ಬೀದರ್ ವಿಶ್ವವಿದ್ಯಾಲಯ, ಬ್ರಿಡ್ಜ್‌ ವಾಟರ್‌ ಸ್ಟೇಟ್ ವಿ.ವಿ. ನಡುವೆ ಒಪ್ಪಂದ

Date:

ಬೀದರ್ ವಿಶ್ವವಿದ್ಯಾಲಯ ಕುಲಪತಿ ಪ್ರೊ. ಬಿ.ಎಸ್.ಬಿರಾದಾರ ಅವರು ಅಮೇರಿಕಾದ ಬ್ರಿಡ್ಜ್ ವಾಟರ್ ಸ್ಟೇಟ್ ವಿಶ್ವವಿದ್ಯಾಲಯದ ಅಧ್ಯಕ್ಷ ಡಾ.ಫ್ರೆಡ್ರಿಕ್ ಕ್ಲಾರ್ಕ್ ಅವರೊಂದಿಗೆ ಬೆಂಗಳೂರಿನಲ್ಲಿ ಹಲವಾರು ಶೈಕ್ಷಣಿಕ ಸಹಕಾರಿ ಕ್ಷೇತ್ರದ ಒಪ್ಪಂದಕ್ಕೆ ಸಹಿ ಹಾಕಿ ಪರಸ್ಪರ ವಿನಿಮಯ ಮಾಡಿಕೊಂಡಿದ್ದಾರೆ.

ʼಬೀದರ ವಿಶ್ವವಿದ್ಯಾಲಯ ಹಾಗೂ ಅಮೇರಿಕಾದ ಬ್ರ್ರಿಡ್ಜ್ ವಾಟರ್ ವಿಶ್ವವಿದ್ಯಾಲಯಗಳ ಈ ಐತಿಹಾಸಿಕ ಒಪ್ಪಂದದಿಂದಾಗಿ ಉಭಯ ವಿಶ್ವವಿದ್ಯಾಲಯಗಳ ಶಿಕ್ಷಣ, ಸಂಶೋಧನೆ, ಅಭಿವೃದ್ಧಿ ಕ್ಷೇತ್ರಗಳಲ್ಲಿ ವಿನೂತನ ಯುಗ ಆರಂಭವಾಗುತ್ತದೆ ಎನ್ನಲಾಗಿದೆ. ಪರಸ್ಪರ ತಂತ್ರಜ್ಞಾನದ ವಿಚಾರ ವಿನಿಮಯ, ಜಂಟಿಯಾಗಿ ಪದವಿ ಕಾರ್ಯಕ್ರಮಗಳ ವಿನಿಮಯಗಳಿಗೆ ಅನುಕೂಲವಾಗುತ್ತದೆʼ ಎಂದರು.

ʼಉಭಯ ವಿಶ್ವವಿದ್ಯಾಲಯಗಳ ಅಧ್ಯಾಪಕರ ವಿನಿಮಯದಿಂದ ಸಂಶೋಧನೆ ಮತ್ತು ಅಭಿವೃದ್ಧಿ ಚಟುವಟಿಕೆಗಳಿಗೆ ಹೊಸ ಆಯಾಮ ದೊರೆಯಲಿದೆ. ವಿದ್ಯಾರ್ಥಿಗಳಿಗೆ ಆಧುನಿಕ ಶೈಲಿಯ ಕೃತಕ ಬುದ್ಧಿಮತ್ತೆ (ಎಐ)ಯಂತಹ ಕ್ಷೇತ್ರಗಳಲ್ಲಿ ದಾಪುಗಾಲಿಡಲು ಪೂರಕವಾಗುತ್ತದೆ. ಈ ಐತಿಹಾಸಿಕ ಒಪ್ಪಂದದಿಂದಾಗಿ ಶೈಕ್ಷಣಿಕ, ಸಾಂಸ್ಕೃತಿಕ, ಸಂಶೋಧನೆ, ಅಭಿವೃದ್ಧಿ ಕ್ಷೇತ್ರಗಳಲ್ಲಿ ಮಹತ್ವದ ಮೈಲುಗಲ್ಲಾಗಲಿದೆ. ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಈ ಎರಡೂ ವಿಶ್ವವಿದ್ಯಾಲಯಗಳ ಒಪ್ಪಂದ ಇಂದಿನ ಆಧುನಿಕ, ತಂತ್ರಜ್ಞಾನದ, ವೇಗದ ಯುಗದಲ್ಲಿ ತುಂಬಾ ಮಹತ್ವದ್ದಾಗಿದೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼನೂತನ ಬೀದರ ವಿಶ್ವವಿದ್ಯಾಲಯವು ಈಗಾಗಲೇ ಅನೇಕ ಶೈಕ್ಷಣಿಕ ಹಾಗೂ ಕೌಶಲ್ಯ ಕೇಂದ್ರಗಳೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಅವುಗಳಲ್ಲಿ ಕೇಂದ್ರ ಸರ್ಕಾರದ ತಂತ್ರಜ್ಞಾನ ಕೌಶಲ್ಯದ ಸೀಪೆಟ್ ಹಾಗೂ ತಂಜಾವೂರಿನ ನಿಫ್ಟೆಮ್ ಉದ್ಯಮಶೀಲತಾ ಕೇಂದ್ರಗಳೊಂದಿಗೆ ಮಹತ್ವದ ಒಪ್ಪಂದಗಳಾಗಿವೆ. ಪ್ರಸ್ತುತ ಅಮೇರಿಕಾದ ಬ್ರಿಡ್ಜ್ ವಾಟರ್ ಸ್ಟೇಟ್ ವಿಶ್ವವಿದ್ಯಾಲಯದೊಂದಿಗೆ ಬೀದರ ವಿ.ವಿ. ಶೈಕ್ಷಣಿಕ ಕ್ಷೇತ್ರದ ಒಪ್ಪಂದ ತುಂಬಾ ಅವಿಸ್ಮರಣೀಯʼ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಬಿಎಸ್‍ಯುನ ಉಪಾಧ್ಯಕ್ಷರಾದ ಡಾ.ಉಮಾ ಶರ್ಮಾ, ಡಾ.ಜಬ್ಬಾರ ಹಾಗೂ ವಿವಿಧ ವಿಶ್ವವಿದ್ಯಾಲಯಗಳ ಕುಲಪತಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...