ಬೀದರ್‌ | ಯೋಗದಿಂದ ಆರೋಗ್ಯ ವೃದ್ಧಿ : ಶಾಸಕ ಪ್ರಭು ಚವ್ಹಾಣ

Date:

ಸರ್ವ ರೋಗಗಳಿಗೂ ಯೋಗದಲ್ಲಿ ಪರಿಹಾರವಿದ್ದು, ಎಲ್ಲರೂ ಪ್ರತಿದಿನ ತಪ್ಪದೇ ಯೋಗಾಭ್ಯಾಸ ಮಾಡುವುದನ್ನು ರೂಢಿಸಿಕೊಳ್ಳಬೇಕು. ಎಲ್ಲ ಶಾಲೆಗಳಲ್ಲಿ ಪ್ರತಿದಿನ ಕನಿಷ್ಠ ಅರ್ಧ ಗಂಟೆ ಯೋಗಾಭ್ಯಾಸ ಮಾಡಿಸಬೇಕೆಂದು ಮಾಜಿ ಸಚಿವ, ಶಾಸಕ ಪ್ರಭು ಬಿ.ಚವ್ಹಾಣ ಹೇಳಿದರು.

ಭಾರತೀಯ ಜನತಾ ಪಾರ್ಟಿ ಔರಾದ(ಬಿ) ಮಂಡಲ ವತಿಯಿಂದ ಜೂನ್ 21ರಂದು ಪಟ್ಟಣದಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ʼಯೋಗ ಕೇವಲ ಶರೀರಕ್ಕೆ ಮಾತ್ರವಲ್ಲದೇ ಮಾನಸಿಕ ಆರೋಗ್ಯಕ್ಕೂ ಸಹಕಾರಿ. ಯೋಗದಿಂದ ಮಾನಸಿಕ ಚಂಚಲತೆ ದೂರವಾಗುತ್ತದೆ. ವೈದ್ಯಕೀಯ ಕ್ಷೇತ್ರಕ್ಕೆ ಸವಾಲಾಗಿರುವ ಅದೆಷ್ಟೋ ಕಾಯಿಲೆಗಳು ಯೋಗದಿಂದ ವಾಸಿಯಾಗಿರುವ ಉದಾಹರಣೆಗಳಿವೆ. ಹಾಗಾಗಿ ಯೋಗವನ್ನು ಜೀವನದ ಭಾಗವಾಗಿಸಿಕೊಳ್ಳಬೇಕು. ಮಕ್ಕಳಿಗೆ ಯೋಗದ ಮಹತ್ವ ತಿಳಿಸುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ತಿಳಿಸಲಾಗಿದೆʼ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಭಾರತೀಯ ಪರಂಪರೆಯಲ್ಲಿ ಆರೋಗ್ಯಕ್ಕೆ ಹೆಚ್ಚಿನ ಒತ್ತು ಕೊಡಲಾಗಿದೆ. ಹಾಗಾಗಿಯೇ ಹಿರಿಯರು ನೂರು ವರ್ಷ ಬಾಳುತ್ತಿದ್ದರು. ಪ್ರಸ್ತುತ ದಿನಮಾನಗಳಲ್ಲಿ ಮೊಬೈಲ್, ಟಿವಿಗಳಲ್ಲಿ ಕಾಲಹರಣ ಮಾಡುತ್ತಿದ್ದು, ಆರೋಗ್ಯದ ಬಗ್ಗೆ ಕಾಳಜಿ ವಹಿಸದ ಕಾರಣ ಸಾಕಷ್ಟು ರೋಗಗಳು ಬಾಧಿಸುತ್ತಿವೆ. ಯುವಜನತೆ ಈ ಕುರಿತು ಎಚ್ಚರ ವಹಿಸಬೇಕುʼ ಎಂದರು.

ʼಆರೋಗ್ಯವೇ ಭಾಗ್ಯ ಎನ್ನುವಂತೆ ಆರೋಗ್ಯ ಸರಿಯಿದ್ದರೆ ಏನಾದರೂ ಸಾಧಿಸಬಹುದು. ಹಾಗಾಗಿ ಜೀವನಕ್ಕೆ ಯೋಗ ಅತ್ಯಂತ ಅವಶ್ಯಕ. ಪ್ರತಿದಿನ ಬೆಳಗ್ಗೆ 5 ಗಂಟೆಗೆ ಏಳಬೇಕು. ಯೋಗಾಭ್ಯಾಸ ಮಾಡಬೇಕು. ಯಾವುದೇ ದುಷ್ಚಟಗಳಿಗೆ ಬಲಿಯಾಗಬಾರದುʼ ಎಂದು ಶಾಸಕರು ಕಿವಿಮಾತು ಹೇಳಿದರು.

WhatsApp Image 2025 06 21 at 5.09.12 PM
ಶಾಸಕ ಪ್ರಭು ಚವ್ಹಾಣ ಹಾಗೂ ವಿದ್ಯಾರ್ಥಿಗಳು, ಸಾರ್ವಜನಿಕರು ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಯೋಗ ತರಬೇತಿ ನೀಡಿದ ಯೋಗಗುರು ಹಾವಗಿರಾವ ವಟಗೆ ಮಾತನಾಡಿ, ʼಜಗತ್ತಿನಲ್ಲಿ ಆರೋಗ್ಯಕ್ಕಿಂತ ದೊಡ್ಡ ಸಂಪತ್ತು ಮತ್ತೊಂದಿಲ್ಲ. ತಮ್ಮಲ್ಲಿರುವ ವಾಹನಗಳನ್ನು ಸ್ವಚ್ಛವಾಗಿಡುವುದು, ಸರ್ವಿಸಿಂಗ್ ಕೊಡುವುದು ಮಾಡಲಾಗುತ್ತದೆ. ಆದರೆ ಅತ್ಯಂತ ಮಹತ್ವವಾಗಿರುವ ಆರೋಗ್ಯಕ್ಕೆ ಕಾಳಜಿ ವಹಿಸದಿರುವುದು ದುರದೃಷ್ಟಕರ. ಪ್ರತಿದಿನ ಯೋಗಾಭ್ಯಾಸ ಮಾಡಿದರೆ ಯಾವುದೇ ರೋಗಗಳು ಬಳಿಗೆ ಸುಳಿಯುವುದಿಲ್ಲವೆಂದು ತಿಳಿಸಿದರು.

ಯೋಗಗುರು ಧನರಾಜ ವಲ್ಲೆಪೂರೆ, ಶಿವರಾಜ ಶೆಟಕಾರ, ಶಿವರಾಜ ಶಿವರಾಜ ಝುಲಂಡೆ ಅವರು ಯೋಗ ತರಬೇತಿ ನೀಡಿದರು.

ಯೋಗ ದಿನಾಚರಣೆಯ ಸಂಚಾಲಕರಾದ ಶಿವರಾಜ ಅಲ್ಮಾಜೆ, ಮುಖಂಡರಾದ ಶಿವಾಜಿರಾವ ಪಾಟೀಲ ಮುಂಗನಾಳ, ದಯಾನಂದ ಘೂಳೆ, ಡಾ.ವೈಜಿನಾಥ ಬುಟ್ಟೆ, ಸಚಿನ ರಾಠೋಡ, ಕೇರಬಾ ಪವಾರ, ಖಂಡೋಬಾ ಕಂಗಟೆ, ಪ್ರವೀಣ ಕಾರಬಾರಿ, ಮಹಾದೇವ ಅಲ್ಮಾಜೆ, ಸಂಜು ವಡೆಯರ್, ಯಾದು ಮೇತ್ರೆ, ಬಸವರಾಜ ಹಳ್ಳೆ, ಗುಂಡಪ್ಪ ಮುಧಾಳೆ, ಭರತ ಕದಂ, ಶ್ರೀನಿವಾಸ ಖೂಬಾ, ಸಿದ್ರಾಮಪ್ಪ ನಿಡೋದೆ, ಉದಯ ಸೋಲಾಪೂರೆ, ಇನಿಲ್ ಹೊಳಸಮುದ್ರೆ, ಹಣಮಂತ ನೇಳಗೆ, ಪ್ರದೀಪ ಪವಾರ, ಧನಾಜಿ ರಾಠೋಡ, ಅನೀಲ ಬಿರಾದಾರ, ಗೋವಿಂದ ಪಾಟೀಲ, ನಾಗನಾಥ ಮೋರ್ಗೆ, ಸಂಜು ಮುರ್ಕೆ, ರವೀಂದ್ರ ರೆಡ್ಡಿ, ಪ್ರಕಾಶ ಮೇತ್ರೆ, ಯೋಗೇಶ ಸುರನಾರ, ಸೀತಾರಾಮ ಕೋರೆಕಲ್, ಮಹೇಶ ಭಾಲ್ಕೆ, ಶೇಷಿರಾವ ರಾಠೋಡ, ಬಾಲಾಜಿ ಕಾಸ್ಲೆ, ಸೇರಿದಂತೆ ಇತರರು ಉಪಸ್ಥಿತರಿದ್ದರು.

ಬೀದರ್‌ | ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಯೋಗ ಅತ್ಯವಶ್ಯಕ : ಸೋಮನಾಥ ಪಾಟೀಲ

ಒತ್ತಡದ ಜೀವನದಲ್ಲಿ ಮನಷ್ಯನು ದೈಹಿಕ ಹಾಗೂ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಯೋಗವು ಅತ್ಯಂತ ಅವಶ್ಯಕವಾಗಿದ್ದು ಈ ನಿಟ್ಟಿಬಲ್ಲಿ ಯೋಗ ಪ್ರತಿಯೊಬ್ಬರ ಜೀವನದ ಭಾಗವಾಗಬೇಕಿದೆ ಎಂದು ಭಾರತೀಯ ಜನತಾ ಪಕ್ಷದ ಜಿಲ್ಲಾದ್ಯಕ್ಷ ಸೋಮನಾಥ ಪಾಟೀಲ ಹೇಳಿದರು.

ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಭಾರತೀಯ ಜನತಾ ಪಕ್ಷ ಬೀದರ ನಗರ ಮಂಡಲ ವತಿಯಿಂದ ನಗರದ ವಿಜ್ಞಾನ ವರ್ಧಿನಿ ವಿದ್ಯಾಲಯದ ಆವರಣದಲ್ಲಿ ಹಮ್ಮಿಕೊಂಡ ವಿಶ್ವ ಯೋಗ ದಿನಾಚಾರಣೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

WhatsApp Image 2025 06 21 at 5.09.38 PM

ʼವೇದ ಉಪನೀಷತ್ತಿನಲ್ಲು ಯೋಗದ ಉಲ್ಲೇಖವಿದೆ ಮತ್ತು ಶತಮಾನಗಳಿಂದ ನಮ್ಮ ಸಾಧು ಸಂತರು ಮತ್ತು ಆಧ್ಯಾತ್ಮಿಕ ಗುರುಗಳು ಯೋಗಾಭ್ಯಾಸ ಮಾಡುತ್ತಿದ್ದಾರೆ. ಯೋಗಗುರು ಬಾಬಾ ರಾಮದೇವ, ರವಿಶಂಕರ ಗೂರುಜಿ ಸೇರಿದಂತೆ ಅನೇಕ ಸಂತರು ಯೋಗವನ್ನು ಜಗತ್ತಿಗೆ ಪರಿಚಯಿಸಿದ್ದು, ನರೇಂದ್ರ ಮೋದಿ ಅವರು ಪ್ರಧಾನಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಯೋಗಕ್ಕೆ ವಿಶ್ವ ಮಾನ್ಯತೆ ದೊರೆತಿದ್ದು ಜಗತ್ತಿನಾದ್ಯಂತ ಯೋಗ ದಿನ ಆಚರಿಸುತ್ತಿರುವುದು ಭಾರತೀಯರೆಲ್ಲರಿಗೆ ಹೆಮ್ಮೆಯ ವಿಷಯʼ ಎಂದು ಹೇಳಿದರು.

ಐ.ಎನ್.ಓ ಜಿಲ್ಲಾದ್ಯಕ್ಷ ಗೋರಖನಾಥ ಕುಂಬಾರ ಹಾಗೂ ಉಪಾದ್ಯಕ್ಷ ನಿಲಮ್ಮಾ ರೂಗನ್ ಯೋಗಾಭ್ಯಾಸ ನಡೆಸಿಕೊಟ್ಟರು.

ಇದನ್ನೂ ಓದಿ : ಬೀದರ್‌ ಕೋಟೆಯಲ್ಲಿ ವಿಶ್ವ ಯೋಗ ದಿನಾಚರಣೆ ; ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಭಾಗಿ

ಈ ಸಂದರ್ಭದಲ್ಲಿ ಮಾಜಿ ಕೇಂದ್ರ ಸಚಿವ ಭಗವಂತ ಖೂಬಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪೀರಪ್ಪಾ ಔರಾದೆ, ನಗರ
ಅಧ್ಯಕ್ಷ ಶಶಿಧರ ಹೋಸಳ್ಳಿ, ಯೋಗ ದಿನಾಚರಣೆ ಅಭಿಯಾನದ ಜಿಲ್ಲಾ ಸಂಯೋಜಕ ಗುರುನಾಥ ರಾಜಗೀರಾ, ಪ್ರಮುಖರಾದ ಬಾಬು ವಾಲಿ, ಜಯಕುಮಾರ ಕಾಂಗೆ, ರಾಜಶೇಖರ ನಾಗಮೂರ್ತಿ, ಗಣೇಶ ಭೋಸ್ಲೆ, ಸುನೀಲ ಗೌಳಿ ಸೇರಿದಂತೆ ಇತರರಿದ್ದರು ಎಂದು ಬಿಜೆಪಿ ಜಿಲ್ಲಾ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...