2025-26ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಯೋಜನೆಗಳಾದ ಧನಶ್ರೀ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ, ಚೇತನ ಯೋಜನೆ ಹಾಗೂ ಉದ್ಯೋಗಿನಿ ಯೋಜನೆಗಳಿಗೆ ಸೇವಾ ಸಿಂಧು ಪೋರ್ಟಲ್ನಲ್ಲಿ ಅನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಜಿದಾರರು ಹತ್ತಿರದ ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ಸೇವಾ ಸಿಂಧು ಪೋರ್ಟಲ್ ಪ್ರಸ್ತುತ ಲೈವ್ ಇದ್ದು, ಸಾರ್ವಜನಿಕರು 2025 ಡಿಸೆಂಬರ್ 15ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಧನಶ್ರೀ ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಯೋಜನೆಯಡಿ ಅರ್ಜಿಗಳನ್ನು ಆನ್ಲೈನ್ ಮತ್ತು ಆಫ್ಲೈನ್ ಎರಡರಲ್ಲಿಯೂ ಸಹ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಆಫ್ಲೈನ್ ಅರ್ಜಿ ಸಲ್ಲಿಸುವವರು ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೈಲೂರ ಬೀದರ ಇಲ್ಲಿಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೈಲೂರ ಬೀದರ ಜಿಲ್ಲೆ ಹಾಗೂ ಜಿಲ್ಲಾ ಅಭಿವೃದ್ಧಿ ನಿರೀಕ್ಷಕರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಕಛೇರಿ ಮೈಲೂರ ಬೀದರ ಇವರಿಎ ಸಂಪರ್ಕಿಸಬಹುದಾಗಿದೆ. 2023-24 ಮತ್ತು 2024-25ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ, ಸೌಲಭ್ಯ ಪಡೆಯದೇ ಇರುವವರು ಮತೊಮ್ಮೆ ಅರ್ಜಿ ಸಲ್ಲಿಸುವ ಅವತ್ಯವಿರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ : ಬೀದರ್ | ಸಚಿವದ್ವಯರ ಭೇಟಿ : ಕಬ್ಬಿನ ಬೆಲೆ ನಿಗದಿ ಭರವಸೆ; ಮುಂದುವರೆದ ರೈತರ ಧರಣಿ





