ಬೀದರ್‌ | ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಕ್ಷಕರ ಕಾರ್ಯ ಶ್ಲಾಘನೀಯ : ಗುರುಪ್ರಸಾದ್‌ ಖಂಡ್ರೆ

Date:

ಗುಣಮಟ್ಟದ ಶಿಕ್ಷಣ ಜೊತೆಗೆ ವಿದ್ಯಾರ್ಥಿಗಳ ಉಜ್ವಲ ಭವಿಷ್ಯ ರೂಪಿಸುವ ಶಿಕ್ಷಕರ ಕಾರ್ಯ ಶ್ಲಾಘನೀಯ ಎಂದು ಶಾಂತಿ ವರ್ಧಕ ಶಿಕ್ಷಣ ಸಂಸ್ಥೆಯ ನಿರ್ದೇಶಕ ಡಾ.ಗುರುಪ್ರಸಾದ ಈಶ್ವರ ಖಂಡ್ರೆ ಹೇಳಿದರು.

ಬೀದರ್‌ ನಗರದ ಅಕ್ಕಮಹಾದೇವಿ ಮಹಿಳಾ ಮಹಾವಿದ್ಯಾಲಯದಲ್ಲಿ ಶುಕ್ರವಾರ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ʼನಾನಾ ಕಾರ್ಯಗಳ ಒತ್ತಡಗಳ ನಡುವೆ ಶಿಕ್ಷಕರು ಮಕ್ಕಳಿಗೆ ಉತ್ತಮ ಬೋಧನೆ ಮಾಡಬೇಕು. ಮಕ್ಕಳಿಗೆ ಪಠ್ಯದ ಜೊತೆಗೆ ಮಾನವೀಯ ಮೌಲ್ಯಗಳನ್ನು ಬಿತ್ತುವ ಕೆಲಸ ಮಾಡಬೇಕು. ಸದಾ ಮಕ್ಕಳ ಏಳಿಗೆ ಬಯಸುವ ಶಿಕ್ಷಕ ವೃತ್ತಿ ಎಲ್ಲರಿಗೂ ಸಿಗುವುದಿಲ್ಲʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ.ಗಂಗಾಬಿಕೆ ಪಾಟೀಲ್‌ ಮಾತನಾಡಿ, ʼಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದದ್ದು, ಎಲ್ಲ ವೃತ್ತಿಗಳಿಗೆ ತೆರಳುವವರು ಶಿಕ್ಷಕರಿಂದ ಕಲಿತ ವಿದ್ಯಾರ್ಥಿಗಳೇ ಆಗಿರುತ್ತಾರೆ. ಬಸವಾದಿ ಶರಣರು ತಿಳಿಸಿದ ಅರಿವೇ ಗುರು, ಕಾಯಕದ ಮಹತ್ವ ಮೈಗೂಡಿಸಿಕೊಳ್ಳಬೇಕಾಗಿದೆ. ದೇಶದ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಪ್ರಮುಖವಾಗಿದೆʼ ಎಂದು ತಿಳಿಸಿದರು.

WhatsApp Image 2025 09 13 at 10.31.26 AM
ಶಾಂತಿ ವರ್ಧಕ ಶಿಕ್ಷಣ ಸಂಸ್ಥೆಯ ನಿರ್ದೇಶಕ ಡಾ.ಗುರುಪ್ರಸಾದ ಈಶ್ವರ ಖಂಡ್ರೆ ಮಾತನಾಡಿದರು.

ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ.ರಂಜನಾ ಪಾಟೀಲ್‌ ಅಧ್ಯಕ್ಷತೆ ವಹಿಸಿ ಮಾತನಾಡಿ, ʼವಿದ್ಯಾರ್ಥಿಗಳ ಕಲಿಕಾ ಉನ್ನತಿಗೆ ಶಿಕ್ಷಕರು ನಿರಂತರವಾಗಿ ಶ್ರಮಿಸುತ್ತಾರೆ. ಮಕ್ಕಳ ಯಶಸ್ವಿ ಬದುಕಿಗೆ ದಾರಿ ತೋರುವ ಶಿಕ್ಷಕರನ್ನು ವಿದ್ಯಾರ್ಥಿಗಳು ಯಾವತ್ತೂ ಮರೆಯದೆ ಗೌರವಿಸಬೇಕುʼ ಎಂದು ಸಲಹೆ ನೀಡಿದರು.

ಸಂಸ್ಥೆಯ ಆಡಳಿತಾಧಿಕಾರಿ ಅಂಕುಶ ಡೋಲೆ ಮಾತನಾಡಿ, ʼಈ ಭಾಗದಲ್ಲಿ ಸ್ಥಾಪನೆಯಾದ ಅಕ್ಕಮಹಾದೇವಿ ಮಹಿಳಾ ಕಾಲೇಜು ಮಹಿಳಾ ಶಿಕ್ಷಣ ಪ್ರಗತಿಗೆ ನಾಂದಿ ಹಾಡಿತು. ಮಹಿಳಾ ಸಬಲೀಕರಣ ಉದ್ದೇಶದಿಂದ ಮಾಜಿ ಸಚಿವ ಭೀಮಣ್ಣಾ ಖಂಡ್ರೆ ಹಾಗೂ ಡಾ.ಚನ್ನಬಸವ ಪಟ್ಟದ್ದೇವರು ನಿರ್ಮಿಸಿದ ಈ ಕಾಲೇಜು ಜಿಲ್ಲೆಗೆ ಮಾದರಿಯಾಗಿದೆʼ ಎಂದರು.

ವಿದ್ಯಾರ್ಥಿನಿಯರಾದ ಅಂಜಲಿ ಶಿವಕುಮಾರ್‌ ಹಾಗೂ ಗಂಗಾಶ್ರೀ ಅವರು ಶಿಕ್ಷಕರ ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಇದನ್ನೂ ಓದಿ : ಬೀದರ್‌ | ಕುಡಿದ ಮತ್ತಿನಲ್ಲಿ ಮಾಂಜ್ರಾ ನದಿಗೆ ಹಾರಿದ ವ್ಯಕ್ತಿ, ಮೃತದೇಹ ಪತ್ತೆ

ಕಾರ್ಯಕ್ರಮದಲ್ಲಿ ಪ್ರಮುಖರಾದ ಧೀರಜ್‌ ದೇಶಪಾಂಡೆ, ಮಲ್ಲಿಕಾರ್ಜುನ ಹೊನ್ನಾ ಸೇರಿದಂತೆ ಕಾಲೇಜಿನ ಪ್ರಾಧ್ಯಾಪಕರು, ಸಿಬ್ಬಂದಿ ಉಪಸ್ಥಿತರಿದ್ದರು. ಶ್ರೇಯಾ ನಿರೂಪಿಸಿದರು. ಸುಶ್ಮಾ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...