ಬೀದರ್‌ | ತೇಜಸ್ವಿ ಬರಹದಲ್ಲಿ ಸಮಕಾಲೀನ ಸ್ಪಂದನೆಯ ಗುಣ : ಭೀಮಾಶಂಕರ ಬಿರಾದರ್

Date:

ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರ ಒಟ್ಟು ಬರಹದಲ್ಲಿ ಸಮಾಜ, ರಾಜಕಾರಣ, ಪರಿಸರ, ಆರ್ಥಿಕತೆ ಸೇರಿ ಲೋಕ ವಿಮರ್ಶೆಯ ಮಾದರಿಯೊಂದು ಕಾಣುತ್ತೇವೆ. ಅವರ ಬರಹಕ್ಕೆ ಸಮಕಾಲೀನ ಸ್ಪಂದನೆಯ ಗುಣವಿದೆ ಎಂದು ಬಸವೇಶ್ವರ ಪದವಿ ಕಾಲೇಜು ಪ್ರಾಚಾರ್ಯ ಡಾ.ಭೀಮಾಶಂಕರ ಬಿರಾದಾರ ಹೇಳಿದರು. 

ಬೆಂಗಳೂರಿನ ಕರ್ನಾಟಕ ಸಾಹಿತ್ಯ ಅಕಾಡೆಮಿ, ಚಕೋರ ಸಾಹಿತ್ಯ ವಿಚಾರ ವೇದಿಕೆ ಬೀದರ್‌ ಇವರ ಸಹಯೋಗದಲ್ಲಿ ಬಸವಕಲ್ಯಾಣದ ಎಸ್‌ಎಸ್‌ಕೆ ಬಸವೇಶ್ವರ ಪದವಿ ಕಾಲೇಜಿನಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕೆ.ಪಿ.ಪೂರ್ಣಚಂದ್ರ ತೇಜಸ್ವಿಯವರ ‘ಹೊಸ ವಿಚಾರಗಳು’ ಕುರಿತ ವಿಶೇಷ ಉಪನ್ಯಾಸ ಸಮಾರಂಭದಲ್ಲಿ ಮಾತನಾಡಿದರು.

ʼಲೋಕ ವಿಮರ್ಶೆ ಹಾಗೂ ಜೀವನ ಶೋಧ ತೇಜಸ್ವಿ ಬರಹದ ತಾತ್ವಿಕತೆಯಾಗಿದೆ. ಸಮಾಜದ ಸ್ಥಗಿತತೆ ಮೀರುವ ದಾರಿಗಳು, ಮನುಷ್ಯನೂ ಸೇರಿ ಎಲ್ಲ ಜೀವಿಗಳ ಅಸ್ತಿತ್ವ ಅರಿಯಲು, ಪರಿಸರ ಪ್ರಜ್ಞೆ ರೂಪಿಸಿಕೊಳ್ಳಲು, ಲೋಕದ ಸಂಕೀರ್ಣತೆ ಕಂಡುಕೊಳ್ಳಲು ತೇಜಸ್ವಿ ಬರಹ ದಾರಿಯಾಗಿವೆ. ಜಾಗತಿಕ ಅರ್ಥ ವ್ಯವಸ್ಥೆ, ರೈತರ ಕಷ್ಟಗಳು, ರಾಜಕಾರಣಿಗಳ ಬೇಜವಾಬ್ದಾರಿ, ಕನ್ನಡಕ್ಕೆ ತೆರೆದುಕೊಳ್ಳಬೇಕಾದ ತಂತ್ರಜ್ಞಾನಗಳ ಬಗೆಗೆ ಗಾಢವಾದ ಚಿಂತನೆ ಮಾಡಿದ್ದಾರೆ. ಜಾಗತಿಕರಣ ಹಾಗೂ ಮುಕ್ತ ಮಾರುಕಟ್ಟೆಯ ಬಂಡವಾಳಶಾಹಿಗಳ ಇದಿರು ಎಲ್ಲರೂ ಗ್ರಾಹಕರಾಗಿದ್ದೇವೆ. ಮನುಷ್ಯ ಲೋಕ ಸರಕು ಸಂಸ್ಕೃತಿಯಾಗಿ ಮಾರ್ಪಟ್ಟದೆ. ವ್ಯಕ್ತಿಯ ಜೀವನ ವಿಧಾನವೇ ವ್ಯವಹಾರಿಕವಾದ ಕುರಿತು ‘ಹೊಸ ವಿಚಾರಗಳು’ ಕೃತಿಯಲ್ಲಿ ಅವರು ಚರ್ಚಿಸಿದ್ದಾರೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಿರಿಯ ಪತ್ರಕರ್ತ ಶಶಿಕಾಂತ ಶೆಂಬೆಳ್ಳಿ ಮಾತನಾಡಿ, ʼಪ್ರತಿಯೊಂದು ಕೆಲಸದಲ್ಲಿ ಶ್ರದ್ಧೆ ಇರಬೇಕು. ಓದುವುದು ಒಂದು ತಪಸ್ಸಿನಂತೆ ಪರಿಗಣಿಸಿದರೆ ಭವಿಷ್ಯ ರೂಪಿಸಿಕೊಳ್ಳುತ್ತದೆ. ಸದ್ಯದ ಸಂದರ್ಭದಲ್ಲಿ ಹಲವು ಅವಕಾಶಗಳಿವೆ. ಅದನ್ನು ಬಳಸಿಕೊಳ್ಳಬೇಕು. ಜ್ಞಾನದ ವಲಯವನ್ನು ವಿಸ್ತರಿಸಲು, ಅರ್ಥೈಸಿಕೊಳ್ಳಲು ಯತ್ನಿಸಿ ಎಂದರು.

ʼತೇಜಸ್ವಿ ಅವರು ಕನ್ನಡದ ಬಹುದೊಡ್ಡ ಓದುಗ ಬಳಗ ಹೊಂದಿದ ಲೇಖಕರು. ಅವರ ಬರಹದಲ್ಲಿ ಕಾಡು, ನೆಲ, ನಿಸರ್ಗದ ವಿಸ್ಮಯ ಮತ್ತು ಕೌತುಕಗಳು ಅಡಕವಾಗಿದೆ.  ಓದು ಅಧ್ಯಯನ ವ್ಯಕ್ತಿಯನ್ನು ಸ್ವಾವಲಂಬಿ ಮತ್ತು ಸ್ವಾಭಿಮಾನಿಯಾಗಿ ಬೆಳೆಸುತ್ತವೆ. ನಿಮ್ಮ ಆಸಕ್ತಿಯ ಕ್ಷೇತ್ರದಲ್ಲಿ ನೀವು ಮುಂದುವರೆದರೆ ಸೃಜನಶೀಲತೆ ಸೃಷ್ಟಿಸಬಹುದುʼ ಎಂದು ತಿಳಿಸಿದರು.

ʼಮಾಧ್ಯಮ ಕ್ಷೇತ್ರದಲ್ಲಿ ಹಲವು ಅವಕಾಶಗಳಿವೆ. ಪ್ರತಿಭೆಗೆ ಹೆಚ್ಚು ಆದ್ಯತೆಯಿದೆ. ಮಾಧ್ಯಮಕ್ಷೇತ್ರಕ್ಕೆ ಹೊಸ ಪೀಳಿಗೆ ಪ್ರವೇಶ ಅಗತ್ಯವಿದೆ. ಸಾಮಾಜಿಕ ಜಾಲತಾಣಗಳಿಗೆ ಅಧಿಕೃತತೆ ಇರುವುದಿಲ್ಲ. ಅಲ್ಲಿ ಹುಸಿ ಸುದ್ದಿಗಳಿರುತ್ತವೆ. ಪತ್ರಿಕೆಗಳಿಗೆ ಹಾಗೂ ಕೃತಿಗಳಿಗೆ ಅಧಿಕೃತ ಬರಹಗಾರರಿರುತ್ತಾರೆ. ಸದ್ಯದ ವಿದ್ಯಮಾನಗಳನ್ನು ಅರಿಯಲು ಪತ್ರಿಕೆಗಳ ಅಗತ್ಯವಿದೆʼ ಎಂದರು.

IMG 20250509 WA00211
ಅತಿಥಿಗಳೊಂದಿ ಕಾಲೇಜಿನ ವಿದ್ಯಾರ್ಥಿಗಳು

ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಸದಸ್ಯ ಡಾ.ಸಂಜೀವಕುಮಾರ ಅತಿವಾಳೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ʼಸಾಹಿತ್ಯ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಈ ಸಮಾರಂಭ ಆಯೋಜಿಸಲಾಗಿದೆ.ವಿದ್ಯಾರ್ಥಿಗಳಲ್ಲಿ ವೈಚಾರಿಕತೆ, ವಿವೇಚನೆಗಯನ್ನು ಮೂಡಿಸುವ ಕೆಲಸ ಕರ್ನಾಟಕ ಸಾಹಿತ್ಯ ಅಕಾಡೆಮಿ ಮಾಡುತ್ತಿದೆʼ ಎಂದರು.

ʼಹೊಸ ಪ್ರತಿಭೆಗಳಿಗೆ  ಸಾಹಿತ್ಯ ಅಕಾಡೆಮಿ ವೇದಿಕೆಯಾಗಿದೆ. ಕನ್ನಡ ಸಾಹಿತ್ಯಕ್ಕೆ ಎರಡು ಸಾವಿರಕ್ಕೂ ಹೆಚ್ಚು ವರ್ಷಗಳ ಚರಿತ್ರೆಯಿದೆ. ಶ್ರೇಷ್ಠ ಸಾಹಿತ್ಯ ಕೃತಿಗಳ ಓದಿನಿಂದ ಹೊಸ ಅರಿವು ವಿಸ್ತರಿಸಿಕೊಳ್ಳಬಹುದುʼ ಎಂದರು.

ಅಧ್ಯಕ್ಷತೆ ವಹಿಸಿದ್ದ ಐಕ್ಯುಎಸಿ ಸಂಯೋಜಕ ಡಾ. ಶಿವಕುಮಾರ ಪಾಟೀಲ ಮಾತನಾಡಿ, ʼಪುಸ್ತಕ ಓದುವ ಹವ್ಯಾಸ ಕಡಿಮೆಯಾಗಿದ್ದು ಅತ್ಯಂತ ನೋವಿನ ಸಂಗತಿ. ಓದಿನಿಂದಲೇ ಜ್ಞಾನದ ವಿಸ್ತಾರ ಸಾಧ್ಯ. ಓದಿನ ಹಸಿವಿನಿಂದಲೇ ತಿಳುವಳಿಕೆ ಹೆಚ್ಚಾಗುತ್ತದೆ. ಪಕ್ಷಿಲೋಕ ಬಗೆಗೆ ಹೆಚ್ಚು ನಿರ್ದಿಷ್ಟ ಮತ್ತು ವೈಜ್ಞಾನಿಕವಾಗಿ ತೇಜಸ್ವಿ ಬರೆದಿದ್ದಾರೆʼ ಎಂದರು.

ಭಾಲ್ಕಿಯ ನಿವೃತ್ತ ಗ್ರಂಥಪಾಲಕ ಉಮೇಶ ಮಾಸಿಮಾಡೆ, ಚಕೋರ ಸಾಹಿತ್ಯ ವಿಚಾರ ವೇದಿಕೆ ಸಂಯೋಜಕಿ ಡಾ.ಮಕ್ತುಂಬಿ ಎಂ. ಪ್ರಾಸ್ತಾವಿಕ ಮಾತನಾಡಿದರು. ಪ್ರತಿಭಾವಂತ ವಿದ್ಯಾರ್ಥಿಗಳಾದ ಶಬನಮ್ ಹಾಗೂ ಜಯಶ್ರೀ ಸ್ವಾಮಿ ಅವರಿಗೆ ಸನ್ಮಾನಿಸಲಾಯಿತು.

ಡಾ.ಸುರೇಶ ಎಚ್.ಆರ್. ಕಲ್ಯಾಣಪ್ಪಾ ನಾಗವದಗಿ, ನಾಗಪ್ಪಾ ನಿಣ್ಣೆ, ಸೂರ್ಯಕಾಂತ ನಾಸೆ, ಭಾರತಿ ಮಠ, ಶಿಲ್ಪಾ ಬಿರಾದಾರ, ಪೂಜಾ  ಮೊದಲಾದವರಿದ್ದರು. ಪ್ರೊ. ವಿಠೋಬಾ ಡೊಣ್ಣೆಗೌಡರ್ ಸ್ವಾಗತಿಸಿದರು. ಭೀಮಾಶಂಕರ ಪೂಜಾರಿ ನಿರೂಪಿಸಿದರು. ಡಾ. ರಮೇಶ ಕೆ. ಬಿ.  ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...