ಬೀದರ್‌ | ದೇಶದ ಸಂಸ್ಕೃತಿಗೆ, ಅಭಿವೃದ್ಧಿಗೆ ಅಲೆಮಾರಿ ಸಮುದಾಯದ ಕೊಡುಗೆ ಅಪಾರ : ಪಲ್ಲವಿ.ಜಿ

Date:

ನಮ್ಮ ದೇಶದ ಸಾಂಸ್ಕೃತಿಕ ವೈಭವದಲ್ಲಿ, ಜನಜೀವನದಲ್ಲಿ, ಅಭಿವೃದ್ಧಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಅಲೆಮಾರಿ ಜನಾಂಗಗಳ ಕೊಡುಗೆ ಸ್ಮರಣೀಯವಾದುದಾಗಿದೆ ಎಂದು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪಲ್ಲವಿ.ಜಿ ಹೇಳಿದರು.

ಬೀದರ್ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ʼಬೀದರ ಜಿಲ್ಲೆಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಲೆಮಾರಿ ಸಮುದಾಯಗಳ ಸಮಸ್ಯೆ, ಸವಾಲುಗಳು ಮತ್ತು ಪರಿಹಾರೋಪಾಯಗಳುʼ ಕುರಿತಾದ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು.

ʼವಿದ್ಯಾವಂತರಾದವರು ತಳವರ್ಗದ, ಅಲೆಮಾರಿಗಳ ಚಿಂತನೆ ಮಾಡಬೇಕು. ಧ್ವನಿಯಿಲ್ಲದವರಿಗೆ ಅವಕಾಶ ವಂಚಿತರಿಗೆ ಅವಕಾಶ ನೀಡುವ ಮನಸ್ಸು ಮಾಡಬೇಕು. ಸಮಾಜ ಕಲ್ಯಾಣವೆಂದರೆ ಜನರ ಕಲ್ಯಾಣ, ಸಮುದಾಯದ ಕಲ್ಯಾಣ. ಹೀಗಾಗಿ ಮೂಲನಿವಾಸಿಗಳಾದ ಪರಿಶಿಷ್ಟ ಜಾತಿ, ಪಂಗಡ ಹಾಗೂ ಅಲೆಮಾರಿಗಳ ಕುರಿತು ಅಧ್ಯಯನ ಕೈಗೊಂಡು ಅವರ ವಾಸ್ತವ ಬದುಕಿನ ಬಗ್ಗೆ ಬೆಳಕು ಚೆಲ್ಲಬೇಕಾದ ಅವಶ್ಯಕತೆಯಿದೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಶೇಷ ಉಪನ್ಯಾಸಕರಾಗಿ ಆಗಮಿಸಿದ ಬಿ.ಎಸ್.ಆನಂದಕುಮಾರ ಏಕಲವ್ಯ ಮಾತನಾಡಿ, ʼಅಲೆಮಾರಿಗಳು ಸಾರ್ಥಕ ಬದುಕಿನ ನಿಜವಾದ ರೂವಾರಿಗಳು. ನಾಳಿನ ಬದುಕಿಗಾಗಿ, ಸ್ವಚ್ಛ ಭಾರತದ ನಿಜವಾದ ನಾಗರೀಕರು. ಅವರು ತಮ್ಮ ಉಪಜೀವನಕ್ಕಾಗಿ ಹಾವು, ಕೋತಿ, ಕರಡಿ ಆಡುಸುತ್ತಾ ಸಮಾಜದ ಸ್ವಾಸ್ಥಕ್ಕಾಗಿ, ಸಾಂಸ್ಕೃತಿಕವಾಗಿ ಶ್ರೀಮಂತಗೊಳಿಸುವ ಪ್ರಾಂಜಲಭಾವದ ಕಾಯಕಜೀವಿಗಳು. ಅವರು ಸ್ವಂತ ಸೂರಿಲ್ಲದೇ ನಿರಂತರ ಸಂಚರಿಸಿ ತಾವು ಪಟ್ಟ ಪಾಡೇ ದೇಶಕ್ಕೆ ಹಾಡಾಗಿಸಿದರು. ಅತ್ಯಂತ ಕಠಿಣ ಕೆಲಸಗಳನ್ನು ಈ ಅಲೆಮಾರಿ, ಬುಡಕಟಡ್ಟು ಜನಾಂಗದಿಂದಲೇ ಅಂದಿನ ಆಡಳಿತವರ್ಗ ಮಾಡಿಸಿತುʼ ಎಂದರು.

ʼಅಲೆಮಾರಿಗಳು ಪ್ರಕೃತಿಯ ಆರಾಧಕರು. ಪ್ರಕೃತಿಯೊಂದಿಗೆ ಮಾತಾಡುವವರು. ಅರಣ್ಯದ ಹಕ್ಕನ್ನು ನಿಷೇಧ ಮಾಡಿದಾಗ ಅವರು ಅರಣ್ಯವನ್ನು ತೊರೆದು ದೊಂಬರಾಟ, ದುರುಗಮುರುಗಿ ಮುಂತಾದ ಕಾಯಕದಲ್ಲಿ ತಮ್ಮನ್ನು ಗುರುತಿಸಿಕೊಂಡು ಬಾಳಿದರು. ಇಂದು ಅಲೆಮಾರಿ ಬದುಕು ಆಧುನಿಕತೆಯ ಹೊಡೆತಕ್ಕೆ ಸಿಕ್ಕು ಮೂರಾಬಟ್ಟೆಯಾಗಿದೆ. ಅವರು ತಯಾರಿಸುವ ವಸ್ತುಗಳ ಸ್ಥಾನದಲ್ಲಿ ಇಂದು ಪ್ಲಾಸ್ಟಿಕ್, ಎಲೆಕ್ಟ್ರಾನಿಕ್ ವಸ್ತುಗಳು ಆವರಿಸಿವೆ. ಹೀಗಾಗಿ ಅಲೆಮಾರಿಗಳ ಅಭಿವೃದ್ಧಿ, ಅವರ ಬದುಕು ಕಟ್ಟಿಕೊಡುವಲ್ಲಿ ಎಲ್ಲರೂ ಪ್ರಾಮಾಣಿಕವಾಗಿ, ಸಹಕಾರಿಯಾಗಬೇಕುʼ ಎಂದರು.

ಬೀದರ್ ವಿವಿ ಕುಲಪತಿ ಪ್ರೊ.ಬಿ.ಎಸ್.ಬಿರಾದಾರ ಮಾತನಾಡಿ, ʼಅಲೆಮಾರಿ ಜನಾಂಗ ಧ್ವನಿಯಿಲ್ಲದ, ಶಕ್ತಿಯಿಲ್ಲದ ಜನಾಂಗ. ಬಡವರ ನೋವು ಅದನ್ನು ಅನುಭವಿಸಿದವರಿಗೆ ಮಾತ್ರ ಅರ್ಥವಾಗುತ್ತದೆ. ಇಂದಿಗೂ ನಿರ್ಲಕ್ಷ್ಯಕ್ಕೊಳಗಾದ ಅಲೆಮಾರಿ ಸಮುದಾಯ ನಿರಂತರ ಸಂಚಾರದಿಂದಾಗಿ ಜನಸಂಖ್ಯಾ ಗಣತಿಯಲ್ಲಿ, ಆಧಾರನಲ್ಲಿಯೂ ವಿಳಾಸ ಸಿಗದಷ್ಟು ನತದೃಷ್ಟರಾಗಿದ್ದಾರೆ. ಅವರ ಜೀವನ ನಿಜವಾಗಿಯೂ ಶೋಚನೀಯ. ಅಂತಹ ನಿರ್ಲಕ್ಷಿತರ ಸಬಲೀಕರಣಕ್ಕಾಗಿ ಎಲ್ಲರೂ ಶ್ರಮಿಸಬೇಕಾಗಿದೆʼ ಎಂದರು.

ಬೀದರ ವಿವಿ ಆಡಳಿತ ಕುಲಸಚಿವರಾದ ಸುರೇಖಾ ಕೆ.ಎ.ಎಸ್. ಮಾತನಾಡಿ, ʼದೇಶದ ಉದ್ಧಾರವೆಂದರೆ ಎಲ್ಲರ ಜೀವನಮಟ್ಟ ಸುಧಾರಣೆಯಾಗಬೇಕು. ಅಲೆಮಾರಿಗಳ, ತಳವರ್ಗದ ಜನರೆಲ್ಲ ಮುಖ್ಯವಾಹಿನಿಗೆ ತರಬೇಕಾದ ಅವಶ್ಯಕತೆಯಿದೆʼ ಎಂದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಏ.30ರಂದು ಬಸವ ಜಯಂತಿ : ವಚನಗಳ ಕಿರುಪುಸ್ತಕ ಹಂಚಲು ನಿರ್ಧಾರ

ಕಾರ್ಯಕ್ರಮದಲ್ಲಿ ಬೀದರ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾದ ಶ್ರೀನಾಗಭೂಷಣ ಕಮಠಾಣೆ, ಶಾಂತಲಿಂಗ ಸಾವಳಗಿ, ಸಚಿನ್ ಶಿವರಾಜ, ವಿಠ್ಠಲದಾಸ ಪ್ಯಾಗೆ, ಅಬ್ದುಲ್ ಸತ್ತಾರಸಾಬ, ವೈಷ್ಣವಿ ಪಾಟೀಲ, ಸಮಾಜ ಕಲ್ಯಾಣ ಇಲಾಖೆಯ ನಿರ್ದೇಶಕರಾದ ಸಿಂಧು, ಬೀದರ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವ ಪ್ರೊ.ಪರಮೇಶ್ವರನಾಯ್ಕ.ಟಿ., ಬೀದರ ವಿವಿ ವಿಶೇಷಾಧಿಕಾರಿ ಡಾ.ರವೀಂದ್ರನಾಥ ವಿ.ಗಬಾಡಿ, ಬೀದರ ಹಾಗೂ ವಿವಿಧ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು, ವಿಶ್ವವಿದ್ಯಾಲಯದ ಬೋಧಕ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...