ಬೀದರ್‌ | ದೇಶಕ್ಕೆ ಬರಹಗಾರರ ಕೊಡುಗೆ ಅನನ್ಯ

Date:

ದೇಶದ ಸ್ವಾತಂತ್ರ್ಯಕ್ಕೆ ಸಾಹಿತಿ, ಬರಹಗಾರರ ಕೊಡುಗೆ ಅನನ್ಯವಾಗಿದೆ. ಲೇಖನಿ ಖಡ್ಗಕ್ಕಿಂತ ಹರಿತವಾದದ್ದು, ಅದರಿಂದ ಮೂಡಿ ಬರುವ ಅಕ್ಷರಗಳು ಜನರಲ್ಲಿ ಜಾಗೃತಿ ಮೂಡಿಸುತ್ತವೆ ಎಂದು ಚಿದಂಬರ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಡಾ ಹಾವಗಿರಾವ ಹೇಳಿದರು.

ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು ಹಾಗೂ ಚಕೋರ ಸಾಹಿತ್ಯ ವಿಚಾರ ವೇದಿಕೆ ಬೀದರ ಸಹಯೋಗದಲ್ಲಿ ಬೀದರ್‌ ನಗರದ ಸದ್ಗುರು ಸಿದ್ಧಾರೂಢ ಮಹಿಳಾ ಪದವಿ ಮಹಾವಿದ್ಯಾಲಯ ಆಯೋಜಿಸಿದ್ದ ಸ್ವಾತಂತ್ರ್ಯ ಚಳುವಳಿಯಲ್ಲಿ ಸಾಹಿತ್ಯದ ಪಾತ್ರ ವಿಶೇಷ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಚಿದಂಬರ ಶಿಕ್ಷಣ ಸಂಸ್ಥೆಯ ನಿರ್ದೇಶಕ ಸ್ವಾತ್ಮಾನಂದ ಗಿರಿ ಸ್ವಾಮೀಜಿ ಮಾತನಾಡಿ, ʼಸಾಹಿತ್ಯ ಎಂಬ ಅರಮನೆಯಲ್ಲಿ ಮುತ್ತು ರತ್ನಗಳಿವೆ. ಅದರೊಳಗೆ ಹೋದವನಿಗೆ ಮಾತ್ರ ಸಾಹಿತ್ಯದ ರುಚಿ ಸಿಗುವುದು. ಶಬ್ದಗಳು ಭಾವನೆಗೆ ಸಮನಾಗಿರಬೇಕು. ಅಂದಾಗ ಮಾತ್ರ ಸಾಹಿತ್ಯದ ನೈಜತೆಯನ್ನು ಅರಿಯಬೇಕುʼ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಿರಿಯ ಸಾಹಿತಿ ಎಸ್.ಎಮ್.ಜನವಾಡಕರ್ ಅವರು ಮಾತನಾಡಿ, ʼಪರಕೀಯರ ದಾಸ್ಯದಿಂದ ಪಾರುಮಾಡಲು ಕಾವ್ಯ, ನಾಟಕ, ಕಾದಂಬರಿ ಸೇರಿದಂತೆ ದಾರ್ಶನಿಕರ ವಚನಗಳು, ಕೀರ್ತನೆಗಳು, ಕೃತಿಗಳು ಪ್ರೇರಣೆಯಾಗಿವೆ. ವಿದ್ಯಾರ್ಥಿಗಳು ಮೊಬೈಲ್ ತೊರೆದು ಪುಸ್ತಕ ಹಿಡಿದರೆ ಹೆಚ್ಚಿನ ಜ್ಞಾನ ಸಂಪಾದಿಸಲು ಸಾಧ್ಯʼ ಎಂದು ಹೇಳಿದರು.

ಚಕೋರ ಸಾಹಿತ್ಯ ವಿಚಾರ ವೇದಿಕೆಯ ಜಿಲ್ಲಾ ಸಂಚಾಲಕಿ ಡಾ. ಮಕ್ತುಂಬಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ʼಗಡಿಭಾಗದಲ್ಲಿ ಅನ್ಯ ಭಾಷೆಗಳ ಮಧ್ಯೆ ಕನ್ನಡವನ್ನು ಎತ್ತಿ ಹಿಡಿಯಬೇಕಾಗಿದೆ. ಕನ್ನಡವು ನಮ್ಮ ತವರು ಭಾಷೆಯಾಗಿದ್ದು, ಬೇರೆ ಭಾಷೆಯ ಪ್ರಭಾವಕ್ಕೆ ಒಳಗಾಗದಂತೆ ನೋಡಿಕೊಳ್ಳುಬೇಕಾಗಿದೆʼ ಎಂದು ಹೇಳಿದರು.

ಯುವ ಸಾಹಿತಿ ಡಾ.ಸಂಗಪ್ಪ ತೌಡಿ ಮಾತನಾಡಿ, ʼಸ್ವಾತಂತ್ರ ಚಳುವಳಿಗೆ ದ.ರಾ.ಬೇಂದ್ರೆ, ಡಿ.ಎಸ್.ಕರ್ಕಿ, ಹುಯಿಲಗೊಳ್ ನಾರಾಯಣಪ್ಪ ಮುಂತಾದ ಕನ್ನಡ ಸಾಹಿತಿಗಳ ಲೇಖನ, ಬರಹಗಳ ಕೊಡುಗೆ ಅಪಾರವಾಗಿದೆʼ ಎಂದರು.

ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಪ್ರಾದೇಶಿಕ ಕೇಂದ್ರ ನಿರ್ದೇಶಕ ಪ್ರೊ.ಆರ್.ವಿ.ಗಂಗಶೆಟ್ಟಿ, ಕಾಲೇಜಿನ ಪ್ರಾಚಾರ್ಯರಾದ ನಾಗಪ್ಪ ಜಾನಕನೋರ ಮಾತನಾಡಿದರು.

ಇದನ್ನೂ ಓದಿ : ಬೀದರ್‌ | ಬಸವಲಿಂಗ ಪಟ್ಟದ್ದೇವರದ್ದು ಬಸವಮಯ ಬದುಕು : ನಿವೃತ್ತ ನ್ಯಾ. ಶಿವರಾಜ ಪಾಟೀಲ್

ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ನಟರಾಜ, ರಾಜಶೇಖರ, ನೆಹರು ಪವಾರ, ಬಸವರಾಜ ಬಿರಾದಾರ ಮಂಗಲ, ರಾಜಮ್ಮ ನೇಳಗೆ, ಅರ್ಚನಾ, ಸಪ್ನಾ, ವಿಜಯಲಕ್ಷ್ಮಿ ಹಾಗೂ ಸಿಬ್ಬಂದಿಗಳಾದ ಆಕಾಶ, ಶೋಭಾ ಮತ್ತಿತರರು ಇದ್ದರು. ಉಪನ್ಯಾಸಕಿ ರಾಖಿ ಕಾಡಗೆ ನಿರೂಪಿಸಿದರು. ಈಶ್ವರ ರೆಡ್ಡಿ ಸ್ವಾಗತಿಸಿದರು, ಶ್ರೀಲತಾ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...