ಬೀದರ್‌ ವಿಶ್ವವಿದ್ಯಾಲಯ : ಸ್ನಾತಕೋತ್ತರ ಪದವಿ ಫಲಿತಾಂಶ ಘೋಷಣೆ

Date:

ಬೀದರ ವಿಶ್ವವಿದ್ಯಾಲಯವು 19 ಸ್ನಾತಕೋತ್ತರ (ಪಿಜಿ) ಕೋರ್ಸ್‌ಗಳ ಪ್ರಥಮ ಸೆಮಿಸ್ಟರ್‌ ಫಲಿತಾಂಶವನ್ನು ಅ.4ರಂದು ಘೋಷಿಸಿದೆ.

ಬೀದರ್‌ ವಿಶ್ವವಿದ್ಯಾಲಯ ಕುಲಪತಿ ಪ್ರೊ.ಬಿ.ಎಸ್.ಬಿರಾದಾರ್ ಅವರು ಶುಕ್ರವಾರ ಸಂಜೆ 4 ಗಂಟೆಗೆ ಫಲಿತಾಂಶ ಘೋಷಿಸಿ ಮಾತನಾಡಿ, ʼಸ್ನಾತಕೋತ್ತರ ಪ್ರಥಮ ಸೆಮಿಸ್ಟರ್‌ನ ಚೊಚ್ಚಲ ಫಲಿತಾಂಶ ಘೋಷಿಸುತ್ತಿರುವುದಕ್ಕೆ ಅತ್ಯಂತ ಸಂತೋಷವಾಗಿದೆ. ಇದಕ್ಕಾಗಿ ಶ್ರಮಿಸಿದ ವಿಶ್ವವಿದ್ಯಾಲಯದ ಸಮಸ್ತ ಅಧ್ಯಾಪಕ, ಅಧ್ಯಾಪಕೇತರ ಸಿಬ್ಬಂದಿಯನ್ನು ಅಭಿನಂದಿಸುತ್ತೇನೆʼ ಎಂದರು.

ʼಅತ್ಯಂತ ಕಡಿಮೆ ಅವಧಿಯಲ್ಲಿ ಫಲಿತಾಂಶ ಪ್ರಕಟಿಸಲು ಎಲ್ಲರೂ ಅವಿರತವಾಗಿ ಶ್ರಮಿಸಿದ್ದಾರೆ. ಈ ಭಾಗದ ನೂತನ ವಿಶ್ವವಿದ್ಯಾಲಯದ ಶ್ರೇಯಸ್ಸಿನಲ್ಲಿ ಹೀಗೆಯೇ ಎಲ್ಲರ ಸಹಕಾರವನ್ನು ವಿಶ್ವವಿದ್ಯಾಲಯ ಬಯಸುತ್ತದೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವ ಪ್ರೊ.ಪರಮೇಶ್ವರ ನಾಯ್ಕ್ ಮಾತನಾಡಿ, ʼ19 ಸ್ನಾತಕೋತ್ತರ ಕೋರ್ಸ್‌ಗಳ ಫಲಿತಾಂಶವನ್ನು ಏಕಕಾಲಕ್ಕೆ ಪ್ರಕಟಿಸಿ ವಿಶ್ವವಿದ್ಯಾಲಯ ತನ್ನ ಕ್ರಿಯಾಶೀಲತೆ ತೋರಿದೆ. ಈ ಫಲಿತಾಂಶವು ವಿದ್ಯಾರ್ಥಿಗಳಿಗೆ ಹಾಗೂ ಈ ಭಾಗದ ಸರ್ವರಿಗೂ ಸಂತಸ ತಂದಿದೆʼ ಎಂದು ಸಿಹಿ ಹಂಚಿ ಸಂಭ್ರಮಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಸ್ಮಶಾನದ ಬಳಿ ಆಸ್ಪತ್ರೆ : ಮಗುವಿಗೆ ಕೇಡಾಗುತ್ತೆ ಎಂಬ ಕಾರಣಕ್ಕೆ ಹೆರಿಗೆಗೆ ಬಾರದ ಗರ್ಭಿಣಿಯರು!

ಬೀದರ ವಿಶ್ವವಿದ್ಯಾಲಯದ ಕುಲಸಚಿವ (ಆಡಳಿತ) ಡಾ.ರವೀಂದ್ರನಾಥ.ವಿ.ಗಬಾಡಿ, ಅಧ್ಯಾಪಕರಾದ ಡಾ.ಚನ್ನಕೇಶವ ಮೂರ್ತಿ, ಡಾ.ನಾಗೇಶ ಸಾವಳೆ, ಶ್ರೀಪವನ್ ಕಾಂಬಳೆ, ಡಾ.ರಾಮಚಂದ್ರ ಗಣಾಪೂರ, ಶಿವರಾಜ ಪಾಟೀಲ್‌ ಹಾಗೂ ಸಿಬ್ಬಂದಿ ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...