ಬೀದರ್ ವಿಶ್ವವಿದ್ಯಾಲಯಕ್ಕೆ ಸಾಂಸ್ಕೃತಿಕ ನಾಯಕ ಬಸವಣ್ಣನವರ ಹೆಸರಿಡಿ : ಶಿವಯ್ಯ ಸ್ವಾಮಿ

Date:

ಬೀದರ್ ವಿಶ್ವವಿದ್ಯಾಲಯಕ್ಕೆ ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣನವರ ಹೆಸರಿಟ್ಟು, ವಿಸ್ತರಣಾ ಘಟಕ, ವಿಶೇಷ ಕೇಂದ್ರ ಹಾಗೂ ಮೂಲಸೌಕರ್ಯಕ್ಕಾಗಿ ವಿಶ್ವವಿದ್ಯಾಲಯಕ್ಕೆ 100 ಕೋಟಿ ರೂಪಾಯಿ ಅನುದಾನ ಬಿಡುಗಡೆ ಸೇರಿದಂತೆ ರಾಜ್ಯ ಸರ್ಕಾರಕ್ಕೆ 26 ಪ್ರಸ್ತಾವನೆಯನ್ನು ದಿಶಾ ಸಮಿತಿ ಸದಸ್ಯ ಶಿವಯ್ಯಾ ಸ್ವಾಮಿ ರಾಜ್ಯ ಸರ್ಕಾರಕ್ಕೆ ಸಲ್ಲಿಸಿದ್ದಾರೆ.

ಬೆಂಗಳೂರಿನಲ್ಲಿ ಬುಧವಾರ ನಡೆದ ಕೇಂದ್ರ ಸರ್ಕಾರದ ರಾಜ್ಯ ಅಭಿವೃದ್ಧಿ, ಸಮನ್ವಯ ಹಾಗೂ ಮೇಲುಸ್ತುವಾರಿ ಸಮಿತಿಯ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರಸ್ತಾವಗಳ ಮನವಿ ಪತ್ರ ಸಲ್ಲಿಸಿದರು.

‘ಕಾರಂಜಾ ನೀರಾವರಿ ಯೋಜನೆಯ ಸಂತ್ರಸ್ತರಿಗೆ ಕೂಡಲೇ ವೈಜ್ಞಾನಿಕ ಪರಿಹಾರ ಕಲ್ಪಿಸಬೇಕು. ಜಿಲ್ಲೆಯ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಪೂರೈಸಿದ ರೈತರ ಬಾಕಿ ಹಣ ಪಾವತಿಸಬೇಕು. ಕಾರ್ಖಾನೆಗಳಿಗೆ ಮೂಲಸೌಕರ್ಯಕ್ಕೆ ಅನುದಾನ ಕಲ್ಪಿಸಬೇಕು. ಕರ್ನಾಟಕ ಪಶು ವೈದ್ಯಕೀಯ ವಿಶ್ವವಿದ್ಯಾಲಯ ರಾಯಚೂರಿನ ಕೃಷಿ ವಿಶ್ವವಿದ್ಯಾಲಯದಲ್ಲಿ ವಿಲೀನಗೊಳಿಸಬಾರದು’ ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯ, ಕೇಂದ್ರ ಸರ್ಕಾರದಿಂದ ಜಗದ್ಗುರು ಪಂಚಾಚಾರ್ಯ ಯುಗಮಾನೋತ್ಸವ ಆಚರಿಸಬೇಕು. ಬೀದರನಲ್ಲಿ ಬಿದ್ರಿ ಕಲೆ ಅಭಿವೃದ್ಧಿ ಕ್ಲಸ್ಟರ್, ಟೆಕ್ಸ್‍ಟೈಲ್ ಪಾರ್ಕ್ ಸ್ಥಾಪಿಸಬೇಕು. ಕೊಳಾರ ಕೈಗಾರಿಕಾ ಪ್ರದೇಶದಲ್ಲಿ ಮುಚ್ಚಿರುವ ಕಾರ್ಖಾನೆಗಳನ್ನು ಪುನಾರಂಭಿಸಬೇಕು. ಹೊಸ ಉದ್ಯಮ ಸ್ಥಾಪಿಸುವವರಿಗೆ ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.

‘ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ದಿಸೆಯಲ್ಲಿ ಜಿಲ್ಲೆಯ ಐತಿಹಾಸಿಕ ಸ್ಮಾರಕ, ದೇವಸ್ಥಾನಗಳ ಅಭಿವೃದ್ಧಿಗೆ ಅನುದಾನ ಕಲ್ಪಿಸಬೇಕು. ಕೇಂದ್ರಕ್ಕೂ ವಿಶೇಷ ಪ್ರಸ್ತಾವ ಸಲ್ಲಿಸಬೇಕು. ಉಡಾನ್ ಯೋಜನೆಯಡಿ ಬೆಂಗಳೂರಿಗೆ ರಾತ್ರಿ ವೇಳೆಯೂ ವಿಮಾನಯಾನ ಸೌಕರ್ಯ ಒದಗಿಸಬೇಕು. ಹೈದರಾಬಾದ್- ನಿಜಾಮೊದ್ದೀನ್ ಹಾಗೂ ಸಿಂಕದರಾಬಾದ್- ವಾರಾಣಸಿ-ದಾನಾಪುರ ರೈಲುಗಳನ್ನು ಬೀದರ್ ವರೆಗೆ ವಿಸ್ತರಿಸಬೇಕು’ ಎಂದರು.

‘ರಾಷ್ಟ್ರೀಯ, ರಾಜ್ಯ ಹೆದ್ದಾರಿಗಳನ್ನು ಅಭಿವೃದ್ಧಿಪಡಿಸಬೇಕು. ಜಿಲ್ಲೆಯ ಸಮುದಾಯ ಸಂಸ್ಥೆಗಳಿಗೆ 200 ಹೆಚ್ಚುವರಿ ರೇಷನ್ ಅಂಗಡಿಗಳನ್ನು ಮಂಜೂರು ಮಾಡಬೇಕು. ಸ್ಟಾರ್ಟಪ್ ಇಂಡಿಯಾ ಕರ್ನಾಟಕ ಎಲಿವೇಟ್‍ನಲ್ಲಿ ಆಯ್ಕೆಯಾಗಿರುವ ಯುವ ಉದ್ಯಮಿಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಮೆಟಲ್ ಮಾರ್ಕ್ ಲೇಸರ್ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್‍ಗೆ ರೂ. 10 ಕೋಟಿ ಅನುದಾನ ನೀಡಬೇಕು’ ಎಂದು ಒತ್ತಾಯಿಸಿದರು.

ಸಂವಿಧಾನದ 371(ಜೆ) ಕಲಂ ತಿದ್ದುಪಡಿ ಕಾಯ್ದೆ ಅನ್ವಯ ಸರ್ಕಾರದ ವಿವಿಧ ಇಲಾಖೆಗಳ ಖಾಲಿ ಹುದ್ದೆಗಳನ್ನು ಭರ್ತಿಗೊಳಿಸಬೇಕು. ಕಲ್ಯಾಣ ಕರ್ನಾಟಕ ಹಾಗೂ ಉತ್ತರ ಕರ್ನಾಟಕದ ಅಭಿವೃದ್ಧಿಗೆ ವಿಶೇಷ ಗಮನಹರಿಸಬೇಕು. ಸಂವಿಧಾನದ 371(ಜೆ) ತಿದ್ದುಪಡಿ ಕಾಯ್ದೆ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಬೇಕು’ ಎಂದು ತಿಳಿಸಿದರು.

‘ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಯೋಜನೆಗಳ ಮಂಜೂರಾತಿಗಾಗಿ ದೆಹಲಿಗೆ ನಿಯೋಗ ಒಯ್ಯಬೇಕು. ಕೇಂದ್ರದಿಂದ ಬಿಡುಗಡೆಯಾಗುವ ಅನುದಾನ ತ್ವರಿತವಾಗಿ ಬಿಡುಗಡೆ ಆಗುವಂತೆ ನೋಡಿಕೊಳ್ಳಲು ಪ್ರತ್ಯೇಕ ಫಾಲೋ ಅಪ್ ಘಟಕ ರಚಿಸಬೇಕು’ ಎಂದು ಮನವಿಯಲ್ಲಿ ತಿಳಿಸಿದರು.

ಇದನ್ನೂ ಓದಿ : ಬೀದರ್ | ಕರ್ನಾಟಕ ಬೆಳೆ ಸಮೀಕ್ಷೆದಾರರ ಸಂಘ ಅಸ್ತಿತ್ವಕ್ಕೆ : ಜಿಲ್ಲಾಧ್ಯಕ್ಷರಾಗಿ ಮೋಹನ್ ಮಾನೆ ನೇಮಕ

ಮುಖ್ಯಮಂತ್ರಿ ಅವರು ತಮ್ಮ ಪ್ರಸ್ತಾವಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಶಿವಯ್ಯ ಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...