ಬೀದರ್‌ | ಸ್ವಾಭಿಮಾನಿ ಗೆಳೆಯರ ಬಳಗದಿಂದ ವಸತಿ ವಂಚಿತರಿಗೆ ಹೊದಿಕೆ ವಿತರಣೆ

Date:

ಬೀದರ್‌ ನಗರದ ಸ್ವಾಭಿಮಾನಿ ಗೆಳೆಯರ ಬಳಗದ ಸದಸ್ಯರು ಅಲೆಮಾರಿ, ನಿರ್ಗತಿಕರಿಗೆ ಹಾಗೂ ಬಡವರಿಗೆ ಬೆಚ್ಚನೆಯ ಹೊದಿಕೆ ವಿತರಿಸುವ ಮೂಲಕ ಮಾನವೀಯತೆಯನ್ನು ಮೆರೆದಿದ್ದಾರೆ. 

ಬೀದರ್‌ ನಗರದ ನೌಬಾದ್‌ನ ಚೌಳಿ ಕಮಾನ್‌ ಸಮೀಪದಲ್ಲಿ ಗುಡಿಸಲಿನಲ್ಲಿ ವಾಸಿಸುವ ಸುಮಾರು 85ಕ್ಕೂ ಅಧಿಕ ಅಲೆಮಾರಿ ಕುಟುಂಬಗಳಿಗೆ ಹಾಗೂ ಪಾಪನಾಶ ದೇವಸ್ಥಾನ, ಕೆಇಬಿ ಬಳಿಯ ಹನುಮಾನ್ ಮಂದಿರ, ರೈಲ್ವೆ ನಿಲ್ದಾಣ, ಬಸ್ ನಿಲ್ದಾಣಗಳಲ್ಲಿ ಇರುವ ನಿರ್ಗತಿಕರಿಗೆ ಗೆಳೆಯರ ಬಳಗದ ಸದಸ್ಯರು ರಗ್ಗು ವಿತರಿಸಿದರು.

ಸ್ವಾಭಿಮಾನಿ ಗೆಳೆಯರ ಬಳಗದ ಅಧ್ಯಕ್ಷ ಚಂದ್ರಶೇಖರ ಪಡಶೆಟ್ಟಿ ಮಾತನಾಡಿ, ʼಜಿಲ್ಲೆಯಲ್ಲಿ ಕೆಲ ದಿನಗಳಿಂದ ವಿಪರೀತ ಚಳಿಗೆ ಜನರು ಕಂಗಾಲಾಗಿದ್ದಾರೆ. ಹೊತ್ತು ಮುಳುಗುವುದರೊಳಗಾಗಿ ಚಳಿ ಶುರುವಾದರೆ ಬೆಳಿಗ್ಗೆ 10 ಗಂಟೆಯಾದರೂ ಸಹ ಚಳಿಗೆ ಹೆದರಿ ಜನ ಮನೆಯಿಂದ ಹೊರಬರದಂತಹ ಪರಿಸ್ಥಿತಿ ಇದೆ. ಸ್ವಂತ ಸೂರು ಇಲ್ಲದೆ ಜೋಪಡಿಗಳಲ್ಲಿ ವಾಸಿಸುವ ಪುಟ್ಟ ಮಕ್ಕಳು, ವೃದ್ಧರು ಕೊರೆಯುವ ಚಳಿಯಲ್ಲಿ ಒದ್ದಾಡುತ್ತಿದ್ದಾರೆ. ಅವರ ಕಷ್ಟಕ್ಕೆ ನಮ್ಮ ತಂಡದ ಹೃದಯ ಮಿಡಿದಿದೆ. ಪ್ರತಿ ವರ್ಷವೂ ನಮ್ಮ ತಂಡದಿಂದ ಜಿಲ್ಲೆಯ ನಾನಾ ಕಡೆ ನಿರ್ಗತಿಕರಿಗೆ, ಬಡವರಿಗೆ ಹೊದಿಕೆ ವಿತರಿಸುವ ಕಾರ್ಯ ಮಾಡುತ್ತಿದ್ದೇವೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 11 20 at 10.33.58 PM

ಉದ್ಯಮಿ ಮಡಿವಾಳಪ್ಪ ಗಂಗಶೆಟ್ಟಿ ಅವರು ಮಾತನಾಡಿ, ʼಜಿಲ್ಲೆಯಲ್ಲಿ ಹೆಚ್ಚುತ್ತಿರುವ ಚಳಿ ವಸತಿ ರಹಿತರಿಗೆ ಸಂಕಷ್ಟಕ್ಕೆ ದೂಡಿದೆ. ಸ್ವಾಭಿಮಾನಿ ಗೆಳೆಯರ ಬಳಗದವರ ಸಾಮಾಜಿಕ ಕಳಕಳಿಗೆ ಮೆಚ್ಚಿ ರಗ್ಗು ದೇಣಿಗೆ ನೀಡುವ ಸಣ್ಣ ಕಾರ್ಯ ಮಾಡಿದ್ದೇನೆ. ವಸತಿ ವಂಚಿತ ಕುಟುಂಬಗಳಿಗೆ ಸರ್ಕಾರ ಮೂಲಸೌಕರ್ಯ ಒದಗಿಸುವುದು ಅಗತ್ಯವಿದೆʼ ಎಂದರು.

ಇದನ್ನೂ ಓದಿ : ಬೀದರ್‌ | ರೈತರ ಹೋರಾಟಕ್ಕೆ ಜಯ : ಟನ್ ಕಬ್ಬಿಗೆ‌ ₹2,950 ಬೆಲೆ ನಿಗದಿ : 8 ದಿನಗಳ ಧರಣಿ ಅಂತ್ಯ

ಈ ಸಂದರ್ಭದಲ್ಲಿ ಪ್ರಮುಖರಾದ ಸೊಮನಾಥ ಗಂಗಶೆಟ್ಟಿ, ಓಂಪ್ರಕಾಶ್ ರೊಟ್ಟೆ, ಬಾಲಾಜಿ ಕುಂಬಾರ, ಜಗದೀಶ್ವರ ಬಿರಾದಾರ, ಉಮಾಕಾಂತ ವಿಳಾಸಪುರೆ ಹಾಗೂ ಬಳಗದ ಸದಸ್ಯರಾದ ಶ್ರೀಕಾಂತ್ ರೆಡ್ಡಿ, ನಿಲಕಂಠ ಶೆಟಕಾರ, ವಿಶಾಲ ಘಾಳೆ, ಬಸವರಾಜ ಸ್ವಾಮಿ, ರವಿ ಬೆಳಕುಣೆ, ಭಾನುದಾಸ, ಉಮೇಶ್ ಈರಗೊಂಡೆ, ವಿನೋದ ಬಿರಾದಾರ, ದಿಗಂಬರ ಗುಮಟಾ, ವೀಣ್ ಮಾಜಿ, ಸಿದ್ದು ಸ್ವಾಮಿ, ಶಿವು ಸ್ವಾಮಿ, ಶ್ರೀಕಾಂತ ಸ್ವಾಮಿ, ನಾಗರಾಜ್ ಬಂಬುಳಗೆ, ಜೀವನ್, ವಿಲಾಸ್ ಮತ್ತು ತಂಡದ ಸದಸ್ಯರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...