ಬೀದರ್ | ಸರ್ಕಾರಿ ಪ್ರೌಢ ಶಾಲೆಯ ಶಿಕ್ಷಕ ವರ್ಗಾವಣೆ: ‘ಹೋಗಬೇಡಿ ಸರ್’ ಎಂದು ಕಣ್ಣೀರಿಟ್ಟ ವಿದ್ಯಾರ್ಥಿಗಳು

Date:

ಸರ್ಕಾರಿ ಪ್ರೌಢ ಶಾಲೆಯ ಶಿಕ್ಷಕರೊಬ್ಬರು ವರ್ಗಾವಣೆಯಾದ ಕಾರಣ ಮಕ್ಕಳು ಬಿಕ್ಕಿ, ಬಿಕ್ಕಿ ಅತ್ತ ಪ್ರಸಂಗ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಕೌಡಗಾಂವ್ ಗ್ರಾಮದಲ್ಲಿ ನಡೆದಿದೆ.

2013ರಿಂದ ಕೌಡಗಾಂವ್ ಸರ್ಕಾರಿ ಪ್ರೌಢ ಶಾಲೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಗೋಪಾಲ್ ರೆಡ್ಡಿ ಅವರು ಬೀದರ್ ತಾಲೂಕಿನ ಬಗದಲ್ ಸರ್ಕಾರಿ ಪ್ರೌಢ ಶಾಲೆಗೆ ವರ್ಗಾವಣೆಗೊಂಡಿದ್ದಾರೆ.

ಶಾಲೆಯಲ್ಲಿ ಆಯೋಜಿಸಿದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ನೆಚ್ಚಿನ ಶಿಕ್ಷಕ ಬೇರೆಡೆಗೆ ಹೋಗುತ್ತಿರುವುದರಿಂದ ಬೇಸರಗೊಂಡು ವಿದ್ಯಾರ್ಥಿಗಳು ಭಾವುಕರಾಗಿ ಒಲ್ಲದ ಮನಸ್ಸಿನಿಂದ ಕಳಿಸಿಕೊಟ್ಟರು. “ದಯವಿಟ್ಟು, ನಮ್ಮನ್ನು ಬಿಟ್ಟು ಎಲ್ಲಿಗೂ ಹೋಗ್ಬೇಡಿ ಸರ್” ಎಂದು ಮಕ್ಕಳು ಅಳುತ್ತಾ ತಬ್ಬಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಬೀದರ್3

ಬೀಳ್ಕೊಡುಗೆ ಕಾರ್ಯಕ್ರಮ ಮುಗಿಸಿ ಕೊಠಡಿಯಿಂದ ಹೊರಬರುತ್ತಿದ್ದಂತೆಯೇ ಬಿಗಿದಪ್ಪಿಕೊಂಡು ಕೈಮುಗಿದ ಮಕ್ಕಳು,
“ನೀವು ಹೋಗಬೇಡಿ, ಇಲ್ಲಿಯೇ ಇರಿ” ಎಂದು ಕಣ್ಣೀರು ಹಾಕಿದರು. ಇದನ್ನು ನೋಡಿ ಶಿಕ್ಷಕ ಗೋಪಾಲ ರೆಡ್ಡಿ ಅವರ ಕಣ್ಣಂಚಿನಿಂದಲೂ ನೀರು ಚಿಮ್ಮಿದವು. ಇದಕ್ಕೆ ಸಾಕ್ಷಿಯಾಗಿದ್ದ ಮುಖ್ಯಗುರು, ಸಹ ಶಿಕ್ಷಕರು ಗೋಪಾಲ್ ರೆಡ್ಡಿ ಅವರನ್ನು ಪ್ರೀತಿಯಿಂದ ಬೀಳ್ಕೊಟ್ಟರು. ಇದು ಭಾವನಾತ್ಮಕ ಕ್ಷಣಕ್ಕೆ ಸಾಕ್ಷಿಯಾಯಿತು.

ಮೊಟ್ಟ ಮೊದಲ ಸೇವೆ ಆರಂಭಿಸುವ ಮೂಲಕ 11 ವರ್ಷಗಳ ಕಾಲ ದೈಹಿಕ ಶಿಕ್ಷಣ ಶಿಕ್ಷಕನಾಗಿ ಸೇವೆ ಸಲ್ಲಿಸಿರುವ ಗೋಪಾಲ್ ರೆಡ್ಡಿ, ಎರಡು ಬಾರಿ ಸಲ ಖೋ ಖೋ ಕ್ರೀಡೆಯಲ್ಲಿ ರಾಜ್ಯಮಟ್ಟಕ್ಕೆ ಹಾಗೂ ಮೂರು ಸಲ ವಿಭಾಗ ಮಟ್ಟಕ್ಕೆ ಮತ್ತು ಸ್ಕೌಟ್ ಮತ್ತು ಗೈಡ್ಸ್ ನಲ್ಲಿ ರಾಜ್ಯ ಮಟ್ಟದ ಪುರಸ್ಕಾರ ಗವರ್ನರ್ ಅವಾರ್ಡ್, ಮೂರು ಬಾರಿ ರಾಜ ಭವನ ಹೋಗಲು ಅವಕಾಶ ಸೇರಿದಂತೆ ಅನೇಕ ಚಟುವಟಿಕೆಗಳಲ್ಲಿ ಸುಮಾರು 35 ವಿದ್ಯಾರ್ಥಿಗಳಿಗೆ ವಿವಿಧ ಪ್ರಶಸ್ತಿಗೆ ಗುರುತಿಸುವ ಕೆಲಸ ಮಾಡಿದ್ದಾರೆ.

ಬೀದರ್ 1 1

“ನನ್ನ 11 ವರ್ಷದ ಅವಧಿಯಲ್ಲಿ ಮುಖ್ಯ ಗುರುಗಳಾಗಿ ಸೇವೆ ಸಲ್ಲಿಸಿರುವ ಸಂತೋಷ್ ಕುಮಾರ್ ಪೂಜಾರಿ ಜಗದೇವಿ ಬೋಸ್ಲೆ ಹಾಗೂ ಪ್ರಸ್ತುತ ಸೇವೆಯನ್ನು ಸಲ್ಲಿಸುತ್ತಿರುವ ಮುಖ್ಯ ಗುರು ಬಾಲಿಕಾ ಮೇಹಕರ್ ಹಾಗೂ ಗ್ರಾಮದ ಪೋಷಕರ ಬೆಂಬಲ , ‌ಸಹಕಾರದಿಂದ ಉತ್ತಮ ಕೆಲಸ ಮಾಡಲು ಸಾಧ್ಯವಾಯಿತು” ಎಂದು ವರ್ಗಾವಣೆಗೊಂಡ ಶಿಕ್ಷಕ ಗೋಪಾಲ್ ರೆಡ್ಡಿ ಹೇಳಿದರು.

“ಇಲ್ಲಿನ ಜನರ ಮತ್ತು ಮಕ್ಕಳ ಪ್ರೀತಿ, ಸ್ನೇಹ ಇಷ್ಟು ವರ್ಷ ಇಲ್ಲಿ ನೆಲೆ ನಿಲ್ಲುವಂತೆ ಮಾಡಿತು. ಮಕ್ಕಳ ಜತೆಗೆ ಮರೆಯಲಾರದಂಥ ಬಾಂಧವ್ಯ ಬೆಸೆದಿದೆ” ಎಂದು ಶಿಕ್ಷಕ ಗೋಪಾಲ್ ರೆಡ್ಡಿ ಭಾವುಕರಾಗಿ ಹೇಳುತ್ತಾ, ಮಕ್ಕಳಿಗೆ ಬೀಳ್ಕೊಟ್ಟು ತೆರಳಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...