ಬೀದರ್ ತಾಲೂಕಿನ ಬೆನಕನಳ್ಳಿ ಹತ್ತಿರ ಬೀದರ-ವಡಗಾಂವ(ದೇ) ರಸ್ತೆಯಲ್ಲಿ ಶನಿವಾರ ಸಂಜೆ ಎರಡು ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟು, ಮೂವರು ಗಾಯಗೊಂಡಿದ್ದಾರೆ.
ಭಾಲ್ಕಿ ತಾಲೂಕಿನ ಜೋಳದಾಪಕಾ ಗ್ರಾಮದ ಮಲ್ಲಿಕಾರ್ಜುನ ಚಂದ್ರಕಾಂತ (40), ಹಾಗೂ ಔರಾದ್ ತಾಲೂಕಿನ ಬೆಲ್ದಾಳ ಗ್ರಾಮದ ಪವನ ಚಂದ್ರಪ್ಪ ವಗ್ಗೆ (30) ಮೃತರು ಎಂದು ಗುರುತಿಸಲಾಗಿದೆ. ಮೃತ ಮಲ್ಲಿಕಾರ್ಜುನ ಅವರ ಪತ್ನಿ, ಅತ್ತೆ ಹಾಗೂ ಮಗು ಅವರು ಗಂಭೀರ ಗಾಯಗೊಂಡಿದ್ದು, ಅವರನ್ನು ಬ್ರಿಮ್ಸೆ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತ ಪವನ ವಗ್ಗೆ ಅವರು ಸ್ನೇಹಿತನೊಂದಿಗೆ ಬೈಕ್ ಮೇಲೆ ಗ್ರಾಮದಿಂದ ಬೀದರ್ ಕಡೆ ತೆರಳುತ್ತಿದ್ದರು. ಮೃತ ಮಲ್ಲಿಕಾರ್ಜುನ ಅವರು ಬೈಕ್ ಕುಟುಂಬದೊಂದಿಗೆ ಬೀದರ್ದಿಂದ ಔರಾದ್ ತಾಲೂಕಿನ ಖಾನಾಪುರ ಗ್ರಾಮದ ಕಡೆ ಹೋಗುತ್ತಿದ್ದರು. ಈ ನಡುವೆ ಮುಖಾಮುಖಿ ಡಿಕ್ಕಿಯಾಗಿ ದುರ್ಘಟನೆ ಸಂಭವಿಸಿದೆ.
ಜನವಾಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಇದನ್ನೂ ಓದಿ : ಬೀದರ್ | ಬೆಳೆ ಹಾನಿ ಪರಿಹಾರ ಶೀಘ್ರ ಬಿಡುಗಡೆ ಮಾಡಿ : ಶಾಸಕ ಶೈಲೇಂದ್ರ ಬೆಲ್ದಾಳೆ





