ಬೀದರ್‌ | ಏ.21,22ರಂದು ಭಾಲ್ಕಿಯಲ್ಲಿ ವಚನ ಜಾತ್ರೆ, ಚನ್ನಬಸವ ಪಟ್ಟದ್ದೇವರ ಸ್ಮರಣೋತ್ಸವ

Date:

ಭಾಲ್ಕಿ ಪಟ್ಟಣದಲ್ಲಿ ಹಿರೇಮಠ ಸಂಸ್ಥಾನದ ವತಿಯಿಂದ ಏ.21 ಮತ್ತು 22 ರಂದು ನಡೆಯಲಿರುವ ವಚನ ಜಾತ್ರೆ-2025, ಶತಾಯಷಿ ಡಾ.ಚನ್ನಬಸವ ಪಟ್ಟದ್ದೇವರ 26ನೆಯ ಸ್ಮರಣೋತ್ಸವ ಸಮಾರಂಭದಲ್ಲಿ ಜಿಲ್ಲೆಯ ಸದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಐತಿಹಾಸಿಕವಾಗಿ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ, ಸ್ವಾಗತ ಸಮಿತಿ ಅಧ್ಯಕ್ಷ ಈಶ್ವರ ಖಂಡ್ರೆ ಮನವಿ ಮಾಡಿದರು.

ಭಾಲ್ಕಿ ಪಟ್ಟಣದ ಹಿರೇಮಠ ಸಂಸ್ಥಾನದಲ್ಲಿ ವಚನ ಜಾತ್ರೆ-2025 ಮತ್ತು ಶತಾಯಷಿ ಡಾ.ಚನ್ನಬಸವ ಪಟ್ಟದ್ದೇವರ 26ನೆಯ ಸ್ಮರಣೋತ್ಸವ ಸಮಾರಂಭದ ಕರಪತ್ರ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ʼಶತಾಯಷಿ ಡಾ.ಚನ್ನಬಸವ ಪಟ್ಟದ್ದೇವರು ತಮ್ಮ ಬದುಕಿನುದ್ದಕ್ಕೂ ಬಸವತತ್ವ ಪ್ರಚಾರ ಪ್ರಸಾರದ ಜತೆಗೆ ಶೈಕ್ಷಣಿಕ, ಸಾಮಾಜಿಕ ಸೇವೆಗೈದು ಈ ಭಾಗಕ್ಕೆ ಅದ್ಭುತ ಕೊಡುಗೆ ನೀಡಿದ್ದಾರೆ. ಡಾ.ಚನ್ನಬಸವ ಪಟ್ಟದ್ದೇವರ ವಿಚಾರಧಾರೆಗಳನ್ನು ಜನಮಾಸಕ್ಕೆ ತಲುಪಿಸುವ ನಿಟ್ಟಿನಲ್ಲಿ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ದಿವ್ಯ ಸಾನ್ನಿಧ್ಯದಲ್ಲಿ ಪ್ರತಿವರ್ಷ ಸ್ಮರಣೋತ್ಸವ, ವಚನ ಜಾತ್ರೆ ಅರ್ಥಪೂರ್ಣವಾಗಿ ಆಚರಿಸಿಕೊಂಡು ಬರಲಾಗುತ್ತಿದೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಈ ವರ್ಷವೂ ಎರಡು ದಿವಸ ಅರ್ಥಪೂರ್ಣವಾಗಿ ವಚನ ಜಾತ್ರೆ, ಸ್ಮರಣೋತ್ಸವ ಆಚರಣೆಗೆ ಯೋಜನೆ ರೂಪಿಸಲಾಗಿದ್ದು, ಕರ್ನಾಟಕದ ರಾಜ್ಯಪಾಲರು ಸೇರಿದಂತೆ ನಾಡಿನ ಮಠಾಧೀಶರು, ರಾಜಕೀಯ ಗಣ್ಯರು ಭಾಗವಹಿಸಲಿದ್ದಾರೆ. ಭರದ ಸಿದ್ಧತೆಗಳು ನಡೆಯುತ್ತಿವೆ. ಜಿಲ್ಲೆಯ ಸದ್ಭಕ್ತರು ಸಹಸ್ರ ಸಂಖ್ಯೆಯಲ್ಲಿ ಭಾಗವಹಿಸಿ ಎರಡು ದಿನದ ಸಮಾರಂಭ ಯಶಸ್ವಿಗೊಳಿಸಬೇಕುʼ ಎಂದು ಮನವಿ ಮಾಡಿದರು.

ಸಾನ್ನಿಧ್ಯ ವಹಿಸಿದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಮಾತನಾಡಿ, ʼಎರಡು ದಿನದ ಸಮಾರಂಭದ ಯಶಸ್ವಿಗೆ ವಿವಿಧ ಕಾರ್ಯಕ್ರಮಗಳು ಆಯೋಜಿಸುತ್ತಿದ್ದೇವೆ. ಪ್ರವಚನ, ವಚನ ಪಾರಾಯಣ, ಸಾಧಕರಿಗೆ ಪ್ರಶಸ್ತಿ ಪ್ರದಾನ, ಅನುಭಾವ ಗೋಷ್ಠಿ ಸೇರಿ ಮುಂತಾದ ಅರ್ಥಪೂರ್ಣ ಕಾರ್ಯಕ್ರಮ ನಡೆಯಲಿದ್ದು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸದುಪಯೋಗ ಪಡೆದು ಕೊಳ್ಳಬೇಕುʼ ಎಂದು ತಿಳಿಸಿದರು.

ʼಗಡಿಭಾಗದಲ್ಲಿ ಶತಾಯಷಿ ಡಾ.ಚನ್ನಬಸವ ಪಟ್ಟದ್ದೇವರು ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರಗಳಲ್ಲಿ ಅದ್ಭುತ ಕ್ರಾಂತಿಯನ್ನು ಮಾಡಿದ್ದಾರೆ. ಪೂಜ್ಯರ ಚಿಂತನೆ, ಆದರ್ಶಗಳನ್ನು ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ದಿವ್ಯ ಸಾನ್ನಿಧ್ಯದಲ್ಲಿ ಜನಮಾನಸಕ್ಕೆ ತಲುಪಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದರು.

ಈ ಸುದ್ದಿ ಓದಿದ್ದೀರಾ? ಬೀದರ್ ಜಿಲ್ಲೆಗೆ ಏ.16ರಂದು ಸಿಎಂ, ಡಿಸಿಎಂ ಪ್ರವಾಸ : ನಾನಾ ಅಭಿವೃದ್ಧಿ ಕಾಮಗಾರಿ ಶಂಕುಸ್ಥಾಪನೆ, ಉದ್ಘಾಟನೆ

ಈ ಸಂದರ್ಭದಲ್ಲಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ, ಸಾಹಿತಿ ಕಲ್ಯಾಣರಾವ ಪಾಟೀಲ್, ಶಶಿಕಾಂತ ದುರ್ಗೆ, ಮುಖ್ಯಗುರು ಬಾಬು ಬೆಲ್ದಾಳ ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...