ಬೀದರ್ | ಮಹಿಳೆ ಯಶಸ್ಸಿಗೆ ಪುರುಷ ಬೆನ್ನಲುಬಾಗಲಿ : ಆರತಿ ಪಾಟೀಲ್

Date:

ಮಹಿಳೆಯರ ಯಶಸ್ಸಿಗೆ ಪುರುಷರು ಬೆನ್ನೆಲುಬಾಗಬೇಕಿದೆ ಎಂದು ಕೃಷಿ ಅಧಿಕಾರಿ ಆರತಿ ಪಾಟೀಲ ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಮಹಿಳಾ ಘಟಕದ ವತಿಯಿಂದ ಬೀದರ್ ನಗರದ ಕನ್ನಡ ಭವನದಲ್ಲಿ ಈಚೆಗೆ ನಡೆದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಮಹಿಳೆ ಈಗ ಅಬಲೆಯಲ್ಲ, ಸಬಲೆ. ಪ್ರತಿ ಕ್ಷೇತ್ರಕ್ಕೂ ಕೊಡುಗೆ ನೀಡುತ್ತಿದ್ದಾಳೆ. ಕೃಷಿ ಕ್ಷೇತ್ರವೂ ಇದಕ್ಕೆ ಹೊರತಾಗಿಲ್ಲ’ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಾಹಿತಿ ಜಗದೇವಿ ದುಬಲಗುಂಡೆ ಮಾತನಾಡಿ, ‘ಜಿಲ್ಲೆಯ ಅನೇಕ ಮಹಿಳೆಯರು ಸಾಹಿತ್ಯ ರಚನೆಯಲ್ಲಿ ತೊಡಗಿಸಿಕೊಂಡಿರುವುದು ಉತ್ತಮ ಬೆಳವಣಿಗೆ. ಮಹಿಳೆಯರು ಸಾಹಿತ್ಯ, ಕಲೆ, ಸಂಸ್ಕೃತಿ ಉಳಿವಿಗೆ ಕೊಡುಗೆ ನೀಡಬೇಕು’ ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಕಸಾಪ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ರೂಪಾ ಪಾಟೀಲ ಮಾತನಾಡಿ, ‘ಬಸವಾದಿ ಶರಣರು 12ನೇ ಶತಮಾನದಲ್ಲೇ ಮಹಿಳೆಯರಿಗೆ ಸಮಾನತೆ ಕಲ್ಪಿಸಿದ್ದರು’ ಎಂದರು.

’21ನೇ ಶತಮಾನದಲ್ಲಿ ಮಹಿಳೆಯರು ಸಮಾನತೆಗಾಗಿ ಹೋರಾಟ ನಡೆಸಬೇಕಾದ ಪರಿಸ್ಥಿತಿಯಿದೆ. ಮಹಿಳೆಯರಿಗೆ ಎಲ್ಲ ಕ್ಷೇತ್ರಗಳಲ್ಲಿ ಸಾಧನೆಗೆ ಮುಕ್ತ ಅವಕಾಶ ಕೊಡಬೇಕು’ ಎಂದು ತಿಳಿಸಿದರು.

ಬಸವ ಕಾಯಕ, ದಾಸೋಹ ಫೌಂಡೇಷನ್ ಕಾರ್ಯದರ್ಶಿ ಸುವರ್ಣಾ ಧನ್ನೂರ,ಲಿಂಗಾರತಿ ಅಲ್ಲಮಪ್ರಭು ಮಾತನಾಡಿದರು.

ಈ ಸುದ್ದಿ ಓದಿದ್ದೀರಾ?‌ ಬೀದರ್ | ನ್ಯಾಯಾಧೀಶರ ಮನೆಗೆ ಕನ್ನ ಹಾಕಿದ ಖದೀಮರು; 8 ಲಕ್ಷ ರೂ. ಕಳವು ಮಾಡಿದ

ವಿವಿಧ ಕ್ಷೇತ್ರಗಳ 16 ಸಾಧಕಿಯರಿಗೆ ಸ್ತ್ರೀ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಶಿಲ್ಪಾ ಮಜಗೆ ನಿರೂಪಿಸಿದರು. ಸ್ವರೂಪಾ ನಾಗೂರೆ ಸ್ವಾಗತಿಸಿದರು. ಜ್ಯೋತಿ ಭಾಲ್ಕೆ ವಂದಿಸಿದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...