪಿ ಸೂಚನೆ

Date:

ದ್ವಿಚಕ್ರ ವಾಹನದ ಸೈಲೆನ್ಸರ್‌ನಿಂದ ಅಧಿಕ ಮತ್ತು ಕರ್ಕಶ ಶಬ್ದ ಮಾಡುವ ವಾಹನಗಳನ್ನು ಸೀಜ್ ಮಾಡಿ ಆ ವಾಹನಗಳ 61 ಸೈಲೆನ್ಸರ್‌ ತೆಗೆದು ಬುಲ್ಡೋಜರ್ ಮೂಲಕ ನಿಷ್ಕ್ರಿಯಗೊಳಿಸಿದ್ದೇವೆ. ವಾಹನಗಳಿಗೆ ಹೆಚ್ಚು ಶಬ್ಧ ಬರುವ ಸೈಲೆನ್ಸರ್‌ ಅಳವಡಿಸಿದರೆ ನಿರ್ದಾಕ್ಷಿಣ್ಯವಾಗಿ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಾಗುತ್ತದೆ. ನಗರದ ಗ್ಯಾರೇಜ್ ಮಾಲೀಕರಿಗೆ ಈಗಾಗಲೇ ಈ ಕುರಿತು ಎಚ್ಚರಿಕೆ ನೀಡಲಾಗಿದೆ ಎಂದು ಬೀದರ್ ಜಿಲ್ಲಾ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್‌ ಎಲ್ ತಿಳಿಸಿದರು.

ಬೀದರ್ ನಗರದ ಡಾ.‌ ಬಿ ಆರ್ ಅಂಬೇಡ್ಕರ್ ವೃತ್ತದಲ್ಲಿ ಜಿಲ್ಲಾ ಪೊಲೀಸರು ಹಮ್ಮಿಕೊಂಡಿದ್ದ ಹೆಲ್ಮೆಟ್ ಜಾಗೃತಿ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. “ಸಾರ್ವಜನಿಕರು ತಮ್ಮ ಅಮೂಲ್ಯವಾದ ಜೀವ ರಕ್ಷಣೆಗೆ ದ್ವಿಚಕ್ರ ವಾಹನ ಚಾಲನೆ ಮಾಡುವಾಗ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಮತ್ತು ಕಾರು ಚಾಲನೆ ಮಾಡುವಾಗ ಸೀಟ್ ಬೆಲ್ಟ್ ಧರಿಸುವುದನ್ನು ಮರೆಯಬಾರದು” ಎಂದು ಹೇಳಿದರು.

“ಕಳೆದ ವರ್ಷ ರಸ್ತೆ ಅಪಘಾತದಿಂದ 332 ಮಂದಿ ಮೃತಪಟ್ಟಿದ್ದಾರೆ. ಈ ಬಗ್ಗೆ ಪೊಲೀಸ್ ತಂಡ ವಿಶ್ಲೇಷಣೆ ಮಾಡಿದಾಗ ಹೆಲ್ಮೆಟ್ ಧರಿಸದೇ ಚಾಲನೆ ಮಾಡಿದ ಮತ್ತು ಕಾರು ಚಾಲನೆ ಮಾಡುವಾಗ ಸಿಟ್ ಬೆಲ್ಟ್ ಹಾಕದೇ ಇರುವುದಕ್ಕೆ ಈ ಅಪಘಾತಗಳು ಸಂಭವಿಸಿವೆ. ಈ ಬಗ್ಗೆ ಹೆಚ್ಚಿನ ಕಾಳಜಿವಹಿಸಿದ್ದು, ಸಾರ್ವಜನಿಕರಲ್ಲಿ ಹಾಗೂ ಶಾಲೆ-ಕಾಲೇಜು ವಿದ್ಯಾರ್ಥಿಗಳಲ್ಲಿ ಹೆಲ್ಮೆಟ್ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಹೆಲ್ಮೆಟ್ ಧರಿಸದೇ ಚಾಲನೆ ಮಾಡುವವರಿಗೆ ದಂಡ ಹಾಕುವ ಬದಲಾಗಿ ಆ ದಂಡದ ಮೊತ್ತದಲ್ಲಿ ಹೆಲ್ಮೆಟ್ ನೀಡಿ ಜಾಗೃತಿ ಮೂಡಿಸಲಾಗುತ್ತಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | ನಿಷೇಧಿತ ಮಾದಕ ವಸ್ತು ʼಚರಸ್ʼ ಸಾಗಾಟ; ಕಾರು ಸಹಿತ ಆರೋಪಿ ಬಂಧನ

“ಬೀದರ್ ನಗರ ಸೇರಿದಂತೆ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯೂ ಹೆಲ್ಮೆಟ್ ಜಾಗೃತಿ ಅಭಿಯಾನ ಹಮ್ಮಿಕೊಂಡಿದ್ದೇವೆ. ಹೆಲ್ಮೆಟ್ ಧರಿಸಿದವರನ್ನು ಕರೆಯಿಸಿ ನಗರದಲ್ಲಿ ನಡೆದ ರಸ್ತೆ ಅಪಘಾತ ಸಿಸಿಟಿವಿ ಫೂಟೇಜ್ ತೆಗೆದು ಅದರ ತುಣುಕಗಳ ವಿಡಿಯೋ ತೋರಿಸುವುದರ ಮೂಲಕ ಜನರಲ್ಲಿ ಜಾಗೃತಿ ಮೂಢಿಸಲಾಗುತ್ತಿದೆ. ಇನ್ನು ಮುಂದೆ ಹೆಲ್ಮೆಟ್ ಧರಿಸದೆ ಚಾಲನೆ ಮಾಡುವುದಿಲ್ಲವೆಂದು ಸಾರ್ವಜನಿಕರಿಂದ ಶಪಥ ಮಾಡಿಸಲಾಗುತ್ತಿದೆ” ಎಂದು ಹೇಳಿದರು.

ಈ ಕಾರ್ಯಕ್ರಮದಲ್ಲಿ ಪೊಲೀಸ್ ಉಪಾಧೀಕ್ಷಕ ಕೆ‌ ಎಂ ಸತೀಶ, ಗಾಂಧಿಗಂಜ್ ಪೊಲೀಸ್ ಠಾಣೆಯ ಸಿಪಿಐ ಹನುಮರೆಡ್ಡೆಪ್ಪಾ, ನ್ಯೂಟೌನ್‌ ಪೊಲೀಸ್ ಠಾಣೆಯ ಸಿಪಿಐ ವೆಂಕಟೇಶ, ಸಂಚಾರ ಪೊಲೀಸ್ ಠಾಣೆಯ ಪಿಎಸ್‌ಐ ಕಪೀಲದೇವ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...