ಬೀದರ್‌ | 9ನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ: ಶಿಕ್ಷಕ, ಶಿಕ್ಷಕಿ ಅಮಾನತು

Date:

ಜಿಲ್ಲೆಯ ಕಮಲನಗರ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಮೇಲೆ ನಡೆದ ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದಂತೆ ಶಾಲೆಯ ಶಿಕ್ಷಕ, ಶಿಕ್ಷಕಿಯನ್ನು ಡಿಡಿಪಿಐ ಸಲೀಂ ಪಾಷಾ ಅವರು ಮಂಗಳವಾರ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಜೂನ್ 28 ರಂದು ಶಾಲೆಯ ತರಗತಿಯಲ್ಲಿ ವಿದ್ಯಾರ್ಥಿಯೊಬ್ಬಳೇ ಇದ್ದಾಗ ಶಿಕ್ಷಕ ದೌರ್ಜನ್ಯ ಎಸಗಿದ್ದ. ಬಾಲಕಿ ವಿಷಯವನ್ನು ಕುಟುಂಬದವರಿಗೆ ಹಂಚಿಕೊಂಡಿದ್ದಳು. ವಿಷಯ ಬಹಿರಂಗಪಡಿಸಿದಂತೆ ಕುಟುಂಬದವರಿಗೆ ಶಿಕ್ಷಕಿ ಬಾಲಕಿಯ ಕುಟುಂಸ್ಥರಿಗೆ ಬೆದರಿಕೆ ಹಾಕಿ, ದೌರ್ಜನ್ಯವೆಸಗಿದ ಶಿಕ್ಷಕನ ಬೆಂಬಲಕ್ಕೆ ನಿಂತಿದ್ದರು.

ಈ ಕುರಿತು ಬಾಲಕಿಯ ತಂದೆ ಸೋಮವಾರ (ಜೂ.1) ಇಬ್ಬರ ವಿರುದ್ಧ ಠಾಣೆಗೆ ದೂರು ಕೊಟ್ಟಿದ್ದರು. ಸೋಮವಾರ ರಾತ್ರಿ ಶಿಕ್ಷಕ, ಶಿಕ್ಷಕಿಯನ್ನು ವಶಕ್ಕೆ ಪಡೆದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಅದರ ಬೆನ್ನಲೇ ಇಬ್ಬರನ್ನು ಅಮಾನತು ಮಾಡಲಾಗಿದೆ. ರಾಜ್ಯ ಮಕ್ಕಳ ಆಯೋಗವು ಸ್ವಯಂಪ್ರೇರಿತವಾಗಿ ಪ್ರಕರಣವನ್ನು ದಾಖಲಿಸಿಕೊಂಡಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...