ಬೀದರ್‌ | ವಲ್ಲಭಭಾಯ್ ಪಟೇಲ್ ರಾಷ್ಟ್ರದ ಏಕತೆಗೆ ಶ್ರಮಿಸಿದ ಧೀಮಂತ : ಸಿಪಿಐ ಅಲಿಸಾಬ್

Date:

ರಾಷ್ಟ್ರದ ಸ್ವಾತಂತ್ರ್ಯೋತ್ಸವದ ಜೊತೆಗೆ ಐಕ್ಯತೆ, ಅಖಂಡತೆ, ಸಮಗ್ರತೆಗಾಗಿ ಶ್ರಮಿಸಿದ ಧೀಮಂತ ಸರ್ದಾರ್ ವಲ್ಲಭಭಾಯ್ ಪಟೇಲ್‌ರು ಎಂದು ಸಿಪಿಐ ಅಲಿಸಾಬ್ ಹೇಳಿದರು.

ಬಸವಕಲ್ಯಾಣದ ಶ್ರೀ ಬಸವೇಶ್ವರ ಪದವಿ ಕಾಲೇಜಿನಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಜನ್ಮದಿನ ಪ್ರಯುಕ್ತ ‘ರಾಷ್ಟ್ರೀಯ ಏಕತಾ ದಿನಾಚರಣೆ’ ವಿಷಯದ ಪ್ರಬಂಧ ಸ್ಪರ್ಧೆ ಮತ್ತು ಬಹುಮಾನ ವಿತರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು ಮಾತನಾಡಿದರು.

ʼಹರಿದು ಹಂಚಿ ಹೋದ ಇಡೀ ದೇಶದ ಏಕತೆಗಾಗಿ ಪಟೇಲ್ ಶ್ರಮಿಸಿದ್ದರು. ವಿದ್ಯಾರ್ಥಿಗಳು ಸ್ವಾತಂತ್ರ್ಯ ಹೋರಾಟಗಾರ ಜೀವನ ಮತ್ತು ಮೌಲ್ಯಗಳನ್ನು ಅರಿವ ಅಗತ್ಯವಿದೆ. ನಮ್ಮ ದೇಶ, ನಮ್ಮ ದೇಶದ ಸಂಸ್ಕೃತಿಕ ಏಕತೆಗಾಗಿ ದುಡಿಯುವ ಅಗತ್ಯವಿದೆ. ಅಪರಾಧ ರಹಿತ ಸಮಾಜ ನಿರ್ಮಾಣಕ್ಕೆ ಯುವಜನತೆ ಮುಂದಾಗಬೇಕು. ಈ ನಾಡಿನ ಭಾಷೆ. ಬಸವಾದಿ ಶರಣರು, ತತ್ವ ಪದಕಾರರು ಸೇರಿ ಹಲವರು ಕನ್ನಡ ಜಗತ್ತು ಕಟ್ಟಿದ್ದಾರೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂಸ್ಥೆಯ ಆಡಳಿತಾಧಿಕಾರಿ ಡಾ.ಮಲ್ಲಿಕಾರ್ಜುನ ಲಕಶೆಟ್ಟೆ ಮಾತನಾಡಿ, ʼಫ್ರೆಂಚ್, ಡಚ್, ಬ್ರಿಟಿಷ್ ಅಧಿಕಾರದಲ್ಲಿ ಹಲವು ಪ್ರಾಂತ್ಯಗಳಲ್ಲಿ ಹರಿದು ಹಂಚಿದ ಭಾರತವನ್ನು ಒಗ್ಗೂಡಿಸುವ ಮೂಲಕ ದೇಶಕ್ಕೆ ಐಕ್ಯತೆ ತಂದು ಕೊಟ್ಟವರು ಸರ್ದಾರ್ ಪಟೇಲರು. ಅದಕ್ಕಾಗಿಯೇ ಅವರ ಜನ್ಮದಿನ ರಾಷ್ಟ್ರೀಯ ಏಕತಾ ದಿವಸವಾಗಿ ಆಚರಿಸಲಾಗುತ್ತದೆʼ ಎಂದರು.

WhatsApp Image 2025 10 30 at 3.03.49 PM

ಶ್ರೀ ಬಸವೇಶ್ವರ ಪದವಿ ಕಾಲೇಜು ಪ್ರಾಚಾರ್ಯ ಡಾ. ಭೀಮಾಶಂಕರ ಬಿರಾದಾರ ಮಾತನಾಡಿ, ʼಭಾಷಿಕ, ಪ್ರಾದೇಶಿಕ, ಸಾಂಸ್ಕೃತಿಕ ವೈವಿಧ್ಯ ಹೊಂದಿರುವ ಭಾರತ ತನ್ನ ಬಹುತ್ವ ಮತ್ತು ತಾತ್ವಿಕ ಬಹುಧಾರೆಗಳ ಮೂಲಕ ಬಹು ಸಾಂಸ್ಕೃತಿಕ ಪರೀಪರೆ ಉಳಿಸಿಕೊಂಡಿದೆ. ಪಟೇಲ್ ಅವರ ರಾಷ್ಟ್ರೀಯತೆ ಬಹುತ್ವದ ಐಕ್ಯತೆಯ ಪ್ರತಿಪಾದನೆಯಲ್ಲಿದೆʼ ಎಂದರು‌ .

ಇದೇ ಸಂದರ್ಭದಲ್ಲಿ ರಾಷ್ಟ್ರೀಯ ಏಕತಾ ದಿನಾಚರಣೆ ಕುರಿತು ಪ್ರಬಂಧ ಸ್ಪರ್ಧೆಯಲ್ಲಿ ಕನ್ನಡ, ಇಂಗ್ಲಿಷ್, ಹಿಂದಿ ಮತ್ತು ಉರ್ದು ಭಾಷೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಸಿಪಿಐ ಅಲಿಸಾಬ್ ಅವರು ಪ್ರಥಮ 500 ರೂ., ದ್ವಿತೀಯ 200 ರೂ. ಮತ್ತು ಶ್ರೀ ಬಸವೇಶ್ವರ ಪದವಿ ಕಾಲೇಜು ವತಿಯಿಂದ ಭಾಗವಹಿಸಿದ ಎಲ್ಲ ವಿದ್ಯಾರ್ಥಿಗಳಿಗೆ ಪುಸ್ತಕ ರೂಪದಲ್ಲಿ ಬಹುಮಾನ ನೀಡಲಾಯಿತು.

ಮಹಾತ್ಮ ಗಾಂಧೀಜಿ, ಡಾ.ಬಿ.ಆರ್. ಅಂಬೇಡ್ಕರ್, ಸ್ವಾಮಿ ವಿವೇಕಾನಂದ, ರವೀಂದ್ರನಾಥ ಠಾಗೋರ್ ಅವರ ಭಾವಚಿತ್ರಗಳನ್ನು ಬಿಎಸ್ಸಿ ಮತ್ತು ಬಿಸಿಎ ವಿದ್ಯಾರ್ಥಿಗಳು ಕಾಲೇಜಿಗೆ ಕೊಡುಗೆಯಾಗಿ ನೀಡಿದರು.

ಇದನ್ನೂ ಓದಿ : ಬೀದರ್‌ | ಅಂತರ ಕಾಲೇಜು ಬ್ಯಾಸ್ಕೆಟ್‍ಬಾಲ್ ಟೂರ್ನಿ : ವಿಜಯಪುರ ಎಸ್‌ಬಿಎಸ್ ಮಹಿಳಾ ಕಾಲೇಜು ಪ್ರಥಮ

ಕಾರ್ಯಕ್ರಮದಲ್ಲಿ ಬಿಡಿಪಿಸಿ ಅಧ್ಯಕ್ಷ ಬಸವರಾಜ ಕೋರಕೆ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ವಿವೇಕಾನಂದ ಹೊದಲೂರೆ, ಶ್ರೀ ಬಸವೇಶ್ವರ ಪಿಜಿ ಕಾಲೇಜು ಪ್ರಾಚಾರ್ಯೆ ಡಾ.ಶಾಂತಲಾ ಪಾಟೀಲ, ಶ್ರೀ ಬಸವೇಶ್ವರ ಪಿಯು ಕಾಲೇಜು ಪ್ರಾಚಾರ್ಯ ಡಾ.ರುದ್ರಮಣಿ ಮಠಪತಿ, ಅಕ್ಕಮಹಾದೇವಿ ಮಹಿಳಾ ಕಾಲೇಜು ಪ್ರಾಚಾರ್ಯೆ ಡಾ.ಮಾಯಾ ಮುರಾಳೆ ಡಾ. ಬಸವರಾಜ ಖಂಡಾಳೆ, ವಿವೇಕಾನಂದ ಶಿಂದೆ, ಅಶೋಕರೆಡ್ಡಿ, ಗುರುದೇವಿ ಕಿಚಡೆ, ಶೀತಲ್ ರೆಡ್ಡಿ, ನಾಗರಾಜ ನಾಸೆ, ಕೃಷ್ಣ ಗೌಳಿ ಮತ್ತಿತರರಿದ್ದರು. ಐಕ್ಯುಎಸಿ ಸಂಯೋಜಕ ಪವನ್ ಪಾಟೀಲ ಸ್ವಾಗತಿಸಿದರು. ಗಂಗಾಧರ ಸಾಲಿಮಠ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...