ದನ ಮೇಯಿಸಲು ಜಮೀನಿಗೆ ತೆರಳಿದ ಇಬ್ಬರು ಬಾಲಕರು ಹೊಂಡದಲ್ಲಿ ಈಜಲು ಹೋದ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟ ಹೃದಯವಿದ್ರಾವಕ ಘಟನೆ ಬಸವಕಲ್ಯಾಣ ತಾಲೂಕಿನ ರಾಂಪೂರವಾಡಿ ಗ್ರಾಮದಲ್ಲಿ ಭಾನುವಾರ ಮಧ್ಯಾಹ್ನ ನಡೆದಿದೆ.
ರಾಂಪೂರವಾಡಿ ಗ್ರಾಮದ ಮೈಲಾರಿ ದೊಡ್ಮನಿ (10) ಹಾಗೂ ಶರಣಪ್ಪ ಹಾಳಗೋರ್ಟೆ (10) ಮೃತ ಬಾಲಕರು ಎಂದು ತಿಳಿದು ಬಂದಿದೆ.
ಹೊಂಡದಲ್ಲಿ ಈಜಾಡಲು ಹೋದಾಗ ಕೆಸರಿನಲ್ಲಿ ಸಿಲುಕಿ ಮೇಲೆ ಬರಲಾಗದೆ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದ್ದು, ಸ್ಥಳಕ್ಕೆ ಬಸವಕಲ್ಯಾಣ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಪ್ರಕರಣ ದಾಖಲಾಗಿದೆ.

ಹುಮನಬಾದ್ ಶಾಸಕ ಡಾ.ಸಿದ್ದಲಿಂಗ ಪಾಟೀಲ್ ಅವರು ರಾಜೇಶ್ವರ್ ಪಟ್ಟಣದ ಸರಕಾರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಮೃತ ಬಾಲಕರ ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿದರು. ಸರ್ಕಾರದ ಕಲ್ಪಿಸಲಾಗುವುದು ಭರವಸೆ ನೀಡಿದ ಅವರು, ಇಂತಹ ಘಟನೆಗಳನ್ನು ಮರುಕಳಿಸದಂತೆ ವಿವಿಧ ಗ್ರಾಮಗಳಲ್ಲಿರುವ ತೆರದ ಬಾವಿಗಳ ಬಗ್ಗೆ ಎಚ್ಚರವಹಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.





