ಬೀದರ್ | ಹಾಡುಹಗಲೇ ಮನೆ ನುಗ್ಗಿ ಚಿನ್ನಾಭರಣ ಕದ್ದರೆಂದು ಸುಳ್ಳು ಕಥೆ ಕಟ್ಟಿದ ಕುಟುಂಬ

Date:

ಬೀದರ್ ಜಿಲ್ಲೆಯ ಔರಾದ್ ತಾಲ್ಲೂಕಿನ ಕೌಠಾ(ಬಿ) ಗ್ರಾಮದ ಮನೆಯೊಂದರಲ್ಲಿ ಯಾರೂ ಇಲ್ಲದ ವೇಳೆ ಇಬ್ಬರು ಮುಸುಕುಧಾರಿಗಳು ಮನೆಗೆ ನುಗ್ಗಿ ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ 25 ತೊಲೆ ಚಿನ್ನಾಭರಣ ಹಾಗೂ ನಗದು ಹಣ ದರೋಡೆಯಾಗಿದೆ ಎಂದು ಆರೋಪಿಸಿದ ಪ್ರಕರಣ ಪೊಲೀಸ್ ತನಿಖೆಯಲ್ಲಿ ಸುಳ್ಳು ಎಂದು ಸಾಬೀತಾಗಿದೆ.

‘ಮನೆಯಲ್ಲಿ ನನ್ನ ಪತ್ನಿ ಒಬ್ಬಳೇ ಇದ್ದ ವೇಳೆ ಇಬ್ಬರು ಮುಸುಕುಧಾರಿಗಳು ಹಿಂಬಾಗಿಲಿನಿಂದ ಮನೆಗೆ ನುಗ್ಗಿ ಚಾಕುವಿನಿಂದ ಗಂಭೀರವಾಗಿ ಗಾಯಗೊಳಿಸಿ ಮನೆಯಲ್ಲಿದ್ದ 25 ತೊಲೆ ಚಿನ್ನಾಭರಣ ಹಾಗೂ 1 ಲಕ್ಷ ನಗದು ದರೋಡೆ ಮಾಡಿದ್ದಾರೆ’ ಎಂದು ಆರೋಪಿಸಿ ಕುಟುಂಬದ ಮುಖ್ಯಸ್ಥ ಓಂಕಾರ ಅಪಾರಾವ್ ಗಾದಗೆ ಎಂಬುವವರು ಫೆ.21ರಂದು ನೀಡಿದ ದೂರಿನ ಮೇರೆಗೆ ಸಂತಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಘಟನೆ ನಡೆದ ದಿನವೇ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲಿಸಿತು. ಹಾಡುಹಗಲೇ ನಡೆದ ಈ ಘಟನೆಯಿಂದಾಗಿ ಜಿಲ್ಲೆಯ ಜನರಲ್ಲಿ ಭಾರಿ ಆತಂಕ ಆವರಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾ ಪೊಲೀಸರು 4 ತಂಡ ರಚಿಸಿ ಕೂಲಂಕುಷವಾಗಿ ತನಿಖೆ ನಡೆಸಿದ್ದು, ಮನೆ ದರೋಡೆ ನಡೆದಿದೆ ಎನ್ನಲಾದ ಆರೋಪ ಸುಳ್ಳು ಎಂದು ಸಾಬೀತಾಗಿದೆ.

ʼಮನೆ ದರೋಡೆಯಾಗಿದೆ ಎಂದು ಆರೋಪಿಸಿದ ಎಲ್ಲ ಚಿನ್ನಾಭರಣ ಹಾಗೂ ನಗದು ಅವರ ಮನೆಯಲ್ಲಿ ಪತ್ತೆಯಾಗಿದೆʼ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರು ಬುಧವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ದೂರುದಾರ ಓಂಕಾರ ಗಾದಗೆ ಅವರ ಕುಟುಂಬ ಆರ್ಥಿಕ ಬಿಕ್ಕಟ್ಟು ಹಾಗೂ ಸಾಲದ ಸುಳಿಯಿಂದ ಪಾರಾಗಲು ಪೊಲೀಸರಿಗೆ ಈ ರೀತಿ ಸುಳ್ಳು ಮಾಹಿತಿ ನೀಡಿ ಪ್ರಕರಣ ದಾಖಲಿಸಿದ್ದಾರೆ ಎಂಬುದು ತನಿಖೆಯಿಂದ ಕಂಡು ಬಂದಿದೆ’ ಎಂದು ಸ್ಪಷ್ಟಪಡಿಸಿದ್ದಾರೆ.

ಜಿಲ್ಲೆಯ ಸಾರ್ವಜನಿಕರು ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ. ಸಾರ್ವಜನಿಕರ ಆಸ್ತಿ, ಪಾಸ್ತಿ ಹಾಗೂ ಪ್ರಾಣಹಾನಿ ಕಾಪಾಡಲು ಜಿಲ್ಲಾ ಪೊಲೀಸ್ ಕಟಿಬದ್ಧವಾಗಿದೆ ಎಂದು ಭರವಸೆ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್ | ಪೋಷಕರ ಜೊತೆ ಸೇರಿ ಪತಿಯನ್ನು ಕೊಂದ ಪತ್ನಿ

ಸಂತಪೂರ ಠಾಣೆಯಲ್ಲಿ ದಾಖಲಾಗಿದ್ದ ಈ ಸುಳ್ಳು ದರೋಡೆ ಪ್ರಕರಣವನ್ನು ಚಾಕಚಕ್ಯತೆಯಿಂದ ಖುಲಾಸೆಗೊಳಿಸಿದ ಎಲ್ಲ ಪೊಲೀಸ್ ಅಧಿಕಾರಿ, ಸಿಬ್ಬಂದಿಯವರ ಕಾರ್ಯವೈಖರಿಯನ್ನು ಎಸ್ಪಿ ಪ್ರದೀಪ್ ಗುಂಟಿ ಅವರು ಶ್ಲಾಘಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...