ಬೀದರ್‌ | ಲಂಚ ಕೇಳಿದ ಆರೋಪ : ಗ್ರಾಮ ಲೆಕ್ಕಿಗ ಅಮಾನತು

Date:

ರೈತರ ಬಳಿ ಹಣ ಕೇಳಿರುವ ಆಡಿಯೋ ಆರೋಪದಡಿ ಔರಾದ್‌ ತಾಲ್ಲೂಕಿನ ವಡಗಾಂವ(ದೇ) ಗ್ರಾಮದ ಗ್ರಾಮ ಲೆಕ್ಕಿಗ ನಾಮದೇವ ಮೇತ್ರೆ ಅವರನ್ನು ಅಮಾನತು ಮಾಡಲಾಗಿದೆ.

ರೈತರ ವಿವಿಧ ರೀತಿಯ ಕಡತಗಳನ್ನು ಮತ್ತು ಜನನ ಪ್ರಮಾಣ ಪತ್ರಗಳ ಪಂಚನಾಮ ವರದಿ ಸಲ್ಲಿಸಲು ವಿಳಂಬ ಮಾಡುತ್ತಿರುವ ಪತ್ರ ಹಾಗೂ ಲಂಚ ಕೇಳಿರುವ ಆಡಿಯೋ ವೈರಲ್‌ ಆದ ಹಿನ್ನೆಲೆ ಶಿಸ್ತು ಪ್ರಾಧಿಕಾರ ಹಾಗೂ ಬೀದರ್‌ ಸಹಾಯಕ ಆಯುಕ್ತ ಎಂ.ಡಿ.ಶಕೀಲ್‌ ಅಮಾನತು ಮಾಡಿ ಆದೇಶಿಸಿದ್ದಾರೆ.

ಸದರಿ ನೌಕರರಿಗೆ ಕಾರಣ ಕೇಳಿ ನೋಟಿಸ್‌ ನೀಡಲಾಗಿತ್ತು. ಲಿಖಿತ ಸಮಜಾಯಿಸಿ ಉತ್ತರ ನೀಡಿದ ನೌಕರ ʼನನ್ನ ಕರ್ತವ್ಯದಲ್ಲಿ ಯಾವುದೇ ವಿಳಂಬ ಮಾಡಿರುವುದಿಲ್ಲ, ಯಾರ ಬಳಿಯೂ ಹಣ ಕೇಳಿಲ್ಲʼ ಎಂದು ಉತ್ತರಿಸಿದರು. ಗ್ರಾಮಸ್ಥರು ನೀಡಿದ ದೂರಿನ್ವಯ ಔರಾದ್‌ ತಹಸೀಲ್ದಾರ್‌ ಅವರು ಸದರಿ ನೌಕರ ವಿರುದ್ಧ ಸಿಸಿಎ ನಿಯಮಾವಳಿ ಪ್ರಕಾರ ಶಿಸ್ತು ಕ್ರಮಕೈಗೊಳ್ಳಲು ಸಲ್ಲಿಸಿದ ಪ್ರಸ್ತಾವನೆ ವರದಿ ಆಧರಿಸಿ ಅಮಾನತು ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕರ್ನಾಟಕ ನಾಗರೀಕ ಸೇವಾ ನಿಯಮಗಳು 1958ರ ನಿಯಮ 98ರ ಅನುಸಾರ ಸದರಿ ಸಿಬ್ಬಂದಿಯವರು ಜೀವನ ಆಧಾರ ಭತ್ಯೆ ಪಡೆಯಲು ಅರ್ಹರಾಗಿರುತ್ತಾರೆ. ಸದರಿ ಸಿಬ್ಬಂದಿಯವರು ಸಕ್ಷಮ ಪ್ರಾಧಿಕಾರದಿಂದ ಅನುಮತಿ ಪಡೆಯದೆ ಕೇಂದ್ರ ಸ್ಥಾನವನ್ನು ಬಿಡತಕ್ಕದ್ದಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.‌

ಇದನ್ನೂ ಓದಿ : ಬೀದರ್‌ | ಬೇಡಿಕೆ ಕಳೆದುಕೊಂಡ ಮಣ್ಣಿನ ಹಣತೆ : ಕುಂಬಾರರ ಬದುಕು ದೀಪದ ಕೆಳಗಿನ ಕತ್ತಲು!

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...