ಬೀದರ್| ರಸ್ತೆ ಸುರಕ್ಷತಾ ಜಾಗೃತಿಗಾಗಿ ಓಟ ಆಯೋಜನೆ : ಎಸ್‌ಪಿ ಚನ್ನಬಸವಣ್ಣ

Date:

  • ಅಗಸ್ಟ್‌ 27 ರಂದು ರಸ್ತೆ ಸುರಕ್ಷತಾ ಜಾಗೃತಿ ಓಟ ಆಯೋಜನೆ
  • ರಸ್ತೆ ಸುರಕ್ಷತಾ ಜಾಗೃತಿ ಓಟದಲ್ಲಿ ಭಾಗವಹಿಸುವಂತೆ ಎಸ್ಪಿ ಕರೆ

ಬೀದರ್ ಜಿಲ್ಲೆಯ ಸಾರ್ವಜನಿಕರಿಗೆ ರಸ್ತೆ ಸುರಕ್ಷತೆಯ ಅರಿವು ಮೂಡಿಸುವ ಉದ್ದೇಶದಿಂದ ಜಿಲ್ಲೆಯ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಅಗಸ್ಟ್‌ 27 ರಂದು ರಸ್ತೆ ಸುರಕ್ಷತಾ ಜಾಗೃತಿ ಓಟವನ್ನು ಆಯೋಜಿಸಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರೀಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್ ಹೇಳಿದರು.

ಬೀದರ್ ಜಿಲ್ಲಾ ಪೊಲೀಸ್ ವರೀಷ್ಠಾಧಿಕಾರಿಗಳ ಕಛೇರಿ ಆವರಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಅವರು ಮಾತನಾಡಿದರು.
“ಬೀದರ್ ಜಿಲ್ಲೆಯಲ್ಲಿ 2022ನೇ ಸಾಲಿನಲ್ಲಿ 332 ಹಾಗೂ 2023ನೇ ಸಾಲಿನಲ್ಲಿ 201 ಮಂದಿ ರಸ್ತೆ ಅಪಘಾತದಲ್ಲಿ ಸಾವನಪ್ಪಿದ್ದಾರೆ. ಅವರಲ್ಲಿ ಹೆಚ್ಚಿನವರು ಹೆಲ್ಮೆಟ್ ಹಾಗೂ ಸೀಟ್ ಬೆಲ್ಟ್ ಹಾಕದೆ ಇರುವುದೇ ಮುಖ್ಯ ಕಾರಣ ಎಂದು ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ರಸ್ತೆ ಸುರಕ್ಷತಾ ಜಾಗೃತಿ ಓಟದ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲು ನಿರ್ಧರಿಸಲಾಗಿದೆ” ಎಂದರು.

“ರಸ್ತೆ ಸುರಕ್ಷತಾ ಜಾಗೃತಿ ಓಟವು ಅಗಸ್ಟ್‌ 27 ರಂದು ಬೆಳಿಗ್ಗೆ 5 ಗಂಟೆಗೆ ಬೀದರ್‌ನ ಐತಿಹಾಸಿಕ ಕೋಟೆಯಿಂದ ಪ್ರಾರಂಭವಾಗಿ ನಗರದ ಪ್ರಮುಖ ಬೀದಿಗಳಿಂದ ಸಾಗಲಿದೆ. ಮತ್ತೆ ಕೋಟೆಗೆ ಬಂದು ಸೇರಲಿದೆ. ಓಟದಲ್ಲಿ 10 ಕಿ.ಮೀ., 5 ಕಿ.ಮೀ., ಹಾಗೂ 2.5 ಕಿ.ಮೀಟರ್‌ನ ಮೂರು ವಿಭಾಗಗಳಾಗಿ ವಿಂಗಡಿಸಲಾಗಿದೆ. ಈ ಓಟದಲ್ಲಿ ಭಾಗವಹಿಸಲು ಇಚ್ಚಿಸುವವರು ಕ್ಯೂ.ಆರ್ ಕೋಡ್ ಸ್ಕಾನ್ ಮಾಡಿ ನಿಗದಿತ ಮಾಹಿತಿಗಳಾದ ಟಿ-ಶರ್ಟ್ ಸೈಜ್, ಆರೋಗ್ಯದ ಗುಣಮಟ್ಟ ಸೇರಿದಂತೆ ವಿವಿಧ ಮಾಹಿತಿ ನೀಡಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಕ್ಯೂ..ಆರ್ ಕೋಡ್‌ಗಳನ್ನು ನಗರದ ಪ್ರಮುಖ 10 ಸಾರ್ವಜನಿಕರ ಸ್ಥಗಳಲ್ಲಿ ಅಳವಡಿಸಲಾಗುವುದು” ಎಂದು ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ಓಟದಲ್ಲಿ ಶಾಲಾ-ಕಾಲೇಜಿನ ಮಕ್ಕಳು, ಎನ್‌ಎನ್‌ಸಿಕೆಡೇಟ್‌ಗಳು, ಸಂಘ ಸಂಸ್ಥೆಗಳ ಸದಸ್ಯರು, ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಸೇರಿ ಒಟ್ಟು 3,000 ಸಾವಿರ ಮಂದಿ ಭಾಗವಹಿಸಲಿದ್ದಾರೆ. ಓಟದಲ್ಲಿ ಭಾಗವಹಿಸಲು ನೋಂದಣಿ ಮಾಡದವರಿಗೆ ಅಗಸ್ಟ್ 26 ರಂದು ಮಂಗಲ್ ಪೇಟ್‌ದಲ್ಲಿರುವ ಪೊಲೀಸ್ ಕಲ್ಯಾಣ ಮಂಟಪದಲ್ಲಿ ಟಿ-ಶರ್ಟ್ ಹಾಗೂ ಕ್ಯಾಪ್ ವಿತರಿಸಲಾಗುವುದು. ಓಟವನ್ನು ಮೊದಲು ಮುಗಿಸುವ ಮೂರು ಜನರಿಗೆ ವಿಶೇಷ ಮೆಡಲ್ ಪ್ರಧಾನ ಮಾಡಲಾಗುವುದು. ಈ ಓಟದಲ್ಲಿ ಮಾಧ್ಯಮದವರು ಸಹ ಭಾಗವಹಿಸಬೇಕು” ಎಂದು ಅವರು ಕೋರಿದರು.

ಈ ಸುದ್ದಿ ಓದಿದ್ದೀರಾ? ಬೀದರ್ | ರಾಜ್ಯದ ಅತಿ ಎತ್ತರದ ವ್ಯಕ್ತಿಗೆ ಬೇಕಿದೆ ಸಹಾಯಹಸ್ತ

“ಓಟದ ಭಾಗವಹಿಸುವವರಿಗೆ ಟೀ-ಶರ್ಟ್, ಕ್ಯಾಪ್, ಮೆಡಲ್, ಟಿಫೀನ್ ವ್ಯವಸ್ಥೆಗೆ ಜಿಲ್ಲೆಯ ಸಂಘ-ಸಂಸ್ಥೆಗಳ ಮುಖ್ಯಸ್ಥರು ಸಹಕಾರ ನೀಡುತ್ತಿದ್ದಾರೆ. ಆದರಿಂದ, ಬೀದರ್ ಜನರು ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಿ ಹಾಗೂ ರಸ್ತೆ ಸುರಕ್ಷತಾ ಜಾಗೃತಿ ಓಟದಲ್ಲಿ ಭಾಗವಹಿಸಬೇಕು” ಎಂದು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಮಹೇಶ ಮೇಘಣ್ಣನವರ, ಪೊಲೀಸ್ ನಿರೀಕ್ಷಕ ವೆಂಕಟೇಶ ಕೆ ಯಡಹಳ್ಳಿ, ಸಿಪಿಐ ಮಲ್ಲಿಕಾರ್ಜುನ ಯಾತನೂರ, ಪಿಎಸ್‌ಐ ತಸ್ಲೀಂ ಸುಲ್ತಾನಾ, ಪೋಲಿಸ ಇಲಾಖೆಯ ಇತರೆ ಅಧಿಕಾರಿ ಸಿಬ್ಬಂದಿಗಳು ಸೇರಿದಂತೆ ಬೀದರ ಜಿಲ್ಲೆ ವಿವಿಧ ಸಂಘ-ಸAಸ್ಥೆಗಳ ಮುಖ್ಯಸ್ಥರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...