ಬೀದರ್‌ | ಬಗೆಹರಿಯದ ಜಮೀನು ದಾರಿ ಸಮಸ್ಯೆ: ವಿಷದ ಬಾಟಲಿ, ಹಗ್ಗ ಹಿಡಿದು ತಹಸೀಲ್ ಕಚೇರಿಗೆ ಬಂದ ರೈತ

Date:

ತನ್ನ ಜಮೀನಿಗೆ ಹೋಗಲು ದಾರಿ ಮಾಡಿಕೊಡುವಂತೆ ಕಳೆದ ಎರಡು ವರ್ಷದಿಂದ ಕಂದಾಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿಕೊಂಡಿದ್ದರೂ ಸ್ಪಂದಿಸದಕ್ಕೆ ಬೇಸತ್ತ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಕೈಯಲ್ಲಿ ವಿಷದ ಬಾಟಲಿ, ಹಗ್ಗ ಹಿಡಿದು ತಹಸೀಲ್ ಕಚೇರಿಗೆ ಬಂದ ಪ್ರಸಂಗ‌ ಬಸವಕಲ್ಯಾಣ ನಗರದಲ್ಲಿ ಸೋಮವಾರ ನಡೆದಿದೆ.

ಬಸವಕಲ್ಯಾಣ ತಾಲೂಕಿನ ಕೋಹಿನೂರ ಗ್ರಾಮದ ರೈತ ಪ್ರಶಾಂತ ಲಕಮಾಜಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಒಂದು ಕೈಯಲ್ಲಿ ವಿಷದ ಬಾಟಲಿ, ಮತ್ತೊಂದು ಕೈಯಲ್ಲಿ ಹಗ್ಗ ಹಿಡಿದು ಮಿನಿ ವಿಧಾನಸೌಧ ಬಳಿಯ ತಹಶೀಲ್ ಕಚೇರಿಗೆ ಬಂದು ತಹಸೀಲ್ದಾರ್‌ ವಿರುದ್ಧ ಕಿಡಿಕಾರಿದ್ದಾರೆ.

ʼಕಳೆದ ಎರಡು ವರ್ಷಗಳಿಂದ ನಮ್ಮ ಜಮೀನಿಗೆ ಹೋಗಲು ದಾರಿ ಸಮಸ್ಯೆ ಇದೆ. ಹೊಲಗಳಿಗೆ ಹೋಗುವ ದಾರಿಯಲ್ಲಿ ಸರ್ಕಾರಿ ನಾಲಾ ಇದ್ದು, ಅದರಲ್ಲಿ ಅನ್ಯ ಜಮೀನಿನ ರೈತರು ಪೈಪ್‌ ಅಳವಡಿಸಿದ್ದು. ಇದರಿಂದ ಕೃಷಿ ಚಟುವಟಿಕೆಗೆ ನಿತ್ಯ ಜಮೀನಿಗೆ ಹೋಗಲು ತುಂಬಾ ತೊಂದರೆಯಾಗುತ್ತಿದೆ. ಇದನ್ನು ಬಗೆಹರಿಸಿ ನಮ್ಮ ಜಮೀನಿಗೆ ಹೋಗಲು ದಾರಿ ಮಾಡಿಕೊಡುವಂತೆ ಹಲವು ಬಾರಿ ತಹಸೀಲ್ದಾರ್‌ ಕಚೇರಿಗೆ ಅಲೆದಾಡಿದರೂ ತಹಸೀಲ್ದಾರ್‌ ಅವರು ಸ್ಪಂದಿಸದೆ ದಿನದೂಡುತ್ತಿದ್ದಾರೆʼ ಎಂದು ರೈತ ಪ್ರಶಾಂತ ಲಕಮಾಜಿ ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೈತ ಪ್ರಶಾಂತ ಮಾಧ್ಯಮದವರೊಂದಿಗೆ ಮಾತನಾಡಿ, ʼನಮ್ಮ ಜಮೀನಿಗೆ ತೆರಳಲು ದಾರಿ ಮಾಡಿಕೊಡುವಂತೆ ನೂರಾರು ಬಾರಿ ಮನವಿ ಸಲ್ಲಿಸಿದರೂ ತಹಸೀಲ್ದಾರ್‌ ಅವರು ಸ್ಪಂದಿಸದೆ ಕಾಲಹರಣ ಮಾಡುತ್ತಿದ್ದಾರೆ. ತಹಸೀಲ್ದಾರ್‌ ಕಚೇರಿಗೆ ಅಲೆದಾಡಿ ಸಮಸ್ಯೆಗೆ ಪರಿಹಾರ ಸಿಗದಕ್ಕೆ ತುಂಬಾ ನೊಂದಿದ್ದೇನೆ. ತಹಸೀಲ್ದಾರ್ ಎದುರೇ ಆತ್ಮಹತ್ಯೆ ಮಾಡಿಕೊಳ್ಳುವೆ. ಇಲ್ಲದಿದ್ದರೆ ಅವರ ಹೆಸರಿನಲ್ಲಿ ಚೀಟಿ ಬರೆದಿಟ್ಟು ನೇಣಿಗೆ ಶರಣಾಗುವೆʼ ಎಂದು ತಹಸೀಲ್ದಾರ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಬೀದರ್‌ | ರೈತರಿಗೆ ರಸಗೊಬ್ಬರ ಕೊರತೆ : ಜು.30ರಂದು ಜಿಲ್ಲಾದ್ಯಂತ ಬಿಜೆಪಿ ಪ್ರತಿಭಟನೆ

ʼ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...