ಬೀದರ್‌ | ಶಿಕ್ಷಕಿ ಭಾರತಿ ಲೋನಿಕರ್‌ಗೆ ಗ್ರಾಮಸ್ಥರಿಂದ ಅದ್ಧೂರಿ ಬೀಳ್ಕೊಡುಗೆ

Date:

ಔರಾದ್‌ ತಾಲೂಕಿನ ಜೋಜನಾ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಭಾರತಿ ಲೋನಿಕರ್‌ ಅವರ ವಯೋನಿವೃತ್ತಿ ಕಾರ್ಯಕ್ರಮವನ್ನು ಶಾಲಾ ಆವರಣದಲ್ಲಿ ಸೋಮವಾರ ಅದ್ಧೂರಿಯಾಗಿ ಜರುಗಿತು.

ಸರ್ಕಾರಿ ನೌಕರರ ಸಂಘದ ತಾಲೂಕಾಧ್ಯಕ್ಷ ಪಂಡರಿ ಆಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ʼಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದದ್ದು, ಜೀವನದುದ್ದಕ್ಕೂ ನಿಷ್ಠೆಯಿಂದ ಬೋಧನೆ ಮಾಡಿ ಸಾವಿರಾರು ವಿದ್ಯಾರ್ಥಿಗಳಿಗೆ ಜ್ಞಾನಾರ್ಜನೆ ಮಾಡಿರುವ ಶಿಕ್ಷಕರು ಮಕ್ಕಳ ಬಾಳಿಗೆ ಬೆಳಕಾಗುತ್ತಾರೆ. ಸೇವಾ ನಿವೃತ್ತಿ ಬದುಕು ಅತ್ಯಂತ ನೆಮ್ಮದಿಯಾಗಲಿʼ ಎಂದು ಹಾರೈಸಿದರು.

WhatsApp Image 2025 11 10 at 7.10.34 PM

ಸಂತಪೂರ ಸರ್ಕಾರಿ ಪ್ರೌಢ ಶಾಲೆ ಶಿಕ್ಷಕ ಶಿವಲಿಂಗ ಹೇಡೆ ಮಾತನಾಡಿ, ʼಶಿಕ್ಷಕರು ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಕರು ದೇಶದ ನಿರ್ಮಾತೃರು. ಕಲಿಕೆ ಜೊತೆಗೆ ಮಾನವೀಯ ಮೌಲ್ಯಗಳನ್ನು ನೀಡುವ ಕೆಲಸ ಶಿಕ್ಷಕರು ಮಾಡಬೇಕು. ಎರಡು ದಶಕಗಳ ಕಾಲ ಒಂದೇ ಶಾಲೆಯಲ್ಲಿ ಸೇವೆಗೈದ ಭಾರತಿ ಲೋನಿಕರ್‌ ಅವರ ಬದುಕು ಸಾರ್ಥಕವಾಗಿದೆ. ಶಿಕ್ಷಕರು ಮಕ್ಕಳ ಏಳಿಗೆಯಲ್ಲಿ ಬದುಕಿನ ಸಾರ್ಥಕತೆ ಕಂಡುಕೊಳ್ಳಬೇಕಿದೆʼ ಎಂದು ನುಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಾಲೆಯ ಮುಖ್ಯಶಿಕ್ಷಕಿ ಸವಿತಾ ಪಾಟೀಲ್‌ ಪ್ರಾಸ್ತಾವಿಕ ಮಾತನಾಡಿ, ʼಶಿಕ್ಷಕಿ ಭಾರತಿ ಲೋನಿಕರ್‌ ಅವರು ಮಕ್ಕಳಿಗೆ ಗುಣಮಟ್ಟ ಶಿಕ್ಷಣ ಜೊತೆಗೆ ಸಾಹಿತ್ಯ, ಸಂಸ್ಕೃತಿ, ಕ್ರೀಡಾ ಚಟುವಟಿಕೆಯ ಮನೋಭಾವ ಬೆಳೆಸಿ ಮಕ್ಕಳ ಅಚ್ಚುಮೆಚ್ಚಿನ ಗುರುಗಳಾದವರು. ಅವರೊಂದಿಗೆ ಸೇವೆ ಸಲ್ಲಿಸಿದ ನನಗೂ ಸಂತೃಪ್ತಿಇದೆ. ಇಷ್ಟು ವರ್ಷಗಳ ಕಾಲ ನಿಷ್ಠೆಯ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದು ಅವರು ನಮ್ಮೆಲ್ಲರಿಗೂ ಮಾರ್ಗದರ್ಶಕರಾಗಿದ್ದಾರೆʼ ಎಂದರು.

WhatsApp Image 2025 11 10 at 7.11.21 PM
ಸಾಧಕ ಶಿಕ್ಷಕ, ಗಣ್ಯರಿಗೆ ಶಾಲಾ ಮಂಡಳಿಯಿಂದ ಗೌರವಿಸಲಾಯಿತು.

ಇದೇ ಸಂದರ್ಭದಲ್ಲಿ ವಯೋ ನಿವೃತ್ತಿ ಹೊಂದಿರುವ ಭಾರತಿ ಲೋನಿಕರ್‌ ದಂಪತಿಗೆ ವಿದ್ಯಾರ್ಥಿಗಳು, ಗ್ರಾಮಸ್ಥರು, ಗ್ರಾಮ ಪಂಚಾಯತ್‌ ಸದಸ್ಯರು ಮತ್ತಿತರರು ವಿಶೇಷವಾಗಿ ಗೌರವಿಸಿ ಬೀಳ್ಕೊಟ್ಟರು. ಬಳಿಕ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಇದನ್ನೂ ಓದಿ : ಬೀದರ್‌ | ವಕೀಲರು ಕನ್ನಡದಲ್ಲಿ ವಾದಿಸಲಿ : ವಿನಾಯಕ ವಾನಖಂಡೇ

ಗ್ರಾಮ ಪಂಚಾಯತ್‌ ಅಧ್ಯಕ್ಷೆ ಸುಶೀಲಾಬಾಯಿ ಮೇತ್ರೆ, ಪಿಡಿಒ ನರಸಿಂಗ್‌ ಮಾನೆ, ಸಿಆರ್‌ಪಿ ಶಿವಾನಂದ ಸ್ವಾಮಿ, ಸರ್ಕಾರಿ ನೌಕರರ ಸಂಘದ ನಾಮ ನಿರ್ದೇಶಿತರಾದ ಗಫರ್‌ ಖಾನ್‌, ಇಮ್ಯಾನುವೆಲ್, ಪತ್ರಕರ್ತ ಬಾಲಾಜಿ ಕುಂಬಾರ, ಶಾಲೆಯ ಶಿಕ್ಷಕರಾದ ಗೋವಿಂದ ಮಾನೆ, ಪ್ರದೀಪ ಕುಮಾರ, ಬಸವರಾಜ್ ಸ್ವಾಮಿ, ಭಾಗ್ಯವತಿ, ಶಾಲಿನಿ ಸೇರಿದಂತೆ ಗ್ರಾಮದ ಗಣ್ಯರು, ವಿದ್ಯಾರ್ಥಿಗಳು, ಹಳೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...