ಬೀದರ್‌ | ವೈಜ್ಞಾನಿಕ ಚಿಂತನೆಯಿಂದ ಮಾತ್ರ ದೇಶದ ಪ್ರಗತಿ ಸಾಧ್ಯ : ಶಾಮಸುಂದರ ಖಾನಾಪೂರೆ

Date:

ಅಪಾರ ಜ್ಞಾನದ ಸಾಮರ್ಥ್ಯವಿದ್ದರೂ ಸಹ ಅವೈಜ್ಞಾನಿಕ ಚಿಂತನೆ, ಮೌಢ್ಯಗಳನ್ನು ನಂಬಿ ಬದುಕು ಕಟ್ಟಿಕೊಳ್ಳುತ್ತಿರುವ ನಾವು ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು ಅಸಾಧ್ಯ ಎಂದು ಸಂಪನ್ಮೂಲ ಶಿಕ್ಷಕ ಶಾಮಸುಂದರ ಖಾನಾಪೂರೆ ಕಳವಳ ವ್ಯಕ್ತಪಡಿಸಿದರು.

ಔರಾದ್ ಪಟ್ಟಣದ ಕನ್ನಡ ಭವನದಲ್ಲಿ ಗುರುವಾರ‌ ಬೀದರ್‌ನ ಬ್ರೇನ್ ಫೌಂಡೇಶನ್ ವತಿಯಿಂದ ಹಮ್ಮಿಕೊಂಡಿದ್ದ ಕಿತ್ತೂರು ರಾಣಿ ಚೆನ್ನಮ್ಮ ಜಯಂತ್ಯುತ್ಸವ ಹಾಗೂ ಎತ್ತ ಸಾಗುತ್ತಿದೆ ಭಾರತ? ಎಂಬ ವಿಷಯ ಕುರಿತಾದ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದ ಅವರು ಮಾತನಾಡಿದರು.

ʼಶಿಕ್ಷಣದ ಮೂಲಕ ಜ್ಞಾನ ಪಡೆದು ಮೂರ್ಖರಂತೆ ಕೆಲ ಮೌಢ್ಯ ನಂಬಿಕೆಗಳ ಬೆನ್ಹತ್ತಿ ಹೋಗುತ್ತಿರುವುದು ದೇಶಕ್ಕೆ ಅತ್ಯಂತ ಅಪಾಯಕಾರಿಯಾಗಲಿದೆ. ಭಾರತ ಎಂಬ ಪದ ದೇಶದಲ್ಲಿ ವಾಸಿಸುವ ಸಮಸ್ತ ಜನರ ಪ್ರತಿನಿಧಿತ್ವದ ಸಂಕೇತವಾಗಿ ನೋಡಬೇಕಿದೆ. ಇದನ್ನು ಒಂದು ನಕ್ಷೆಯಾಗಿ ನೋಡದೇ ಇಲ್ಲಿ ವಾಸಿಸುವ ಜನರ ಬದುಕು-ಬವಣೆಯ ಅರಿಯುವುದಾಗಿದೆ. ಹಲವು ಜಾತಿ, ಧರ್ಮ, ಮತಗಳನ್ನು ಹೊಂದಿರುವ ಭಾರತ ಬಹುತ್ವ ಸಂಸ್ಕೃತಿಯ ಪ್ರತಿಬಿಂಬದಂತಿದೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಪ್ರತಿಯೊಬ್ಬರೂ ಅನ್ಯ ಧರ್ಮ, ಅನ್ಯ ಜಾತಿಯ ಜನರಿಗೂ ಗೌರವಿಸಿ ನಾವೆಲ್ಲ ಭಾರತೀಯರು ಎಂದರಿತು ಬದುಕು ರೂಪಿಸಿಕೊಳ್ಳಬೇಕಿದೆ. ಪರಸ್ಪರ ಪ್ರೀತಿ ವಿಶ್ವಾಸದಿಂದ ಬದುಕದ ಹೊರತು ಅಭಿವೃದ್ದಿ ಸಾಧ್ಯವಿಲ್ಲ. ಭಾರತದಲ್ಲಿ ಎಲ್ಲರಿಗೂ ಸಂವಿಧಾನದ ಪಾಲನೆ ಮುಖ್ಯ ಎಂಬುದರ ಕುರಿತು ಜನರಲ್ಲಿ ಜಾಗೃತಿ ಮೂಡಿಸಬೇಕಿದೆʼ ಎಂದು ಹೇಳಿದರು.

ಗುಲಬರ್ಗಾ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಸಿದ್ದಪ ಮೂಲಗೆ ಮಾತನಾಡಿ, ʼದೇಶದಲ್ಲಿ ಜಾತಿಯತೆ ಎಂಬುದು ವಾಸ್ತವ. ದೇಶದ ಎಲ್ಲ ಬೆಳವಣಿಗೆಗಳು ಜಾತಿಯತೆ ಆಧಾರದಲ್ಲಿ ನಿರ್ಧರಗೊಳ್ಳುತ್ತಿವೆ. ಹೀಗಾಗಿ ಜಾತಿವಿನಾಶ ಮಾಡುವುದು ಅತ್ಯಂತ ಮುಖ್ಯವಾಗಿ. ದೇಶದ ಮಾಧ್ಯಮ ಮತ್ತು ರಾಜಕೀಯ ವ್ಯವಸ್ಥೆ ಸರಿಪಡಸದೇ ದೇಶದ ಅಭಿವೃದ್ಧಿ ಕನಸು ಕಾಣುವುದು ವ್ಯರ್ಥʼ ಎಂದರು.

ಕಾರ್ಯಕ್ರಮದಲ್ಲಿ ನ್ಯಾಯವಾದಿ ಶಿವರುದ್ರ ಕಾಂಬಳೆ, ಕಸಾಪ ಅಧ್ಯಕ್ಷ ಬಿ.ಎಂ ಅಮರವಾಡಿ, ನಿವೃತ್ತ ಶಿಕ್ಷಕ ಶಿವಾಜಿರಾವ ಪಾಟೀಲ್, ಶಿಕ್ಷಕ ಸೂರ್ಯಕಾಂತ ಸಿಂಗೆ, ಯುವ ಚಿಂತಕರಾದ ವಿನೋದ ರತ್ನಾಕರ್,‌ ಪರಮೇಶ್ವರ ವಿಳಸಪೂರೆ, ಸುಧಾಕರ ಕೊಳ್ಳುರ್ ಮಾತನಾಡಿದರು.

ಇದನ್ನೂ ಓದಿ : ಬೀದರ್‌ | ಆರ್‌ಎಸ್‌ಎಸ್ ಪಥ ಸಂಚಲನದಲ್ಲಿ ಭಾಗಿಯಾದ ಶಿಕ್ಷಕರ ವಿರುದ್ಧ ಕ್ರಮಕ್ಕೆ ದಲಿತ ಸೇನೆ ಆಗ್ರಹ

ಕಾರ್ಯಕ್ರಮದಲ್ಲಿ ನಂದಾದೀಪ ಬೋರಾಳೆ, ಮಲ್ಲಿಕಾರ್ಜುನ ಟಂಕಸಾಲೆ, ನಾಗಸೇನ ತಾರೆ, ಬಾಲಾಜಿ ಕುಂಬಾರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...