ಬೀದರ್‌ | ಜನಮನ ಸೆಳೆದ ʼಶಿವಶರಣ ಹರಳಯ್ಯʼ ನಾಟಕ

Date:

ಔರಾದ್ ಪಟ್ಟಣದ ಶ್ರೀ ಸಾಯಿ ದೇವಸ್ಥಾನದ ಆವರಣದಲ್ಲಿ ಕರ್ನಾಟಕ ರಾಜ್ಯೋತ್ಸವ ನಿಮಿತ್ತ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಶ್ರೀ ಸಾಯಿ ದೇವಸ್ಥಾನ ಸಮಿತಿ ಸಹಯೋಗದಲ್ಲಿ ಆಯೋಜಿಸಿದ ಕನ್ನಡ ದೀಪೋತ್ಸವ ಹಾಗೂ ʼಶಿವಶರಣ ಹರಳಯ್ಯʼ ನಾಟಕ ಪ್ರದರ್ಶನ ಜನಮನ ಸೆಳೆಯಿತು.

ತಾಪಂ ಸಹಾಯಕ ನಿರ್ದೇಶಕ ಶಿವಕುಮಾರ ಘಾಟೆ ಮಾತನಾಡಿ, ʼನಾಟಕಗಳು ಸಮಾಜದ ಕನ್ನಡಿಯಂತಿದ್ದು, ಅವು ಜನಸಾಮನ್ಯರ ಮೇಲೆ ಹೆಚ್ಚು ಪ್ರಭಾವ ಬೀರುವ ಅತ್ಯಂತ ಗಟ್ಟಿ ಮಾಧ್ಯಮ. ಹಿಂದಿನಿಂದಲೂ ನಾಟಕಗಳು ಜನರಿಗೆ ಮನರಂಜನೆಯ ಜೊತೆಗೆ ಬದುಕಿನ ಮರ್ಮವನ್ನೂ ಅರುಹಿ, ಒಳ್ಳೆಯದು ಕೆಟ್ಟದ್ದು ಎಂದು ತಿಳಿಹೇಳುವ ಪಾಠಗಳಾಗಿದ್ದವು. ಇದರಿಂದ ಸಮಾಜ ತನ್ನಿಂದ ತಾನೇ ಸುಧಾರಿಸಿಕೊಳ್ಳಲು ಸಹಾಯವಾಗುತ್ತಿತ್ತುʼ ಎಂದರು.

ಕಸಾಪ ತಾಲೂಕು ಅಧ್ಯಕ್ಷ ಬಿ.ಎಂ ಅಮರವಾಡಿ ಮಾತನಾಡಿ, ʼಇಂದು ಸಿನಿಮಾ, ಟಿ.ವಿ. ಮೊಬೈಲ್ ಸೇರಿದಂತೆ ಮನರಂಜನೆಗಾಗಿ ಹಲವಾರು ಮಾಧ್ಯಮಗಳಿದ್ದರೂ ಅವು ನಾಟಕದಷ್ಟು ಪರಿಣಾಮಕಾರಿಯಲ್ಲ. ನಾಟಕಗಳು ಬದುಕಿನ ಸೌಂದರ್ಯ ಹಾಗೂ ಬವಣೆ ಸೇರಿದಂತೆ ಎಲ್ಲ ಮಗ್ಗುಲುಗಳನ್ನೂ ನಮ್ಮ ಕಣ್ಣೆದುರೇ ತೋರುವುದರ ಜೊತೆಗೆ ಸರಿ ತಪ್ಪು, ಒಳಿತು ಕೆಡುಕುಗಳನ್ನೂ ಅನಾವರಣಗೊಳಿಸುತ್ತವೆ ಇದರಿಂದಾಗಿಯೇ ಒಳ್ಳೆಯ ಮೌಲ್ಯಗಳನ್ನು ಹೊತ್ತ ನಾಟಕ ಜನರಿಗೆ ಸನ್ಮಾರ್ಗವನ್ನು ತೋರುತ್ತವೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಟ್ಟಣ ಪಂಚಾಯತಿ ಅಧ್ಯಕ್ಷೆ ಸರುಬಾಯಿ ಘುಳೆ ಸಮಾರಂಭ ಉದ್ಘಾಟಿಸಿ ಮಾತನಾಡಿ, ʼಬಸವಾದಿ ಶರಣರ ವಿಚಾರಗಳು ಇಂದಿಗೂ ಪ್ರಸ್ತುತವಾಗಿದ್ದು, ಕನ್ನಡ ಸಾಹಿತ್ಯ ಪರಿಷತ್ತು ಮಾಡುತ್ತಿರುವ ಕೆಲಸ ಖುಷಿ ತಂದಿದೆʼ ಎಂದರು.

WhatsApp Image 2025 11 03 at 10.24.30 PM

ಇದೇ ವೇಳೆ ಪ್ರಸಕ್ತ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಅನೀಲ ದೇಶಮುಖ, ನಿವೃತ್ತ ಬಸ್ ಚಾಲಕ ದೇವಪ್ಪ, ದೇವಸ್ಥಾನದ ಆವರಣ ರಂಗೋಲಿ ಮೂಲಕ ಅಲಂಕರಿಸಿದ ಪೋಲಪ್ಪ ಪವಾರ್ ಹಾಗೂ ರಮೇಶ ಪಾಂಚಾಳ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಇದನ್ನೂ ಓದಿ : ಬೀದರ್ | ಕೆಟಿಪಿಪಿ ನಿಯಮ ಉಲ್ಲಂಘನೆ: ಹುಲಸೂರ ಪಿಡಿಒ ಅಮಾನತು

ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಬಸವರಾಜ ಹೆಬ್ಬಾಳೆ, ಹಿರಿಯರಾದ ಗುಂಡಯ್ಯ ರಘುನಾಥ ಬಿರಾದಾರ, ಭೀಮಾಶಂಕರ ಜೀರ್ಗೆ, ವಿಜಯಕುಮಾರ ಶಾಸ್ತ್ರಿ, ಪಿಎಸ್ಐ ವಸೀಮ ಪಟೇಲ್, ಅಬಕಾರಿ ಇನ್ಸ್‌ಪೆಕ್ಟರ್ ಶಬೀರ್, ಶಿವಾನಂದ ಮೊಕ್ತೆದಾರ್, ಅಶೋಕ ಶೆಂಬೆಳ್ಳೆ, ಅಮರಸ್ವಾಮಿ ಸ್ಥಾವರಮಠ, ಅಂಬಾದಾಸ ನಳಗೆ, ಸಂದೀಪ ಪಾಟೀಲ್, ಮಹಾನಂದಾ ಎಂಡೆ, ರಾಜೇಂದ್ರ ನಾಯ್ಕ್, ಮಹಾದೇವ ಶಿಂಧೆ, ಅನೀಲ ಮೇತ್ರೆ ಸೇರಿದಂತೆ ಇನ್ನಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...